ಜೂಜಿಗಾಗಿ ಕಳ್ಳತನಕ್ಕಿಳಿದವನನ್ನ ಬಂಧಿಸಿದ ಬೆಂಗ್ಳೂರು ಪೊಲೀಸರು
ಬೆಂಗಳೂರು, ಫೆಬ್ರವರಿ, 08: ಇತ್ತೀಚಿನ ದಿನಗಳಲ್ಲಿ ಕಳ್ಳತನ ಪ್ರಕರಣಗಳು ಹೆಚ್ಚಾಗುತ್ತಲೇ ಇವೆ. ಹಾಗಂತಾ ಪೊಲೀಸರೇನು ಸಮ್ನೆ ಕುಳಿತುಕೊಂಡಿಲ್ಲ. ಇಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ಕಳ್ಳರನ್ನು ಹೆಡೆಮುರಿ ಕಟ್ಟುವಂತಹ ಕೆಲಸ ಮಾಡುತ್ತಿದ್ದಾರೆ. ಹಾಗೆಯೇ ಇದೀಗ ಜೂಜಿಗಾಗಿ ಕಳ್ಳತನಕ್ಕೆ ಇಳಿದವನನ್ನ ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.
ಬೀದರ್ನಿಂದ ಬೆಂಗಳೂರಿಗೆ ರೈಲಿನಲ್ಲಿ ಬಂದು ಸರಗಳವು ಮಾಡುತ್ತಿದ್ದ ಆರೋಪಿಯನ್ನು ಇದೀಗ ಪೊಲೀಸರು ಬಂಧಿಸಿ ಹೆಡೆಮುರಿ ಕಟ್ಟಿದ್ದಾರೆ. ಕಿರಣ್ ಬಂಧಿತ ಆರೋಪಿಯಾಗಿದ್ದಾನೆ ಎಂದು ತಿಳಿದುಬಂದಿದೆ.

ಕಿರಣ್ ಆನ್ಲೈನ್ ರಮ್ಮಿ ಜೂಜಾಟಕ್ಕೆ ದಾಸನಾಗಿದ್ದ. ರಮ್ಮಿ ಆಟ ಆಡಲು ಹಣ ಇಲ್ಲದಿದ್ದದ್ದಕ್ಕೆ ಕೆಲಸ ಹುಡುಕಿ ಬೆಂಗಳೂರಿಗೆ ಬಂದಿದ್ದ. ಬೀದರ್ನಿಂದ ಬೆಂಗಳೂರಿಗೆ ಬಂದವನಿಗೆ ಎಲ್ಲಿಯೂ ಕೆಲಸ ಸಿಕ್ಕಿರಲಿಲ್ಲ. ಕಳೆದ ಜನವರಿ 26ರಂದು ಜಯನಗರದ ಶಾಕಾಂಬರಿನಗರದಲ್ಲಿ ವೃದ್ದೆಯ ಸರ ಕಸಿದು ಪರಾರಿ ಆಗಿದ್ದ.
ಸರ ಎಗರಿಸುತ್ತಿದ್ದಂತೆ ಬೆಂಗಳೂರಿನಿಂದ ರೈಲಿನ ಮೂಲಕ ಬೀದರ್ಗೆ ತೆರಳಿದ್ದ. ಕಿರಣ್ ಕಳ್ಳತನದ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸರ ಕದ್ದು ಬ್ಯಾಗ್ನಲ್ಲಿ ಇಟ್ಟುಕೊಂಡು ಕಿರಣ್ ಪರಾರಿಯಾಗಿದ್ದ. ಬೆಂಗಳೂರಿನಲ್ಲಿ ಕದ್ದ ಸರವನ್ನು ಬೀದರ್ನಲ್ಲಿ ಅಡವಿಟ್ಟಿದ್ದ. ಇದರಿಂದ ಬಂದ ಹಣವನ್ನು ಕಿರಣ್ ಆನ್ ಲೈನ್ ರಮ್ಮಿ ಜೂಜಾಡಿದ್ದು, ಸದ್ಯ ಈತನನ್ನು ಜಯನಗರ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ಹಣ ದೋಚಿದ ಕಳ್ಳರು: ಬೀದರ್ನಲ್ಲಿ ಇತ್ತೀಚೆಗಷ್ಟೇ ಕಿಡಿಗೇಡಿಗಳು ಎಸ್ಬಿಐ ಬ್ಯಾಂಕ್ ಎಟಿಎಂಗೆ ಹಣ ತುಂಬಿಸುವ ಸಿಬ್ಬಂದಿ ಮೇಲೆ ಸಿನಿಮೀಯ ರೀತಿಯಲ್ಲಿ ಗುಂಡಿನ ದಾಳಿ ನಡೆಸಿದ್ದರು. ಅಲ್ಲದೆ, ಈ ವೇಳೆ 93,00,000 ರೂಪಾಯಿ ಹಣ ದೋಚಿಕೊಂಡು ಪರಾರೊಯಾಗಿದ್ದರು. ಈ ಪ್ರಕರಣ ಮಾಸುವ ಮುನ್ನವೇ ಜನವರಿ 17ರಂದು ಇಂತಹದ್ದೇ ಘಟನೆಯೊಂದು ಮಂಗಳೂರಿನಲ್ಲೂ ನಡೆದಿತ್ತು.
ದಕ್ಷಿಣ ಕನ್ನಡ ಜಿಲ್ಲೆ ಉಳ್ಳಾಲ ತಾಲೂಕಿನ ಕೋಟೆಕಾರು ಬ್ಯಾಂಕ್ನಲ್ಲಿ ಈ ದರೋಡೆ ನಡೆದಿದೆ. ಹಾಡಹಗಲೇ 5 ಮಂದಿ ಬ್ಯಾಂಕ್ಗೆ ನುಗ್ಗಿದ್ದು, ಸಿನಿಮೀಯ ಶೈಲಿಯಲ್ಲಿ ಮಾರಕಾಸ್ತ್ರಗಳನ್ನು ತೋರಿಸಿ ಚಿನ್ನ ಒಡವೆ, ನಗದುಗಳೆಲ್ಲವನ್ನ ದೋಚಿಕೊಂಡು ಪರಾರಿಯಾಗಿದ್ದರು.
ಈ 5 ಮಂದಿ ದರೋಡೆಕೋರರು ಫಿಯೇಟ್ ಕಾರಿನಲ್ಲಿ ಬಂದಿದ್ದು, ಅಲ್ಲಿನ ಸಿಬ್ಬಂದಿಗೆ ಮಾರಕಾಸ್ತ್ರ ತೋರಿಸಿ ದರೋಡೆ ನಡೆಸಿದ್ದಾರೆ. ಬಳಿಕ ಈ ತಂಡ ಮಂಗಳೂರಿನ ಕಡೆಗೆ ಪರಾರಿಯಾಗಿದ್ದಾರೆ. ಬಳಿಕ ಸ್ಥಳಕ್ಕೆ ಆಗಮಿಸಿದ ಪೊಲೀಸ್ ಪಡೆ ಪರಿಶೀಲನೆ ನಡೆಸಿದ್ದು, ಇದೀಗ ದರೋಡೆಕೋರರಿಗಾಗಿ ಶೋಧಕಾರ್ಯ ಮುಂದುವರೆಸಿದ್ದಾರೆ ಎಂದು ತಿಳಿದುಬಂದಿದೆ.
ಇನ್ನು ಬೀದರ್ನಲ್ಲಿ ಗುರುವಾರ (ಜನವರಿ 16) ಬೆಳಗ್ಗೆ ಎಟಿಎಂಗೆ ಹಣ ತುಂಬಿಸುವ ಬ್ಯಾಂಕ್ ಸಿಬ್ಬಂದಿ ಮೇಲೆ ಗುಂಡಿನ ದಾಳಿ ನಡೆಸಿ ಹಣದೊಂದಿಗೆ ಪರಾರಿಯಾಗಿದ್ದ ಆರೋಪಿಗಳು ಹೈದರಾಬಾದ್ನಲ್ಲಿ ಪತ್ತೆಯಾಗಿದ್ದಾರೆ. ಮೂವರು ದರೋಡೆಕೋರರಲ್ಲಿ ಓರ್ವನನ್ನು ಪೊಲೀಸರು ಬಂಧಿಸಿದ್ದು, ಮತ್ತಿಬ್ಬರು ತಪ್ಪಿಸಿಕೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
-
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ 3 ಜಾಗ ನಿಗದಿ: ಡಿಸಿಎಂ ಡಿ.ಕೆ ಶಿವಕುಮಾರ್ ಅಪ್ಡೇಟ್ಸ್ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್












Click it and Unblock the Notifications