ಪರಿಸರ ಜಾಗೃತಿಯ ಪಾಠ ಬೋಧಿಸಿದ ಬೆಂಗಳೂರು ವಾಕಥಾನ್
ಬೆಂಗಳೂರು, ಡಿಸೆಂಬರ್ 09 : ಸಮರ್ಥನಂ ಅಂಕವಿಕಲ ಸಂಸ್ಥೆ ಹಾಗೂ ಅಲರ್ಗನ್ ಸಹಯೋಗದಲ್ಲಿ ಹಸಿರಿನೆಡೆಗೆ ನಡಿಗೆ ' ಗ್ರೀನ್ ವಿಷನ್ ಕ್ಲಿಯರ್ ವಿಷನ್' ಎಂಬ ವಿನೂತನ ಕಾರ್ಯಕ್ರಮ ಶನಿವಾರ ಜಯನಗರದ ಕಿತ್ತೂರು ರಾಣಿ ಚೆನ್ನಮ್ಮ ಸಭಾಂಗಣದಲ್ಲಿ ನಡೆಯಿತು.
ಸಮರ್ಥನಂ ಸಂಸ್ಥೆ ಆಯೋಜಿಸಿದ್ದ 13 ನೇ ವಾಕಥಾನ್ ಇದಾಗಿದೆ. ಈ ಬಾರಿಯ ಪರಿಕಲ್ಪನೆ ಗ್ರೀನ್ ವಿಷನ್ ಕ್ಲಿಯರ್ ಮಿಷನ್ ಆಗಿತ್ತು. ಸಾರ್ವಜನಿಕರಲ್ಲಿ ಪರಿಸರ ಕಾಳಜಿಯ ಮಹತ್ವದ ಬಗ್ಗೆ ಅರಿವು ಮೂಡಿಸುವುದು ಈ ವಾಕಥಾನ್ ಉದ್ದೇಶವಾಗಿತ್ತು.

ಕಾರ್ಪೊರೇಟ್ ಸಿಬ್ಬಂದಿ, ಸ್ವಯಂ ಸೇವಾ ಸಂಘಟನೆಗಳು, ವಿದ್ಯಾರ್ಥಿಗಳು, ವಿಕಲಚೇತನರು ಸೇರಿದಂತೆ ಹಲವು ಕ್ಷೇತ್ರಗಳ 10 ಸಾವಿರಕ್ಕೂ ಹೆಚ್ಚು ಜನರು ಹಸಿರು ಬದಲಾವಣೆಯ ವಾಕ್ ನಲ್ಲಿ ಹೆಜ್ಜೆ ಹಾಕಿದರು.
ಈ ಸಂದರ್ಭದಲ್ಲಿ ಉತ್ತರ ಪ್ರದೇಶ ಸರ್ಕಾರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಸ್ವಾತಿ ಸಿಂಗ್ ಮಾತನಾಡಿ, ಇಡೀ ದೇಶದಲ್ಲೇ ಅತಿ ಹೆಚ್ಚು ಅಂಗವಿಕಲರಿರುವ ಪ್ರದೇಶ ಉತ್ತರ ಪ್ರದೇಶವಾಗಿದೆ. ಅವರ ಕಲ್ಯಾಣಕ್ಕಾಗಿ ಸಾಕಷ್ಟು ಯೋಜನೆಗಳನ್ನು ಜಾರಿ ಮಾಡಿದ್ದೇವೆ. ಎಂದರು.
ತ್ಯಾಜ್ಯ ಸಂಸ್ಕರಿಸಲು ವಿವಿಧ ರೀತಿಯ ಘಟಕಗಳನ್ನು ತೆರೆಯಲಾಗಿದೆ. ಒಮ್ಮೆ ಎಲ್ಲರೂ ಬೇಟಿ ನೀಡಿ, ಮೊದಲಿನ ಉತ್ತರ ಪ್ರದೇಶವಾಗಿ ಉಳಿದಿಲ್ಲ ಈಗ ಸಾಕಷ್ಟು ಬದಲಾವಣೆಯಾಗಿದೆ. ನನಗೆ ಮಹಿಳಾ ಅಂಧರ ಕ್ರಿಕೇಟ್ ನೋಡಿದರೆ ತುಂಬಾ ಸಂತೋಷವಾಗುತ್ತದೆ.

ಅಂಧರು ತಮ್ಮ ಅಂಧತ್ವವನ್ನು ಬದಿಗೊತ್ತಿ ತಮ್ಮ ಅವಕಾಶ ಕೊಡಿ ಸಾಧಿಸಿ ತೋರಿಸುತ್ತೇವೆ ಎನ್ನುವ ಛಲವನ್ನು ಬೆಳೆಸಿಕೊಂಡಿರುವುದು ಸಂತೋಷದ ಸಂಗತಿ ಎಂದು ಹೇಳಿದರು.
ನಟಿ ಪ್ರಿಯಾಂಕ ಉಪೇಂದ್ರ, ಇಂಡಿಯನ್ ಯೂತ್ ಕಾಂಗ್ರೆಸ್ನ ಬೆಂಗಳೂರು ಘಟಕದ ಉಪಾಧ್ಯಕ್ಷೆ ಸೌಮ್ಯ ರೆಡ್ಡಿ, ಕಾರ್ಪೊರೇಟರ್ ನಾಗರಾಜು, ಸಮರ್ಥನಂ ಟ್ರಸ್ಟ್ ವ್ಯವಸ್ಥಾಪಕ ಟ್ರಸ್ಟಿ ಮಹಂತೇಶ್ ಜಿ.ಕೆ ಪಾಲ್ಗೊಂಡಿದ್ದರು.
-
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ












Click it and Unblock the Notifications