ಬೆಂಗಳೂರು ಮಾವು ಮೇಳಕ್ಕೆ ತಟ್ಟಿದ ನೀತಿ ಸಂಹಿತೆ ಬಿಸಿ
ಬೆಂಗಳೂರು, ಏಪ್ರಿಲ್ 28: ಈ ಬಾರಿ ಮಾವು ಮಾರುಕಟ್ಟೆಗೆ ಬರುವುದು ವಿಳಂಬವಾಗುತ್ತಿದೆ, ಜತೆಗೆ ಚುನಾವಣಾ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಮಾವು ಮೇಳವನ್ನು ಮೇ 15ರ ನಂತರ ಆಯೋಜಿಸಲಾಗುತ್ತಿದೆ.
ಗುಣಮಟ್ಟದ ಮಾವು ಇನ್ನೂ ಮಾರುಕಟ್ಟೆಗೆ ಬಾರದ ಕಾರಣ ಹಾಗೂ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಈ ಬಾರಿ ಲಾಲ್ಬಾಗ್ ನಲ್ಲಿ ಮೇ 15ರ ನಂತರ ಮಾವು ಮೇಳ ಆಯೋಜಿಸಲಾಗುತ್ತಿದೆ. ಪ್ರತಿ ವರ್ಷ ಏಪ್ರಿಲ್ ತಿಂಗಳಲ್ಲೇ ಮಾವು ಮೇಳ ನಡೆಯುತ್ತಿತ್ತು.
ಆದರೆ ಈ ಬಾರಿ ಮಾವು ಬೇಗ ಮಾರುಕಟ್ಟೆಗೆ ಮಾರುಕಟ್ಟೆಗೆ ಅಲ್ಪ ಪ್ರಮಾಣದಲ್ಲಿ ಮಾವು ಆಗಮಿಸುತ್ತಿದೆ. ಆದರೆ ಗುಣಮಟ್ಟದ ಹಣ್ಣುಗಳು ಬರಲು ಇನ್ನೂ ಕೆಲವು ದಿನಗಳು ಬೇಕಾಗುತ್ತದೆ. ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಮೇಳ ಆಯೋಜನೆಯ ದಿನಾಂಕವನ್ನು ಇನ್ನೂ ನಿರ್ಧರಿಸಿಲ್ಲ ಎಂದು ತೋಟಗಾರಿಕೆ ಇಲಾಖೆ ಹೆಚ್ಚುವರಿ ನಿರ್ದೇಶಕ ಕೆ.ಎಂ. ಪರಶಿವಮೂರ್ತಿ ಮಾಹಿತಿ ನೀಡಿದ್ದಾರೆ.

ಇದೀಗ ಮಾರುಕಟ್ಟೆಗೆ ಬಂದಿರುವ ಹಣ್ಣು ಹುಳಿಯಾಗಿದ್ದು, ಬೆಲೆಯೂ ದುಬಾರಿಯಾಗಿದೆ. ಒಂದು ಕೆ.ಜಿ ಮಾವಿನ ಬೆಲೆ 150-200ರೂ.ವರೆಗಿದೆ. ಅಮ್ರಪಾಲಿ, ನೀಲಂ, ಕೇಸರ್ ತಳಿಯ ಮಾವು 60-70 ರೂ.ಗೆ ದೊರೆಯುತ್ತಿದೆ. ಆಲ್ಫಾನ್ಸೊ, ಮಲ್ಲಿಕಾ, ಬಾದಾಮಿ ಮತ್ತಿತರ ಬೇಡಿಕೆ ಮಾವಿನ ತಳಿಗಳು ದುಬಾರಿಯಾಗಿದೆ.
ಪ್ರತಿ ವರ್ಷ ಲಾಲ್ಬಾಗ್ ನಲ್ಲಿ ಆರಂಭವಾಗುವುದಕ್ಕೂ ಮುನ್ನವೇ ಹಾಪ್ಕಾಮ್ಸ್ ನಲ್ಲಿ ಮಾವು ಮೇಳ ಆಯೋಜಿಸಲಾಗುತ್ತಿತ್ತು. ಆದರೆ ಈ ಬಾರಿ ಅಲ್ಲಿಯೂ ತಡಾವಾಗಿ ಅಂದರೆ ಮೇ 15ರ ನಂತರವೇ ಆಯೋಜಿಸಲು ನಿರ್ಧರಿಸಲಾಗಿದೆ. ಮಾವು ಫಸಲು ತಡವಾಗಿದ್ದು, ಇಳುವರಿಯೂ ಕಡಿಮೆಯಿದೆ ಎಂದು ಹಾಪ್ಕಾಮ್ಸ್ ವ್ಯವಸ್ಥಾಕ ನಿರ್ದೇಶ ಡಾ. ವಿಶ್ವನಾಥ್ ಹೇಳಿದ್ದಾರೆ.
-
LPG Crisis: ಎಲ್ಪಿಜಿ ಬಿಕ್ಕಟ್ಟಿನ ಸುಳಿಯಲ್ಲಿ ಭಾರತದ ಪ್ರಮುಖ ನಗರಗಳು: ದರ್ಶಿನಿಗಳು ಬಂದ್, ಪಿಜಿಗಳಲ್ಲಿ ಮೆನು ಚೇಂಜ್ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Gas Bill: ಇಡ್ಲಿ-ವಡೆ ಜೊತೆಗೆ ಗ್ಯಾಸ್ ಶುಲ್ಕ ವಿಧಿಸಿದ ರೆಸ್ಟೋರೆಂಟ್!: ದಂಗಾದ ಗ್ರಾಹಕರು, ಇಲ್ಲಿವೆ ನೋಡಿ ದರಗಳು -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ












Click it and Unblock the Notifications