Get Updates
Get notified of breaking news, exclusive insights, and must-see stories!

ದೇವರನ್ನು ನೋಡಲು ಲಿಂಗಭೇದ ಇರಬಾರದು: ಸಿದ್ದರಾಮಯ್ಯ

ಬೆಂಗಳೂರು, ನವೆಂಬರ್ 19: ದೇವರನ್ನು ನೋಡಲು ಲಿಂಗಭೇದ ಇರಬಾರದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು, ಶಬರಿಮಲೆಗೆ ಮಹಿಳೆ ಪ್ರವೇಶದ ಪರ ದನಿಗೂಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇವರ ಹೆಸರಿನಲ್ಲಿ ಬಿಜೆಪಿಯು ಭಾವನಾತ್ಮಕ ವಿಚಾರಗಳನ್ನು ಮುಂದೆ ತಂದು ಭಾವನಾತ್ಮಕವಾಗಿ ಜನರನ್ನು ಮರುಳು ಮಾಡುವ ಯತ್ನ ಸದಾ ಮಾಡುತ್ತಿದೆ ಎಂದು ಅವರು ಆರೋಪಿಸಿದರು.

ಪುರುಷರಿಗೆ ಒಬ್ಬ ದೇವರು, ಮಹಿಳೆಯರಿಗೆ ಮತ್ತೊಬ್ಬ ದೇವರು ಅಂತಾ ಇದಾರಾ? ಅದು ಸಾಧ್ಯವೇ ಇಲ್ಲ. ದೇವರು ಎಲ್ಲರಿಗೂ ಒಂದೇ. ದೇವರು ಎಲ್ಲ ಕಡೆ ಇದ್ದಾರೆ. ಎಲ್ಲರಿಗೂ ದೇವರು ಸಮಾನ ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.

There should be gender equality in temple: Siddaramaiah about Sabarimala

ಸಮಸ್ಯೆಗಳ ಬಗ್ಗೆ ಬಿಜೆಪಿ ಚರ್ಚೆ ಮಾಡುವುದಿಲ್ಲ ಆದರೆ ಭಾವನಾತ್ಮಕ ವಿಷಯಗಳನ್ನು ಮುಂದೆ ಇಟ್ಟುಕೊಂಡು ಜನರನ್ನು ಮರುಳು ಮಾಡುವ ಯತ್ನ ಮಾಡುತ್ತದೆ ಎಂದು ಆರೋಪಿಸಿದರು.

ಶಬರಿಮಲೆ ವಿವಾದದ ಬಗ್ಗೆ ಕೇರಳದಲ್ಲಿ ಕಾಂಗ್ರೆಸ್‌ ನಿರ್ಲಿಪ್ತವಾಗಿದೆ ಆದರೆ ಇತ್ತ ಕರ್ನಾಟಕದಲ್ಲಿ ಸಿದ್ದರಾಮಯ್ಯ ಅವರು ಮಹಿಳೆಯರ ಶಬರಿಮಲೆ ಪ್ರವೇಶಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+