2020 ರಲ್ಲಿ ಬಿಎಸ್ವೈ; ರಾಜಗುರು ದ್ವಾರಕನಾಥ್ ನುಡಿದ ಭವಿಷ್ಯ
ಬೆಂಗಳೂರು ಡಿಸೆಂಬರ್ 31: 'ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ 2020 ರ ನಂತರದ ರಾಜಕೀಯ ಭವಿಷ್ಯಕ್ಕೆ ಯಾವುದೇ ತೊಂದರೆ ಇಲ್ಲ. ಅವರು ಮುಂದಿನ ಮೂರು ವರ್ಷಗಳ ಕಾಲ ಕರ್ನಾಟಕದ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ' ಎಂದು ಖ್ಯಾತ ಜ್ಯೋತಿಷಿ 'ರಾಜಗುರು' ದ್ವಾರಕನಾಥ್ ಭವಿಷ್ಯ ನುಡಿದಿದ್ದಾರೆ.
'ಯಡಿಯೂರಪ್ಪ ಅವರು ಕಲಬುರಗಿ ಜಿಲ್ಲೆಯ ಗಾಣಗಾಪುರದ ದತ್ತ ದೇವರ ದರ್ಶನ ಮಾಡಿ ಬಂದ ನಂತರ ಅವರ ಸಂಕಷ್ಟಗಳು ದೂರವಾಗಿವೆ. ಮುಂದಿನ ಮೂರು ವರ್ಷ ಯಾವುದೇ ಅಡೆತಡೆ ಇಲ್ಲದೇ ಅಧಿಕಾರ ಪೂರ್ಣಗೊಳಿಸಲಿದ್ದಾರೆ. ಸದ್ಯ ಯಾವುದೇ ದುಷ್ಟ ಶಕ್ತಿಗಳ ಕಾಡಾಟ ಯಡಿಯೂರಪ್ಪನವರಿಗೆ ಇಲ್ಲ. ಒಂದೆರಡು ತಿಂಗಳು ಎದುರಾಗುವ ಅಡ್ಡಿಗಳನ್ನು ನಾಜೂಕಾಗಿ ನಿಭಾಯಿಸಿದರೆ ಮುಗಿಯಿತು.
ಮುಂದಿನ ಮೂರು ವರ್ಷ ರಾಜಕೀಯದಲ್ಲಿ ಅವರನ್ನು ತಡೆಯುವವರು ಯಾರೂ ಇಲ್ಲ. ಯಡಿಯೂರಪ್ಪ ಗಾಣಗಾಪುರದ ದತ್ತ ದೇವಸ್ಥಾನದ ಅಭಿವೃದ್ಧಿಗೆ ಘೋಷಿಸಿರುವ 10 ಕೋಟಿ ರುಪಾಯಿ ಸದ್ಬಳಕೆಯಾಗಬೇಕು. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸದ್ಯ ಕಂಟಕ ಕಾಡುತ್ತಿದೆ. ಅವರೂ ಸಹ ಗಾಣಗಾಪುರದ ದತ್ತ ದೇವರ ದರ್ಶನ ಮಾಡಿಕೊಂಡು ಹೋಗುವುದು ಉತ್ತಮ' ಎಂದು ಹೇಳಿದ್ದಾರೆ.

ಬೆಂಗಳೂರಿನ ಖ್ಯಾತ ಜ್ಯೋತಿಷಿ ರಾಜಗುರು ದ್ವಾರಕನಾಥ್ ಅವರು ಹಲವು ರಾಜಕೀಯ ಮುಖಂಡರ ಭವಿಷ್ಯವನ್ನು ಆಗಾಗ ಹೇಳುತ್ತಿರುತ್ತಾರೆ. ಕೆಲವು ಬಾರಿ ಅವರು ನುಡಿದ ರಾಜಕೀಯ ನಾಯಕರ ಭವಿಷ್ಯ ಸತ್ಯವಾಗಿದೆ. ಯಡಿಯೂರಪ್ಪ ಸೇರಿದಂತೆ, ಡಿ.ಕೆ.ಶಿವಕುಮಾರ್, ಎಚ್ ಡಿ ದೇವೇಗೌಡ, ಕುಮಾರಸ್ವಾಮಿ ಅವರಿಗೂ ದ್ವಾರಕನಾಥ್ ಭವಿಷ್ಯ ನುಡಿದು, ಸ್ಟಾರ್ ಜ್ಯೋತಿಷಿ ಎನಿಸಿಕೊಂಡಿದ್ದಾರೆ.
-
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ












Click it and Unblock the Notifications