ಭಾನುವಾರ ಮೊದಲ ವಿರಳ ಸಂಚಾರ ದಿನ: ಸ್ವಂತ ವಾಹನಗಳಿಗೆ ಬ್ರೇಕ್
ಬೆಂಗಳೂರು, ಫೆಬ್ರವರಿ 10 : ಪರಿಸರ ಮಾಲಿನ್ಯ ನಿಯಂತ್ರಣದ ದೃಷ್ಟಿಯಿಂದ ರಾಜ್ಯಾದ್ಯಂತ ಪ್ರತಿ ತಿಂಗಳ ಎರಡನೇ ಭಾನುವಾರ ಲೆಸ್ ಟ್ರಾಫಿಕ್ ಡೇ ಆಚರಿಸಲು ಸರ್ಕಾರ ಮುಂದಾಗಿದ್ದು ಫೆ.11 ರಂದು ಭಾನುವಾರ ವಿಧಾನಸೌಧದ ಮುಂಭಾಗ ಚಾಲನೆ ದೊರೆಯಲಿದೆ.
ಖಾಸಗಿ ವಾಹನಗಳನ್ನು ಬಳಸಬಾರದು ಎನ್ನುವ ನಿಯಮವಿಲ್ಲ ಆದರೆ ಆದಷ್ಟು ಸರ್ಕಾರಿ ವಾಹನಗಳು, ಸಾರ್ವಜನಿಕ ವಾಹನಗಳು, ಆಟೋಗಳನ್ನು ಬಳಸಿ ಎಂದು ಸಾರ್ವಜನಿಕರಿಗೆ ತಿಳಿ ಹೇಳಲಾಗುತ್ತದೆ.
ಭಾನುವಾರದಂದು ಬಿಎಂಟಿಸಿ ಬಸ್ ಗಳ ಸಂಖ್ಯೆಯನ್ನು ಹೆಚ್ಚಿಸಲಾಗತ್ತಿದ್ದು, ದಿನದ ಪಾಸಿನ ಬೆಲೆಯನ್ನು 75 ರಿಂದ 65 ಕ್ಕೆ ಇಳಿಕೆ ಮಾಡಿ ಸಾರ್ವಜನಿಕರಿಗೆ ಹೆಚ್ಚೆಚ್ಚು ಸರ್ಕಾರಿ ಸಾರಿಗೆಯನ್ನು ಬಳಸಲು ಉತ್ತೇಜಿಸಲಾಗುವುದು ಎಂದು ಬಿಎಂಟಿಸಿ ಅಧ್ಯಕ್ಷ ನಾಗರಾಜ್ ಯಾದವ್ ತಿಳಿಸಿದ್ದಾರೆ.
ಇನ್ನು ನಮ್ಮ ಮೆಟ್ರೋದಲ್ಲಿ ಕೂಡ ಮೆಟ್ರೋ ಸ್ಮಾರ್ಟ್ ಕಾರ್ಡ್ ಹೊಂದಿರುವವರಿಗೆ ಈಗಾಗಲೇ ನೀಡುತ್ತಿರುವ ಶೇ. 15 ರಿಯಾಯಿತಿ ಹೊರತುಪಡಿಸಿ, ಶೇ25 ಅಷ್ಟು ರಿಯಾಯಿತಿ ನೀಡಲಾಗುವುದು ಎಂದು ನಮ್ಮ ಮೆಟ್ರೋ ಎಂಡಿ ಮಹೇಂದ್ರ ಜೈನ್ ಅವರು ಮಾಹಿತಿ ನೀಡಿದ್ದಾರೆ.

ವಿರಳ ಸಂಚಾರ ದಿನದಂದು ಸಾರ್ವಜನಿಕ ಸಾರಿಗೆಯನ್ನು ಜನರು ಹೆಚ್ಚು ಬಳಕೆ ಮಾಡಿ ರಸ್ತೆಯಲ್ಲಾಗುವ ಸಂಚಾರ ದಟ್ಟಣೆ ನಿಯಂತ್ರಣವಾಗಬೇಕು ಪ್ರತಿನಿತ್ಯ ಓಡಾಡುವವರ ಸಂಖ್ಯೆಗಿಂತ ಭಾನುವಾರ ಶೆ.70 ರಷ್ಟು ಹೆಚ್ಚು ಮಂದಿ ಪ್ರಯಾಣಿಸುತ್ತಿದ್ದಾರೆ ಎಂದು ಹೇಳಿದ್ದಾರೆ.
ಸಾರಿಗೆ ಇಲಾಖೆ ಆಯುಕ್ತ ಬಿ. ದಯಾನಂದ್ ಹೇಳುವ ಪ್ರಕಾರ ಓಲಾ ಹಾಗೂ ಊಬರ್ ಕಂಪನಿ ಮಾಲೀಕರ ಬಳಿ ಈ ಭಾನುವಾರದಂದು ದರವನ್ನು ಕಡಿಮೆ ಮಾಡುವಂತೆ ಮನವಿ ಮಾಡಲಾಗಿದೆ. ಸಾರ್ವಜನಿಕ ಸಾರಿಗೆ ಅಥವಾ ಸೈಕಲ್ ಬಳಸುವಂತೆ ಸರ್ವಾಜನಿಕರಲ್ಲಿ ಕೂಡ ಮನವಿ ಮಾಡಿದ್ದೇವೆ ಎಂದಿದ್ದಾರೆ.
ಬಿಎಂಟಿಸಿಯು ಪ್ರತಿ ತಿಂಗಳ ನಾಲ್ಕನೇ ದಿನ ಬಿಎಂಟಿಸಿ ಬಸ್ ಡೇ ಅನ್ನು ಪ್ರಾರಂಭಮಾಡಿತ್ತು. ಆದರೆ ಅದು ವಾರಾಂತ್ಯವಲ್ಲದ ಕಾರಣ ಬೇರೆ ದಿನಗಳಂದು ಖಾಸಗಿ ವಾಹನವನ್ನು ನಿಯಂತ್ರಿಸುವುದು ಕಷ್ಟವಾಗಿತ್ತು. ಸರ್ಕಾರವು ಹೊಸ ವಾಹನಗಳ ನೋಂದಣಿಯನ್ನು ಕಡಿಮೆ ಮಾಡಿದರೆ ವಾಹನ ಸಮಚಾರ ದಟ್ಟಣೆಯನ್ನು ನಿಯಂತ್ರಿಸಬಹುದಾಗಿದೆ.
-
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ












Click it and Unblock the Notifications