ಪೌರತ್ವ ಕಾಯ್ದೆ ವಿರುದ್ಧ ಪ್ರತಿಭಟಿಸಿದರೆ ಜೈಲಿಗೆ: ಪೊಲೀಸ್ ಆಯುಕ್ತ
ಬೆಂಗಳೂರು, ಡಿಸೆಂಬರ್ 18: ಪೌರತ್ವ ಕಾಯ್ದೆ ವಿರುದ್ಧ ಪ್ರತಿಭಟನೆ ಮಾಡಲು ಅವಕಾಶ ನೀಡಲಾಗುವುದಿಲ್ಲ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಕಟು ಶಬ್ದಗಳಲ್ಲಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, 'ಪೌರತ್ವ ಕಾಯ್ದೆ ವಿರುದ್ಧ ಪ್ರತಿಭಟನೆ ಮಾಡುವ ಆಸೆಯಿರುವವರು ಉತ್ತರ ಭಾರತಕ್ಕೆ ಹೋಗಲಿ, ಇಲ್ಲಿ ಪ್ರತಿಭಟನೆಗೆ ಅವಕಾಶ ನೀಡಲಾಗುವುದಿಲ್ಲ' ಎಂದು ಹೇಳಿದ್ದಾರೆ.
ಪೌರತ್ವ ತಿದ್ದುಪಡಿ ಕಾನೂನಿಗೆ ತಡೆ ನೀಡುವುದಿಲ್ಲ: ಸುಪ್ರೀಂಕೋರ್ಟ್
'ಸಿಎಎ ವಿರುದ್ಧ ಪ್ರತಿಭಟನೆಗೆ ಹಲವು ಅರ್ಜಿಗಳು ಬಂದಿವೆ, ಆದರೆ ಯಾರಿಗೂ ಅವಕಾಶ ನೀಡಲಾಗಿಲ್ಲ. ಆದರೂ ಎರಡು ಕಾಲೇಜುಗಳ ವಿದ್ಯಾರ್ಥಿಗಳು ಪ್ರತಿಭಟನೆ ಮಾಡಿದ್ದಾರೆ, ಅವರ ವಿರುದ್ಧ ಕ್ರಮಕ್ಕೆ ಸೂಚಿಸಲಾಗಿದೆ' ಎಂದಿದ್ದಾರೆ.
'ನಗರದ ಕಾನೂನು ಸುವ್ಯವಸ್ಥೆ ಬಹಳ ಮುಖ್ಯ, ಕಾನೂನು ಸುವ್ಯವಸ್ಥೆ ಹಾಳಾದರೆ ಸುಮ್ಮನಿರುವುದಿಲ್ಲ. ಬೆಂಗಳೂರಿನಲ್ಲಿ ಪೌರತ್ವ ಕಾಯ್ದೆಯ ವಿರುದ್ಧ ಬೀದಿಗಿಳಿದರೆ ಜೈಲಿಗೆ ಹಾಕಲಾಗುತ್ತದೆ. ಪ್ರತಿಭಟನೆ ಮಾಡುವವರ ವಿಡಿಯೋ ಚಿತ್ರೀಕರಣಕ್ಕೆ ಸೂಚಿಸಲಾಗಿದೆ' ಎಂದು ಹೇಳಿದರು.