Dr Bro: ಖ್ಯಾತ ಯೂಟ್ಯೂಬರ್ ಡಾ. ಬ್ರೋ ವಿರುದ್ಧ ಆಟೋ, ಕ್ಯಾಬ್ ಚಾಲಕರ ಆಕ್ರೋಶ! ಕಾರಣವೇನು?
ಡಾ ಬ್ರೋ ಯೂಟ್ಯೂಬ್ ಮೂಲಕವೇ ಕನ್ನಡಿಗರ ಮನಗೆದ್ದ ಹುಡುಗ. ಕನ್ನಡಿಗರಿಗೆ ಜಗತ್ತನ್ನು ತೋರಿಸುತ್ತೇನೆ ಎಂದು ಹೊರಟ ಗಗನ್ ಶ್ರೀನಿವಾಸ್ ಡಾ. ಬ್ರೋ ಆಗಿ ಕನ್ನಡಿಗರ ಮನಗೆದ್ದವರು. ಈಗಾಗಲೂ ಜಗತ್ತಿನ ಹಲವು ದೇಶಗಳನ್ನು ಕನ್ನಡಿಗರಿಗೆ ತೋರಿಸಿದ್ದಾರೆ. ವಿವಾದದಿಂದ ಸದಾ ದೂರವೇ ಇರುವ ಡಾ. ಬ್ರೋ ಮೇಲೆ ಇದೀಗ ಬೆಂಗಳೂರಿನ ಆಟೋ ಮತ್ತು ಕ್ಯಾಬ್ ಚಾಲಕರು ಸಿಟ್ಟಾಗಿದ್ದಾರೆ.
ಕರ್ನಾಟಕ ರಾಜ್ಯ ಚಾಲಕರ ಪರಿಷತ್ ಅಧ್ಯಕ್ಷರಾಗಿರುವ ಕೆ. ಸೋಮಶೇಖರ್ ತಮ್ಮ ಫೇಸ್ಬುಕ್ ಖಾತೆಯಲ್ಲಿ ವಿಡಿಯೋ ಹಂಚಿಕೊಂಡಿದ್ದು ಡಾ ಬ್ರೋ ವಿರುದ್ಧ ಕಿಡಿ ಕಾರಿದ್ದಾರೆ. ಡಾ. ಬ್ರೋ ನಮ್ಮ ಯಾತ್ರಿ ಅಪ್ಲಿಕೇಷನ್ ಪ್ರಮೋಟ್ ಮಾಡಿದ್ದೇ ಚಾಲಕರ ಅಸಮಾಧಾನಕ್ಕೆ ಕಾರಣವಾಗಿದೆ.

ಡಾ. ಬ್ರೋ ಹಂಚಿಕೊಂಡಿರುವ ವಿಡಿಯೋದಲ್ಲಿ ನಮ್ಮ ಯಾತ್ರಿ ಕ್ಯಾಬ್, ಆಟೋ ಚಾಲಕರಿಗೆ ವರದಾನವಾಗಿದ್ದು ಇಲ್ಲಿ ಕಮಿಷನ್ ಇಲ್ಲ, ದಿನಕ್ಕೆ 25 ರೂಪಾಯಿ ಅಥವಾ ಪ್ರಯಾಣಕ್ಕೆ 3.5 ರೂಪಾಯಿ ಮಾತ್ರ ಕಮಿಷನ್ ಪಡೆಯುತ್ತಾರೆ ಎಂದು ಹೇಳಿದ್ದಾರೆ.
ಕೆ. ಸೋಮಶೇಖರ್ ಆರೋಪವೇನು?
ಡಾ ಬ್ರೋ ತಪ್ಪಾದ ಮಾಹಿತಿ ನೀಡುವ ಮೂಲಕ ಆಟೋ / ಕ್ಯಾಬ್ ಚಾಲಕೆ ದಾರಿ ತಪ್ಪಿಸಿದ್ದಾರೆ ಎಂದು ಕೆ. ಸೋಮಶೇಖರ್ ಆರೋಪಿಸಿದ್ದಾರೆ. ಆಪ್ಗಳು ಚಾಲಕರನ್ನು ಸುಲಿಗೆ ಮಾಡುತ್ತಿವೆ ಎಂದಿರುವ ಅವರು ಡಾ ಬ್ರೋ ವಿಡಿಯೋ ಡಿಲೀಟ್ ಮಾಡಬೇಕು, ಕನ್ನಡಿಗ ಚಾಲಕರ ಪರವಾಗಿ ನಿಲ್ಲಬೇಕು ಎಂದಿದ್ದಾರೆ.
ಕರ್ನಾಟಕ ರಾಜ್ಯ ಚಾಲಕರ ಪರಿಷತ್ ವತಿಯಿಂದ ಡಾ ಬ್ರೋ ಅವರಿಗೆ ಮನವಿ ಪತ್ರ ಕೂಡ ನೀಡಿರುವುದಾಗಿ ಹೇಳಿದ್ದು ಮನವಿ ಪತ್ರವನ್ನು ಹಂಚಿಕೊಂಡಿದ್ದಾರೆ. ನಾವು ಮನವಿ ಪತ್ರ ನೀಡಿ ವಿವರಿಸಿ ಹೇಳಿದ್ದರೂ ಡಾ ಬ್ರೋ ವಿಡಿಯೋ ಡಿಲೀಟ್ ಮಾಡದೆ ಶೀರ್ಷಿಕೆಯನ್ನು ಮಾತ್ರ ಬದಲಾಯಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಆಂಧ್ರದಲ್ಲಿ ಈಗಾಗಲೇ ಬೈಕ್ ಟ್ಯಾಕ್ಸಿ ಇದ್ದು ಬೆಂಗಳೂರಿನಲ್ಲಿ ಕೂಡ ಬರಲಿದ್ದು ಚಾಲಕರಿಗೆ ಮತ್ತಷ್ಟು ಕಷ್ಟವಾಗಲಿದೆ. ಈ ಆಪ್ಗಳು ಹೇಗೆಲ್ಲಾ ಸುಲಿಗೆ ಮಾಡುತ್ತವೆ ಎಂದು ನಿಮ್ಮ ವಿಡಿಯೋಗೆ ಅನೇಕ ಚಾಲಕರು ಕಾಮೆಂಟ್ ಹಾಕಿದ್ದಾರೆ ಅದನ್ನು ಒಮ್ಮೆ ನೋಡಿ, ಕೂಡಲೇ ಇಂತಹ ಆಪ್ ಪ್ರಮೋಟ್ ಮಾಡಿರುವ ವಿಡಿಯೋವನ್ನು ಡಿಲೀಟ್ ಮಾಡಿ ಎಂದು ಮನವಿ ಪತ್ರದಲ್ಲಿ ಒತ್ತಾಯಿಸಲಾಗಿದೆ.
ಇಷ್ಟೆಲ್ಲಾ ಮನವಿ ಮಾಡಿ ನಮ್ಮ ಸಮಸ್ಯೆಯನ್ನು ವಿವರಿಸಿದರೂ ಡಾ ಬ್ರೋ ಮನವಿಯನ್ನು ತಿರಸ್ಕರಿಸಿದ್ದಾರೆ ಎಂದು ಕೆ. ಸೋಮಶೇಖರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಫೇಸ್ಬುಕ್ ಖಾತೆಯಲ್ಲಿ ವಿಡಿಯೋ ಹಂಚಿಕೊಂಡಿದ್ದು ಅಷ್ಟು ಜನ ಕಮೆಂಟ್ ಮಾಡಿದ್ದರು ವಿಡಿಯೋ ಡಿಲೀಟ್ ಮಾಡದೆ ನೀವು ಸಣ್ಣತನ ತೋರಿಸಿದ್ದೀರಾ, ಹಣಕ್ಕೆ ಮಾತ್ರ ಬೆಲೆ ಕೊಡುವುದು ಎಂದು ಸಾಬೀತು ಮಾಡಿದ್ದೀರಾ ಎಂದಿದ್ದಾರೆ. ಚಾಲಕರ ಆರೋಪಕ್ಕೆ ಡಾ. ಬ್ರೋ ಇನ್ನೂ ಯಾವುದೇ ಪ್ರತಿಕ್ರಿಯೆ ಕೊಟ್ಟಿಲ್ಲ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications