ಭಾನುವಾರ ಮೊದಲ ವಿರಳ ಸಂಚಾರ ದಿನ: ಸ್ವಂತ ವಾಹನಗಳಿಗೆ ಬ್ರೇಕ್
ಬೆಂಗಳೂರು, ಫೆಬ್ರವರಿ 10 : ಪರಿಸರ ಮಾಲಿನ್ಯ ನಿಯಂತ್ರಣದ ದೃಷ್ಟಿಯಿಂದ ರಾಜ್ಯಾದ್ಯಂತ ಪ್ರತಿ ತಿಂಗಳ ಎರಡನೇ ಭಾನುವಾರ ಲೆಸ್ ಟ್ರಾಫಿಕ್ ಡೇ ಆಚರಿಸಲು ಸರ್ಕಾರ ಮುಂದಾಗಿದ್ದು ಫೆ.11 ರಂದು ಭಾನುವಾರ ವಿಧಾನಸೌಧದ ಮುಂಭಾಗ ಚಾಲನೆ ದೊರೆಯಲಿದೆ.
ಖಾಸಗಿ ವಾಹನಗಳನ್ನು ಬಳಸಬಾರದು ಎನ್ನುವ ನಿಯಮವಿಲ್ಲ ಆದರೆ ಆದಷ್ಟು ಸರ್ಕಾರಿ ವಾಹನಗಳು, ಸಾರ್ವಜನಿಕ ವಾಹನಗಳು, ಆಟೋಗಳನ್ನು ಬಳಸಿ ಎಂದು ಸಾರ್ವಜನಿಕರಿಗೆ ತಿಳಿ ಹೇಳಲಾಗುತ್ತದೆ.
ಭಾನುವಾರದಂದು ಬಿಎಂಟಿಸಿ ಬಸ್ ಗಳ ಸಂಖ್ಯೆಯನ್ನು ಹೆಚ್ಚಿಸಲಾಗತ್ತಿದ್ದು, ದಿನದ ಪಾಸಿನ ಬೆಲೆಯನ್ನು 75 ರಿಂದ 65 ಕ್ಕೆ ಇಳಿಕೆ ಮಾಡಿ ಸಾರ್ವಜನಿಕರಿಗೆ ಹೆಚ್ಚೆಚ್ಚು ಸರ್ಕಾರಿ ಸಾರಿಗೆಯನ್ನು ಬಳಸಲು ಉತ್ತೇಜಿಸಲಾಗುವುದು ಎಂದು ಬಿಎಂಟಿಸಿ ಅಧ್ಯಕ್ಷ ನಾಗರಾಜ್ ಯಾದವ್ ತಿಳಿಸಿದ್ದಾರೆ.
ಇನ್ನು ನಮ್ಮ ಮೆಟ್ರೋದಲ್ಲಿ ಕೂಡ ಮೆಟ್ರೋ ಸ್ಮಾರ್ಟ್ ಕಾರ್ಡ್ ಹೊಂದಿರುವವರಿಗೆ ಈಗಾಗಲೇ ನೀಡುತ್ತಿರುವ ಶೇ. 15 ರಿಯಾಯಿತಿ ಹೊರತುಪಡಿಸಿ, ಶೇ25 ಅಷ್ಟು ರಿಯಾಯಿತಿ ನೀಡಲಾಗುವುದು ಎಂದು ನಮ್ಮ ಮೆಟ್ರೋ ಎಂಡಿ ಮಹೇಂದ್ರ ಜೈನ್ ಅವರು ಮಾಹಿತಿ ನೀಡಿದ್ದಾರೆ.

ವಿರಳ ಸಂಚಾರ ದಿನದಂದು ಸಾರ್ವಜನಿಕ ಸಾರಿಗೆಯನ್ನು ಜನರು ಹೆಚ್ಚು ಬಳಕೆ ಮಾಡಿ ರಸ್ತೆಯಲ್ಲಾಗುವ ಸಂಚಾರ ದಟ್ಟಣೆ ನಿಯಂತ್ರಣವಾಗಬೇಕು ಪ್ರತಿನಿತ್ಯ ಓಡಾಡುವವರ ಸಂಖ್ಯೆಗಿಂತ ಭಾನುವಾರ ಶೆ.70 ರಷ್ಟು ಹೆಚ್ಚು ಮಂದಿ ಪ್ರಯಾಣಿಸುತ್ತಿದ್ದಾರೆ ಎಂದು ಹೇಳಿದ್ದಾರೆ.
ಸಾರಿಗೆ ಇಲಾಖೆ ಆಯುಕ್ತ ಬಿ. ದಯಾನಂದ್ ಹೇಳುವ ಪ್ರಕಾರ ಓಲಾ ಹಾಗೂ ಊಬರ್ ಕಂಪನಿ ಮಾಲೀಕರ ಬಳಿ ಈ ಭಾನುವಾರದಂದು ದರವನ್ನು ಕಡಿಮೆ ಮಾಡುವಂತೆ ಮನವಿ ಮಾಡಲಾಗಿದೆ. ಸಾರ್ವಜನಿಕ ಸಾರಿಗೆ ಅಥವಾ ಸೈಕಲ್ ಬಳಸುವಂತೆ ಸರ್ವಾಜನಿಕರಲ್ಲಿ ಕೂಡ ಮನವಿ ಮಾಡಿದ್ದೇವೆ ಎಂದಿದ್ದಾರೆ.
ಬಿಎಂಟಿಸಿಯು ಪ್ರತಿ ತಿಂಗಳ ನಾಲ್ಕನೇ ದಿನ ಬಿಎಂಟಿಸಿ ಬಸ್ ಡೇ ಅನ್ನು ಪ್ರಾರಂಭಮಾಡಿತ್ತು. ಆದರೆ ಅದು ವಾರಾಂತ್ಯವಲ್ಲದ ಕಾರಣ ಬೇರೆ ದಿನಗಳಂದು ಖಾಸಗಿ ವಾಹನವನ್ನು ನಿಯಂತ್ರಿಸುವುದು ಕಷ್ಟವಾಗಿತ್ತು. ಸರ್ಕಾರವು ಹೊಸ ವಾಹನಗಳ ನೋಂದಣಿಯನ್ನು ಕಡಿಮೆ ಮಾಡಿದರೆ ವಾಹನ ಸಮಚಾರ ದಟ್ಟಣೆಯನ್ನು ನಿಯಂತ್ರಿಸಬಹುದಾಗಿದೆ.
-
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ












Click it and Unblock the Notifications