Dr Bro: ಖ್ಯಾತ ಯೂಟ್ಯೂಬರ್ ಡಾ. ಬ್ರೋ ವಿರುದ್ಧ ಆಟೋ, ಕ್ಯಾಬ್ ಚಾಲಕರ ಆಕ್ರೋಶ! ಕಾರಣವೇನು?
ಡಾ ಬ್ರೋ ಯೂಟ್ಯೂಬ್ ಮೂಲಕವೇ ಕನ್ನಡಿಗರ ಮನಗೆದ್ದ ಹುಡುಗ. ಕನ್ನಡಿಗರಿಗೆ ಜಗತ್ತನ್ನು ತೋರಿಸುತ್ತೇನೆ ಎಂದು ಹೊರಟ ಗಗನ್ ಶ್ರೀನಿವಾಸ್ ಡಾ. ಬ್ರೋ ಆಗಿ ಕನ್ನಡಿಗರ ಮನಗೆದ್ದವರು. ಈಗಾಗಲೂ ಜಗತ್ತಿನ ಹಲವು ದೇಶಗಳನ್ನು ಕನ್ನಡಿಗರಿಗೆ ತೋರಿಸಿದ್ದಾರೆ. ವಿವಾದದಿಂದ ಸದಾ ದೂರವೇ ಇರುವ ಡಾ. ಬ್ರೋ ಮೇಲೆ ಇದೀಗ ಬೆಂಗಳೂರಿನ ಆಟೋ ಮತ್ತು ಕ್ಯಾಬ್ ಚಾಲಕರು ಸಿಟ್ಟಾಗಿದ್ದಾರೆ.
ಕರ್ನಾಟಕ ರಾಜ್ಯ ಚಾಲಕರ ಪರಿಷತ್ ಅಧ್ಯಕ್ಷರಾಗಿರುವ ಕೆ. ಸೋಮಶೇಖರ್ ತಮ್ಮ ಫೇಸ್ಬುಕ್ ಖಾತೆಯಲ್ಲಿ ವಿಡಿಯೋ ಹಂಚಿಕೊಂಡಿದ್ದು ಡಾ ಬ್ರೋ ವಿರುದ್ಧ ಕಿಡಿ ಕಾರಿದ್ದಾರೆ. ಡಾ. ಬ್ರೋ ನಮ್ಮ ಯಾತ್ರಿ ಅಪ್ಲಿಕೇಷನ್ ಪ್ರಮೋಟ್ ಮಾಡಿದ್ದೇ ಚಾಲಕರ ಅಸಮಾಧಾನಕ್ಕೆ ಕಾರಣವಾಗಿದೆ.

ಡಾ. ಬ್ರೋ ಹಂಚಿಕೊಂಡಿರುವ ವಿಡಿಯೋದಲ್ಲಿ ನಮ್ಮ ಯಾತ್ರಿ ಕ್ಯಾಬ್, ಆಟೋ ಚಾಲಕರಿಗೆ ವರದಾನವಾಗಿದ್ದು ಇಲ್ಲಿ ಕಮಿಷನ್ ಇಲ್ಲ, ದಿನಕ್ಕೆ 25 ರೂಪಾಯಿ ಅಥವಾ ಪ್ರಯಾಣಕ್ಕೆ 3.5 ರೂಪಾಯಿ ಮಾತ್ರ ಕಮಿಷನ್ ಪಡೆಯುತ್ತಾರೆ ಎಂದು ಹೇಳಿದ್ದಾರೆ.
ಕೆ. ಸೋಮಶೇಖರ್ ಆರೋಪವೇನು?
ಡಾ ಬ್ರೋ ತಪ್ಪಾದ ಮಾಹಿತಿ ನೀಡುವ ಮೂಲಕ ಆಟೋ / ಕ್ಯಾಬ್ ಚಾಲಕೆ ದಾರಿ ತಪ್ಪಿಸಿದ್ದಾರೆ ಎಂದು ಕೆ. ಸೋಮಶೇಖರ್ ಆರೋಪಿಸಿದ್ದಾರೆ. ಆಪ್ಗಳು ಚಾಲಕರನ್ನು ಸುಲಿಗೆ ಮಾಡುತ್ತಿವೆ ಎಂದಿರುವ ಅವರು ಡಾ ಬ್ರೋ ವಿಡಿಯೋ ಡಿಲೀಟ್ ಮಾಡಬೇಕು, ಕನ್ನಡಿಗ ಚಾಲಕರ ಪರವಾಗಿ ನಿಲ್ಲಬೇಕು ಎಂದಿದ್ದಾರೆ.
ಕರ್ನಾಟಕ ರಾಜ್ಯ ಚಾಲಕರ ಪರಿಷತ್ ವತಿಯಿಂದ ಡಾ ಬ್ರೋ ಅವರಿಗೆ ಮನವಿ ಪತ್ರ ಕೂಡ ನೀಡಿರುವುದಾಗಿ ಹೇಳಿದ್ದು ಮನವಿ ಪತ್ರವನ್ನು ಹಂಚಿಕೊಂಡಿದ್ದಾರೆ. ನಾವು ಮನವಿ ಪತ್ರ ನೀಡಿ ವಿವರಿಸಿ ಹೇಳಿದ್ದರೂ ಡಾ ಬ್ರೋ ವಿಡಿಯೋ ಡಿಲೀಟ್ ಮಾಡದೆ ಶೀರ್ಷಿಕೆಯನ್ನು ಮಾತ್ರ ಬದಲಾಯಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಆಂಧ್ರದಲ್ಲಿ ಈಗಾಗಲೇ ಬೈಕ್ ಟ್ಯಾಕ್ಸಿ ಇದ್ದು ಬೆಂಗಳೂರಿನಲ್ಲಿ ಕೂಡ ಬರಲಿದ್ದು ಚಾಲಕರಿಗೆ ಮತ್ತಷ್ಟು ಕಷ್ಟವಾಗಲಿದೆ. ಈ ಆಪ್ಗಳು ಹೇಗೆಲ್ಲಾ ಸುಲಿಗೆ ಮಾಡುತ್ತವೆ ಎಂದು ನಿಮ್ಮ ವಿಡಿಯೋಗೆ ಅನೇಕ ಚಾಲಕರು ಕಾಮೆಂಟ್ ಹಾಕಿದ್ದಾರೆ ಅದನ್ನು ಒಮ್ಮೆ ನೋಡಿ, ಕೂಡಲೇ ಇಂತಹ ಆಪ್ ಪ್ರಮೋಟ್ ಮಾಡಿರುವ ವಿಡಿಯೋವನ್ನು ಡಿಲೀಟ್ ಮಾಡಿ ಎಂದು ಮನವಿ ಪತ್ರದಲ್ಲಿ ಒತ್ತಾಯಿಸಲಾಗಿದೆ.
ಇಷ್ಟೆಲ್ಲಾ ಮನವಿ ಮಾಡಿ ನಮ್ಮ ಸಮಸ್ಯೆಯನ್ನು ವಿವರಿಸಿದರೂ ಡಾ ಬ್ರೋ ಮನವಿಯನ್ನು ತಿರಸ್ಕರಿಸಿದ್ದಾರೆ ಎಂದು ಕೆ. ಸೋಮಶೇಖರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಫೇಸ್ಬುಕ್ ಖಾತೆಯಲ್ಲಿ ವಿಡಿಯೋ ಹಂಚಿಕೊಂಡಿದ್ದು ಅಷ್ಟು ಜನ ಕಮೆಂಟ್ ಮಾಡಿದ್ದರು ವಿಡಿಯೋ ಡಿಲೀಟ್ ಮಾಡದೆ ನೀವು ಸಣ್ಣತನ ತೋರಿಸಿದ್ದೀರಾ, ಹಣಕ್ಕೆ ಮಾತ್ರ ಬೆಲೆ ಕೊಡುವುದು ಎಂದು ಸಾಬೀತು ಮಾಡಿದ್ದೀರಾ ಎಂದಿದ್ದಾರೆ. ಚಾಲಕರ ಆರೋಪಕ್ಕೆ ಡಾ. ಬ್ರೋ ಇನ್ನೂ ಯಾವುದೇ ಪ್ರತಿಕ್ರಿಯೆ ಕೊಟ್ಟಿಲ್ಲ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications