ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಹೆಚ್ಚು ದಿನ ಪಾರ್ಕಿಂಗ್‌ ಲಾಟ್‌ನಲ್ಲಿ ವಾಹನ ನಿಲ್ಲಿಸಬೇಡಿ

|
Google Oneindia Kannada News

ಬೆಂಗಳೂರು, ಜ. 7 : ಒಂದು ವಾರಕ್ಕೂ ಹೆಚ್ಚು ಕಾಲ ಸಾರ್ವಜನಿಕ ವಾಹನ ನಿಲುಗಡೆ ಸ್ಥಳದಲ್ಲಿ ನಿಲ್ಲಿಸಿರುವ ವಾಹನಗಳಿಗೆ ಪೊಲೀಸರು ಸರಪಳಿ ಹಾಕಿ ಬೀಗ ಜಡಿಯಲಿದ್ದಾರೆ. ಶುಕ್ರವಾರದಿಂದ ನಗರ ಪೊಲೀಸರು ಈ ಕಾರ್ಯಾಚರಣೆ ಆರಂಭಿಸಲಿದ್ದಾರೆ.

ಬೆಂಗಳೂರು ನಗರದಲ್ಲಿ ಹೆಚ್ಚುತ್ತಿರುವ ವಾಹನ ಕಳವು ಹಾಗೂ ಸರ­ಗಳ್ಳತನಕ್ಕೆ ಕಡಿವಾಣ ಹಾಕಲು ಮುಂದಾಗಿರುವ ಪೊಲೀಸರು ಇಂತಹ ಕ್ರಮ ತೆಗೆದುಕೊಳ್ಳಲು ಸಿದ್ಧತೆ ನಡೆಸಿದ್ದಾರೆ. ಇದರ ಅನ್ವಯ ಒಂದು ವಾರಕ್ಕಿಂತ ಹೆಚ್ಚು ಕಾಲ ವಾಹನ ಪಾರ್ಕಿಂಗ್‌ ಲಾಟ್‌ನಲ್ಲಿದ್ದರೆ, ಅದನ್ನು ಜಪ್ತಿ ಮಾಡಲಿದ್ದಾರೆ.

Parking

ಪೊಲೀಸರು ವಾಹನಗಳನ್ನು ಜಪ್ತಿ ಮಾಡಿದ 10 ದಿನಗಳ ಒಳಗೆ ಮಾಲೀಕರು ಸೂಕ್ತ ದಾಖಲೆಗಳನ್ನು ಒದಗಿಸಿ ತಮ್ಮ ವಾಹನ ಪಡೆದು­ಕೊಳ್ಳಬೇಕು. ಇಲ್ಲವಾದಲ್ಲಿ ಅದನ್ನು ಬಹಿರಂಗ ಹರಾಜು ಮೂಲಕ ವಿಲೇವಾರಿ ಮಾಡಲು ನಿರ್ಧರಿಸಿದ್ದಾರೆ. ಶುಕ್ರವಾರದಿಂದ ಈ ಕಾರ್ಯಾಚರಣೆ ನಡೆಯಲಿದೆ. [ಸಂಚಾರಿ ನಿಯಮ ಉಲ್ಲಂಘಿಸಿದರೆ ಡಿಎಲ್ ಅಮಾನತು]

ಅಪರಾಧ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಪಿ.ಹರಿಶೇಖರನ್ ಅವರು ಈ ಕುರಿತು ಮಾಹಿತಿ ನೀಡಿದ್ದು, ನಗರ ರೈಲು ನಿಲ್ದಾಣ, ಮೆಜೆಸ್ಟಿಕ್, ಸಿಟಿ ಮಾರು­ಕಟ್ಟೆ, ಯಶವಂತಪುರ, ಮೈಸೂರು ರಸ್ತೆ, ಸ್ಯಾಟಲೈಟ್ ಬಸ್‌ ನಿಲ್ದಾಣ, ಕೆಂಗೇರಿ, ಶಾಂತಿನಗರ ಬಸ್‌ ನಿಲ್ದಾಣ, ಶಿವಾಜಿನಗರ ಸೇರಿದಂತೆ ಬಿಎಂಪಿಯಿಂದ ಪರವಾನಗಿ ಪಡೆದಿರುವ 150 ವಾಹನ ನಿಲುಗಡೆ ಪ್ರದೇಶಗಳ ಮೇಲೆ ಶುಕ್ರವಾರ ದಾಳಿ ನಡೆಯಲಿದೆ ಎಂದು ಹೇಳಿದ್ದಾರೆ. [ಲಾರಿಗಳು ಹಗಲು ಬೆಂಗಳೂರು ಪ್ರವೇಶಿಸುವಂತಿಲ್ಲ]

ವಾರಸುದಾರರಿಲ್ಲದ ವಾಹನಗಳ ವಿಲೇವಾರಿಗೆ ಕಾನೂನಿನಲ್ಲಿ ಅವಕಾಶವಿದೆ. ಅದರ ಅನ್ವಯ ಏಳು ದಿನಕ್ಕೂ ಹೆಚ್ಚು ಕಾಲ ನಿಲುಗಡೆ ಪ್ರದೇಶದಲ್ಲಿರುವ ಅಪರಿಚಿತ ವಾಹನಗಳ ವಿರುದ್ಧ ಕ್ರಮ ಜರುಗಿಸಲಾಗುತ್ತದೆ ಎಂದು ಹರಿಶೇಖರನ್ ತಿಳಿಸಿದರು.

ಕೆಲವು ದಿನಗಳಿಂದ ನಗರದಲ್ಲಿ ಸರಗಳ್ಳರ ಕಾಟ ಹೆಚ್ಚುತ್ತಿದೆ. ಹೊರ ರಾಜ್ಯದ ದುಷ್ಕರ್ಮಿಗಳು ತಿಂಗಳಿಗೆ ಒಂದೆರಡು ಬಾರಿ ನಗರಕ್ಕೆ ಬಂದು ವಾಹನ ನಿಲುಗಡೆ ಪ್ರದೇಶದಲ್ಲಿ ನಿಲ್ಲಿಸಿರುವ ವಾಹನ ಬಳಸಿ ಕೆಲವೇ ತಾಸುಗಳಲ್ಲಿ ಹಲವು ಕಡೆ ಸರಗಳವು, ಮನೆಗಳವು ಮಾಡಿಕೊಂಡು ಪರಾರಿಯಾಗುತ್ತಾರೆ. ಇದನ್ನು ತಡೆಯಲು ಇತಂಹ ಕ್ರಮ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

English summary
Think twice before parking Vehicle in public parking lot more than 7 days in Bengaluru city. Bangalore police will sized vehicles parked at parking lot more than seven days.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X