ಈಶ್ವರಪ್ಪ ಅವರ ಈ ಟ್ವೀಟ್ ಬೆಂಬಲಿಗರ ಆಕ್ರೋಶವನ್ನು ಶಮನಗೊಳಿಸುತ್ತಾ?
ಬೆಂಗಳೂರು, ಆಗಸ್ಟ್ 27: ಖಾತೆ ಹಂಚಿಕೆ ಕುರಿತು ಬಿಜೆಪಿಯಲ್ಲಿ ಅಸಮಾಧಾನ ಬುಗಿಲೆದ್ದಿರುವಾಗ ಅದಕ್ಕೆ ನೀರೆರಚುವ ಕೆಲಸವನ್ನು ಈಶ್ವರಪ್ಪ ಮಾಡಿದ್ದಾರೆ.
''ಈಗ ನಮ್ಮೆಲ್ಲರ ದೃಷ್ಟಿ ರಾಜ್ಯದ ಅಭಿವೃದ್ಧಿ ಮೇಲೆ ಮಾತ್ರ ಇರಬೇಕು. ಅತಿವೃಷ್ಟಿ-ಅನಾವೃಷ್ಟಿಯಿಂದ ಬಳಲಿರುವ ಜನರಿಗೆ ಬೆಂಬಲವಾಗಿ ನಿಲ್ಲಬೇಕು. ಪಕ್ಷದ ವರಿಷ್ಠರು ನಿರ್ಧರಿಸಿ ಯೋಜಿಸಿರುವ ಜವಾಬ್ದಾರಿಯನ್ನು ನಿಭಾಯಿಸಲು ನಾವು ಕಾರ್ಯ ತತ್ಪರರಾಗಬೇಕು. ಯಾವುದೇ ಪ್ರತಿಭಟನೆ, ಅಸಮಾಧಾನಕ್ಕೆ ಆಸ್ಪದ ಕೊಡಬಾರದು'' ಎಂದು ಮನವಿ ಮಾಡಿದ್ದಾರೆ.
ಖಾತೆ ಹಂಚಿಕೆಯಲ್ಲಿ ಆರ್ ಅಶೋಕ್, ಜಗದೀಶ್ ಶೆಟ್ಟರ್, ಸಿಟಿ ರವಿ ಹಾಗೂ ಸೋಮಣ್ಣ ಅಸಮಾಧಾನ ಹೊರ ಹಾಕುತ್ತಿದ್ದಂತೆಯೇ ಇತ್ತ ಈಶ್ವರಪ್ಪ ಅವರಿಗೆ ಡಿಸಿಎಂ ಸ್ಥಾನ ನೀಡದ್ದಕ್ಕೆ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಕಿಡಿಕಾರಿದ್ದು, ಎಚ್ಚರಿಕೆಯನ್ನೂ ಕೂಡ ನೀಡಿದೆ.

ಕಳೆದ ಬಾರಿಯ ಬಿಜೆಪಿ ಸರ್ಕಾರದಲ್ಲಿ ಕೆ.ಎಸ್.ಈಶ್ವರಪ್ಪ ಅವರು ಉಪಮುಖ್ಯಮಂತ್ರಿ ಸ್ಥಾನವನ್ನು ಅಲಂಕರಿಸಿದ್ದರು. ಆದರೆ ಈ ಬಾರಿ ಅವರಿಗೆ ಮತ್ತೆ ಡಿಸಿಎಂ ಪೋಸ್ಟ್ ನೀಡದ್ದಕ್ಕೆ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಕಿಡಿ ಕಾರಿದೆ.
ಇಂಧನ ಖಾತೆ ಕೇಳಿದ್ದ ಈಶ್ವರಪ್ಪಗೆ ಗ್ರಾಮೀಣಾಭಿವೃದ್ಧಿ ಖಾತೆ ನೀಡಿದ್ದಾರೆ. ಈ ಮೂಲಕ ಹಿಂದುಳಿದ ವರ್ಗಕ್ಕೆ ಅಪಮಾನ ಮಾಡಿದ್ದಾರೆಂದು ಹೈಕಮಾಂಡ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ. ಅಲ್ಲದೆ ಈಶ್ವರಪ್ಪರಿಗೆ ಡಿಸಿಎಂ ಹುದ್ದೆ ನೀಡಬೇಕು.
ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಬಿಜೆಪಿಗೆ ಭಾರೀ ಹೊಡೆತ ನೀಡಲಾಗುವುದು ಎಂದು ಎಚ್ಚರಿಕೆ ನೀಡಿದೆ. ಈ ಸಂದರ್ಭದಲ್ಲಿ ಕೆಎಸ್ ಈಶ್ವರಪ್ಪ ಟ್ವೀಟ್ ಮಾಡಿ ಸಮಾಧಾನಪಡಿಸಿದ್ದಾರೆ.
-
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Asha Bosle Net Worth: ದೇಶ-ವಿದೇಶಗಳಲ್ಲಿ ರೆಸ್ಟೊರೆಂಟ್ಸ್, ನೂರಾರು ಕೋಟಿ ಒಡತಿ ಆಶಾ ಭೋಸ್ಲೆ ಒಟ್ಟು ಆಸ್ತಿ ವಿವರ ಹೀಗಿದೆ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ












Click it and Unblock the Notifications