ಪರಿಸರ ಜಾಗೃತಿಯ ಪಾಠ ಬೋಧಿಸಿದ ಬೆಂಗಳೂರು ವಾಕಥಾನ್
ಬೆಂಗಳೂರು, ಡಿಸೆಂಬರ್ 09 : ಸಮರ್ಥನಂ ಅಂಕವಿಕಲ ಸಂಸ್ಥೆ ಹಾಗೂ ಅಲರ್ಗನ್ ಸಹಯೋಗದಲ್ಲಿ ಹಸಿರಿನೆಡೆಗೆ ನಡಿಗೆ ' ಗ್ರೀನ್ ವಿಷನ್ ಕ್ಲಿಯರ್ ವಿಷನ್' ಎಂಬ ವಿನೂತನ ಕಾರ್ಯಕ್ರಮ ಶನಿವಾರ ಜಯನಗರದ ಕಿತ್ತೂರು ರಾಣಿ ಚೆನ್ನಮ್ಮ ಸಭಾಂಗಣದಲ್ಲಿ ನಡೆಯಿತು.
ಸಮರ್ಥನಂ ಸಂಸ್ಥೆ ಆಯೋಜಿಸಿದ್ದ 13 ನೇ ವಾಕಥಾನ್ ಇದಾಗಿದೆ. ಈ ಬಾರಿಯ ಪರಿಕಲ್ಪನೆ ಗ್ರೀನ್ ವಿಷನ್ ಕ್ಲಿಯರ್ ಮಿಷನ್ ಆಗಿತ್ತು. ಸಾರ್ವಜನಿಕರಲ್ಲಿ ಪರಿಸರ ಕಾಳಜಿಯ ಮಹತ್ವದ ಬಗ್ಗೆ ಅರಿವು ಮೂಡಿಸುವುದು ಈ ವಾಕಥಾನ್ ಉದ್ದೇಶವಾಗಿತ್ತು.

ಕಾರ್ಪೊರೇಟ್ ಸಿಬ್ಬಂದಿ, ಸ್ವಯಂ ಸೇವಾ ಸಂಘಟನೆಗಳು, ವಿದ್ಯಾರ್ಥಿಗಳು, ವಿಕಲಚೇತನರು ಸೇರಿದಂತೆ ಹಲವು ಕ್ಷೇತ್ರಗಳ 10 ಸಾವಿರಕ್ಕೂ ಹೆಚ್ಚು ಜನರು ಹಸಿರು ಬದಲಾವಣೆಯ ವಾಕ್ ನಲ್ಲಿ ಹೆಜ್ಜೆ ಹಾಕಿದರು.
ಈ ಸಂದರ್ಭದಲ್ಲಿ ಉತ್ತರ ಪ್ರದೇಶ ಸರ್ಕಾರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಸ್ವಾತಿ ಸಿಂಗ್ ಮಾತನಾಡಿ, ಇಡೀ ದೇಶದಲ್ಲೇ ಅತಿ ಹೆಚ್ಚು ಅಂಗವಿಕಲರಿರುವ ಪ್ರದೇಶ ಉತ್ತರ ಪ್ರದೇಶವಾಗಿದೆ. ಅವರ ಕಲ್ಯಾಣಕ್ಕಾಗಿ ಸಾಕಷ್ಟು ಯೋಜನೆಗಳನ್ನು ಜಾರಿ ಮಾಡಿದ್ದೇವೆ. ಎಂದರು.
ತ್ಯಾಜ್ಯ ಸಂಸ್ಕರಿಸಲು ವಿವಿಧ ರೀತಿಯ ಘಟಕಗಳನ್ನು ತೆರೆಯಲಾಗಿದೆ. ಒಮ್ಮೆ ಎಲ್ಲರೂ ಬೇಟಿ ನೀಡಿ, ಮೊದಲಿನ ಉತ್ತರ ಪ್ರದೇಶವಾಗಿ ಉಳಿದಿಲ್ಲ ಈಗ ಸಾಕಷ್ಟು ಬದಲಾವಣೆಯಾಗಿದೆ. ನನಗೆ ಮಹಿಳಾ ಅಂಧರ ಕ್ರಿಕೇಟ್ ನೋಡಿದರೆ ತುಂಬಾ ಸಂತೋಷವಾಗುತ್ತದೆ.

ಅಂಧರು ತಮ್ಮ ಅಂಧತ್ವವನ್ನು ಬದಿಗೊತ್ತಿ ತಮ್ಮ ಅವಕಾಶ ಕೊಡಿ ಸಾಧಿಸಿ ತೋರಿಸುತ್ತೇವೆ ಎನ್ನುವ ಛಲವನ್ನು ಬೆಳೆಸಿಕೊಂಡಿರುವುದು ಸಂತೋಷದ ಸಂಗತಿ ಎಂದು ಹೇಳಿದರು.
ನಟಿ ಪ್ರಿಯಾಂಕ ಉಪೇಂದ್ರ, ಇಂಡಿಯನ್ ಯೂತ್ ಕಾಂಗ್ರೆಸ್ನ ಬೆಂಗಳೂರು ಘಟಕದ ಉಪಾಧ್ಯಕ್ಷೆ ಸೌಮ್ಯ ರೆಡ್ಡಿ, ಕಾರ್ಪೊರೇಟರ್ ನಾಗರಾಜು, ಸಮರ್ಥನಂ ಟ್ರಸ್ಟ್ ವ್ಯವಸ್ಥಾಪಕ ಟ್ರಸ್ಟಿ ಮಹಂತೇಶ್ ಜಿ.ಕೆ ಪಾಲ್ಗೊಂಡಿದ್ದರು.
-
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
LPG Crisis: ಎಲ್ಪಿಜಿ ಬಿಕ್ಕಟ್ಟಿನ ಸುಳಿಯಲ್ಲಿ ಭಾರತದ ಪ್ರಮುಖ ನಗರಗಳು: ದರ್ಶಿನಿಗಳು ಬಂದ್, ಪಿಜಿಗಳಲ್ಲಿ ಮೆನು ಚೇಂಜ್ -
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Gas Bill: ಇಡ್ಲಿ-ವಡೆ ಜೊತೆಗೆ ಗ್ಯಾಸ್ ಶುಲ್ಕ ವಿಧಿಸಿದ ರೆಸ್ಟೋರೆಂಟ್!: ದಂಗಾದ ಗ್ರಾಹಕರು, ಇಲ್ಲಿವೆ ನೋಡಿ ದರಗಳು -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ












Click it and Unblock the Notifications