Bengaluru Crime: ಕೋರಮಂಗಲದ ಒಂದೇ ದಿನ 9 ಮನೆಗೆ ಕನ್ನ ಹಾಕಿದ ಖದೀಮರು
ಬೆಂಗಳೂರು, ಮೇ 09: ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ ಎರಡೂ ಹಂತದ ಮತದಾನಗಳು ಮುಕ್ತಾಯವಾಗಿದೆ. ಚುನಾವಣಾ ಮತದಾನ ಹಿನ್ನೆಲೆಯಲ್ಲಿ ಬಹುತೇಕ ಪೊಲೀಸರು ಚುನಾವಣಾ ಕರ್ತವ್ಯದಲ್ಲಿದ್ದು, ಇದನ್ನೇ ಬಂಡವಾಳ ಮಾಡಿಕೊಂಡ ಕಳ್ಳರು ಇದೇ ಸಮಯದಲ್ಲಿ ಸಾಲು ಸಾಲು ಮನೆಗೆ ಕನ್ನ ಹಾಕಿದ್ದಾರೆ.
ಕೋರಮಂಗಲದಲ್ಲಿ ಮೇ 4ರಂದು ಒಂದೇ ರಾತ್ರಿಯಲ್ಲಿ ಒಂಬತ್ತು ಮನೆಗಳಲ್ಲಿ ಕಳ್ಳತನ ನಡೆದಿದ್ದು, ಇಲ್ಲಿನ ನಿವಾಸಿಗಳು ತಮ್ಮ ಸುರಕ್ಷತೆಯ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ. ಹೆಚ್ಚಿನ ಪೊಲೀಸ್ ಸಿಬ್ಬಂದಿಯನ್ನು ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಿದ್ದರಿಂದ ರಾತ್ರಿ ಗಸ್ತು ಕಡಿಮೆಯಾಗಿತ್ತು. ಇದನ್ನೇ ಬಂಡವಾಳ ಮಾಡಿಕೊಂಡ ಕಳ್ಳರು ಒಂದೇ ದಿನ ಒಂಬತ್ತು ಮನೆಗಳಲ್ಲಿ ಕಳ್ಳತನ ಮಾಡಿದ್ದಾರೆ.

ಈ ಬಗ್ಗೆ ಕೋರಮಂಗಲ 1ನೇ ಬ್ಲಾಕ್ ನಿವಾಸಿ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಪದ್ಮಶ್ರೀ ಬಲರಾಮ್ ಮಾತನಾಡಿ, 'ಬೆಳಗಿನ ಜಾವ 1 ರಿಂದ 4.30 ರ ನಡುವೆ ಇಬ್ಬರು ವ್ಯಕ್ತಿಗಳು ಮನೆಗಳಿಗೆ ಕಳ್ಳತನವಾಗಿರುವ ಸ್ಥಳದ ಸುತ್ತ ಓಡಾಡುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಕಂಡುಬಂದಿದೆ. ಅವರಲ್ಲಿ ಒಬ್ಬರು ಮನೆಯ ಕಾಂಪೌಂಡ್ ಗೋಡೆಯನ್ನು ಜಿಗಿಯುವುದು ದೃಶ್ಯಾವಳಿಗಳಲ್ಲಿ ಕಂಡುಬಂದಿದೆ. ಇನ್ನೊಬ್ಬರು ಹೊರಗೆ ಕಾವಲು ಕಾಯುತ್ತಿರುವುದು ರೆಕಾರ್ಡ್ ಆಗಿದೆ ಎಂದರು.
ಕಾಂಪೌಂಡ್ ಗೋಡೆ ಹಾರಿ ನಂತರ ಕಳ್ಳ ಶೂಗಳನ್ನು ಹುಡುಕಿ ಕದ್ದು ಪರಾರಿಯಾಗಿದ್ದಾನೆ. ಪ್ರತಿ ಮನೆಯಿಂದ ಐದರಿಂದ ಆರು ಜೋಡಿ ದುಬಾರಿ ಬೆಲೆಯ ಸ್ಪೋರ್ಟ್ಸ್ ಶೂಗಳು ಕಳ್ಳತನವಾಗಿವೆ. ಅಮೆರಿಕದಿಂದ ಆರ್ಡರ್ ಮಾಡಲಾಗಿದ್ದ 30,000 ರೂಪಾಯಿ ಬೆಲೆ ಬಾಳುವ ಚಪ್ಪಲಿಯೂ ಕಳ್ಳತನವಾಗಿವೆ ಎಂದು ತಿಳಿಸಿದೆ.
ಮತ್ತೊಂದು ಮನೆಯೊಂದರಲ್ಲಿದ್ದ ಎರಡು ದ್ವಿಚಕ್ರ ವಾಹನಗಳನ್ನೂ ಕಳ್ಳರು ಕದ್ದೊಯ್ದಿದ್ದಾರೆ. ಈ ಸರಣಿ ಕಳ್ಳತನದ ಬಗ್ಗೆ ನಾವು ಪೊಲೀಸರಿಗೆ ಮತ್ತು ಸ್ಥಳೀಯ ಶಾಸಕ ರಾಮಲಿಂಗಾ ರೆಡ್ಡಿ ಅವರಿಗೆ ದೂರು ನೀಡಿದ್ದೇವೆ. ಸದ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಹೆಚ್ಚುವರಿ 25 ಸಿಸಿಟಿವಿ ಕ್ಯಾಮೆರಾಗಳನ್ನು ವ್ಯವಸ್ಥೆಗೊಳಿಸಿ, ಪೊಲೀಸ್ ಗಸ್ತು ಹೆಚ್ಚಿಸುವ ಭರವಸೆ ನೀಡಿದ್ದಾರೆ ಎಂದು ಬಲರಾಮ್ ಹೇಳಿದರು.
ಇನ್ನು ಈ ಪ್ರಕರಣದ ಬಗ್ಗೆ ಕೋರಮಂಗಲ ಠಾಣೆಯ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಾತನಾಡಿದ್ದು, ಸಾಮಾನ್ಯವಾಗಿ ಈ ಪ್ರದೇಶಗಳಲ್ಲಿ ಪೊಲೀಸ್ ಗಸ್ತು ಹೆಚ್ಚಿದೆ. ಆದರೆ ಕೆಲವು ಸಿಬ್ಬಂದಿ ಚುನಾವಣಾ ಕರ್ತವ್ಯದಲ್ಲಿದ್ದ ಕಾರಣ ಈ ಘಟನೆ ನಡೆದಿದೆ. ಸದ್ಯ ರಾಜ್ಯದಲ್ಲಿ ಚುನಾವಣೆ ಮುಗಿದಿದ್ದು, ಈ ಪ್ರದೇಶಗಳಲ್ಲಿ ರಾತ್ರಿ ಗಸ್ತು ತಿರುಗಲು ಹೆಚ್ಚಿನ ಒತ್ತು ನೀಡಲಾಗುವುದು ಎಂದು ತಿಳಿಸಿದ್ದಾರೆ.
-
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
ಬೆಂಗಳೂರು-ಮಂಗಳೂರು ಮಧ್ಯ ನಿತ್ಯ ತಡರಾತ್ರಿ ವಿಮಾನ ಸೇವೆ, ಯಾವಾಗ? ಸಮಯ-ವೇಳಾಪಟ್ಟಿ ಇಲ್ಲಿದೆ -
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers












Click it and Unblock the Notifications