ದಿಲ್ಲಿಯಿಂದ ಬೆಂಗಳೂರಿಗೆ ಕಳ್ಳತನ ಮಾಡೋಕೆ ವಿಮಾನದಲ್ಲಿ ಬರುತ್ತಿದ್ದ!
Recommended Video

ಬೆಂಗಳೂರು, ಸೆಪ್ಟೆಂಬರ್ 17: ಕಳ್ಳತನ ಮಾಡಲು ದೆಹಲಿಯಿಂದ ಬೆಂಗಳೂರಿಗೆ ವಿಮಾನದಲ್ಲಿ ಬರುತ್ತಿದ್ದ ಕಳ್ಳನನ್ನು ಪೊಲೀಸರು ಭಾನುವಾರ ಬಂಧಿಸಿದ್ದಾರೆ.
ಆತನಿಂದ ಸುಮಾರು 45 ಲಕ್ಷ ರೂ, ಮೌಲ್ಯದ ಒಂದೂವರೆ ಕೆಜಿಯಷ್ಟು ಚಿನ್ನಾಭರಣ, 2 ಕೆಜಿ ಬೆಳ್ಳಿ ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ, ದೆಹಲಿ ನಿವಾಸಿ ಹರ್ಮಾನ್ ಖಾನ್(26) ಬಂಧಿತ.
ಈತ ಹರಿಯಾಣ ಪಂಜಾಬ್ ನಲ್ಲಿ ಒಂದು ಗ್ಯಾಂಗ್ ತಯಾರು ಮಾಡಿದ್ದ, ಗ್ಯಾಂಗ್ ನಲ್ಲಿರುವ ಸದಸ್ಯರನ್ನು ಬೇರೆ ಬೇರೆ ಕಡೆಗೆ ಕಳುಹಿಸುತ್ತಿದ್ದ, ಬೀಗ ಹಾಕಿರುವ ಮನೆಯಲ್ಲಿ ಕಳ್ಳತನ ಮಾಡುತ್ತಿದ್ದ, ಬೆಂಗಳೂರಿಗೆ ಮೂರು ತಿಂಗಳಿಗೊಮ್ಮೆ ದೆಹಲಿಯಿಂದ ಬಂದು ಕಳ್ಳತನ ಮಾಡುತ್ತಿದ್ದ ಎನ್ನುವುದು ವಿಚಾರಣೆ ಬಳಿಕ ಬೆಳಕಿಗೆ ಬಂದಿದೆ.
ದೆಹಲಿ ಮತ್ತು ಮುಂಬೈನಿಂದ ವಿಮಾನ ಹತ್ತಿದರೆ ಚೆನ್ನೈಗೆ ಬಂದು ಇಳಿದುಕೊಳ್ಳುತ್ತಿದ್ದ, ನಗರದ ಐಷಾರಾಮಿ ಹೋಟೆಲ್ ಗಳಲ್ಲಿ ಉಳಿಯುತ್ತಿದ್ದ, ಹೋಟೆಲ್ ನಿಂದ ಬರುವಾಗ ಕ್ಯಾಬ್ ಗಳನ್ನು ಬುಕ್ ಮಾಡುತ್ತಿದ್ದ, ಮೊದಲೇ ನಿರ್ಧರಿಸಿಕೊಂಡ ಪ್ರದೇಶಕ್ಕೆ ಕ್ಯಾಬ್ ನಲ್ಲಿ ಬರುತ್ತಿದ್ದ ಈತ ನಂತರ ದ್ವಿಚಕ್ರ ವಾಹನದಲ್ಲಿ ಖಾಲಿ ಮನೆಗಳನ್ನು ಗುರುತು ಹಿಡಿಯಲು ತೆರಳುತ್ತಿದ್ದ ಎನ್ನಲಾಗಿದೆ.

ಕೃತ್ಯ ಎಸಗಿದ ನಂತರ ಒಂದಷ್ಟು ಚಿನ್ನಾಭರಣಗಳನ್ನು ಬೆಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದ, ಉಳಿದಿದ್ದನ್ನು ತನ್ನದೇ ಆಭರಣ ಎನ್ನುವಂತೆ ಧರಿಸಿ ವಿಮಾನದಲ್ಲಿ ತೆರಳುತ್ತಿದ್ದ, ಉಳಿದವುಗಳನ್ನು ತನ್ನ ಗೆಳತಿ ಅಥವಾ ಕುಟುಂಬ ಸದಸ್ಯರನ್ನು ಕರೆಸಿ ರೈಲಿನ ಮೂಲಕ ದೆಹಲಿಗೆ ರವಾನಿಸುತ್ತಿದ್ದ ಎಂದು ತಿಳಿದು ಬಂದಿದೆ.
ಆತ ಬ್ಯಾಗ್ ಹಾಕಿಕೊಂಡು, ಪುಸ್ತಕ ಹಿಡಿದುಕೊಂಡು ವಿದ್ಯಾರ್ಥಿ ಸೋಗಿನಲ್ಲಿ ಬಂದು ಕೈಚಳಕ ತೋರಿಸುತ್ತಿದ್ದ.
-
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ












Click it and Unblock the Notifications