ಯಾವ ಮುಖ ಇಟ್ಟುಕೊಂಡು ಆರ್ಆರ್ ನಗರದಲ್ಲಿ ಮತ ಕೇಳ್ತಾರೆ?: ಕುಮಾರಸ್ವಾಮಿ ಪ್ರಶ್ನೆ!
ಬೆಂಗಳೂರು, ಅ. 14: ಉಪ ಚುನಾವಣೆಯಲ್ಲಿ ಅದರಲ್ಲೂ ಆರ್ ಆರ್ ನಗರದಲ್ಲಿ ಕಾಂಗ್ರೆಸ್ ಆಟ ನಡೆಯುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಆರ್ ಆರ್ ನಗರ ಜೆಡಿಎಸ್ ಅಭ್ಯರ್ಥಿಯಾಗಿ ವಿ. ಕೃಷ್ಣಮೂರ್ತಿ ನಾಮಪತ್ರ ಸಲ್ಲಿಸಿದ ನಂತರ ಮಾತನಾಡಿದ ಅವರು, ಈ ಬಾರಿ ನಾನು ನಿಷ್ಟಾವಂತ ಕಾರ್ಯಕರ್ತನ ಪರ ಇರ್ತೇನೆ.
ಜೆಡಿಎಸ್ ಅಭ್ಯರ್ಥಿ ಕೃಷ್ಣಮೂರ್ತಿ ಪರ ಪ್ರಚಾರ ಮಾಡುತ್ತೇನೆ. ಈ ಕ್ಷೇತ್ರ ಉಸ್ತುವಾರಿ ನಾನೇ ವಹಿಸಿಕೊಂಡಿದ್ದೇನೆ. ಆರ್.ಆರ್ ನಗರ ಕ್ಷೇತ್ರ 2008ರಲ್ಲಿ ರಚನೆಯಾಗಿತ್ತು. ಈವೆರೆಗೆ ಬಿಜೆಪಿ ಒಂದು ಬಾರಿ, ಕಾಂಗ್ರೆಸ್ ಎರಡು ಬಾರಿ ಗೆಲುವು ಸಾಧಿಸಿವೆ ಎಂದರು.

ಆರ್.ಆರ್ ನಗರದಲ್ಲಿ ಕಾಂಗ್ರೆಸ್ ಆಟ ನಡೆಯಲ್ಲ. ಕಾಂಗ್ರೆಸ್ ನಾಯಕರಿಂದ ಬೆಂಕಿ ಹಚ್ಚುವ ಕೆಲಸ ನಡೆಯುತ್ತಿದೆ. ಯಾವ ಮುಖ ಇಟ್ಟುಕೊಂಡು ಮತ ಕೇಳುತ್ತಾರೆ ಎಂದು ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು. ಇದೇ ವೇಳೆ ಬಿಜೆಪಿ ವಿರುದ್ದವೂ ಕಿಡಿಕಾರಿದ ಅವರು, ಕೊರೊನಾ ನಿಯಂತ್ರಿಸುವಲ್ಲಿ ಬಿಜೆಪಿ ವಿಫಲವಾಗಿದೆ. ಬಿಜೆಪಿಯವರು ಗೆಲ್ಲುವ ಭ್ರಮೆಯಲ್ಲಿದ್ದಾರೆ ಎಂದು ಟೀಕಿಸಿದರು.












Click it and Unblock the Notifications