ಬೆಂಗಳೂರು ಸ್ಫೋಟದ ಹೊಣೆ ಹೊತ್ತಿದ್ದ ಅಬ್ದುಲ್ ಪೊಲೀಸರಿಗೆ ಸಿಕ್ಕ!
ಬೆಂಗಳೂರು, ಡಿ. 30 : 'ಬೆಂಗಳೂರಿನಲ್ಲಿ ಬಾಂಬ್ ಸ್ಫೋಟ ಮಾಡಿದ್ದು ನಾನೇ, ಮೆಹದಿಯನ್ನು ಬಿಡುಗಡೆ ಮಾಡದಿದ್ದರೆ ಇನ್ನೆರಡು ದಿನದಲ್ಲಿ ಮತ್ತೆ ಸ್ಫೋಟ ಮಾಡುತ್ತೇನೆ' ಎಂದು ಟ್ವಿಟ್ ಮಾಡಿದ್ದ ಅಬ್ದುಲ್ ಖಾನ್ನನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ.
ಅಬ್ದುಲ್ ಖಾನ್ ಎಂಬಾತ ತನ್ನ ಟ್ವಿಟರ್ ಖಾತೆಯಿಂದ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್, ಕಾನೂನು ಸಚಿವ ಡಿ.ವಿ.ಸದಾನಂದ ಗೌಡ, ಕರ್ನಾಟಕ ಹಲವು ಮಾಧ್ಯಮಗಳಿಗೆ, ಬೆಂಗಳೂರು ಪೊಲೀಸರಿಗೆ 'ಬೆಂಗಳೂರಿನಲ್ಲಿ ಬಾಂಬ್ ಸ್ಫೋಟಿಸಿದ್ದು ನಾನೇ' ಎಂದು ಸೋಮವಾರ ಸಂಜೆ ಟ್ವಿಟ್ ಮಾಡಿದ್ದ. [ಭವಾನಿ ಬದುಕಿನ ಹಳಿ ತಪ್ಪಿಸಿದ ವಿಧಿಯ ಅಟ್ಟಹಾಸ!]

'ಮೆಹದಿಯನ್ನು ಬಿಡುಗಡೆ ಮಾಡದಿದ್ದರೆ, ಇನ್ನೆರಡು ದಿನದಲ್ಲಿ ಬೆಂಗಳೂರಿನಲ್ಲಿ ಪುನಃ ಬಾಂಬ್ ಸ್ಫೋಟ ಮಾಡಲಿದ್ದೇನೆ' ಎಂದು ಬೆದರಿಕೆ ಹಾಕಿದ್ದ, 'ನನ್ನನ್ನು ಹಿಡಿಯಿರಿ ನೋಡೋಣ ಎಂದು ಸವಾಲು ಎಸೆದಿದ್ದ'. ನಗರ ಪೊಲೀಸ್ ಆಯುಕ್ತ ಎಂ.ಎನ್.ರೆಡ್ಡಿ ಅವರು, ಇದು ನಕಲಿ ಟ್ವಿಟ್ ಜನರು ಆತಂಕ ಪಡುವ ಅಗತ್ಯವಿಲ್ಲ ಎಂದು ಸ್ಪಷ್ಟನೆ ನೀಡಿದ್ದರು. [ಸ್ಫೋಟದ ತನಿಖೆಗೆ ವಿಶೇಷ ತಂಡ : ಸಿಎಂ]

ಟ್ವಿಟ್ ಬಗ್ಗೆ ಕೇಂದ್ರ ಕಾನೂನು ಸಚಿವ ಡಿ.ವಿ.ಸದಾನಂದ ಗೌಡರ ಪರವಾಗಿ ಬೆಂಗಳೂರು ಪೊಲೀಸರಿಗೆ ದೂರು ನೀಡಲಾಗಿತ್ತು. ಟ್ವಿಟ್ ಮಾಡಿದ್ದ ಅಬ್ದುಲ್ ಖಾನ್ ನಂತರ ಖಾತೆಯನ್ನು ವಜಾಗೊಳಿಸಿದ್ದ. ಟ್ವೀಟ್ ಬಂದ ಐಪಿ ವಿಳಾಸದ ಹುಡುಕಾಟ ನಡೆಸಿದ ಪೊಲೀಸರು ಟ್ವಿಟ್ ಮಾಡಿದವನನ್ನು ಪತ್ತೆ ಹಚ್ಚಿದ್ದಾರೆ. [ಮೆಹದಿ ಬಿಸ್ವಾಸ್ ಯಾರು?]
17 ವರ್ಷದ ಹುಡುಗ : 'ಬೆಂಗಳೂರು ಸ್ಫೋಟ ನಡೆಸಿದ್ದು ನಾನೇ' ಎಂದು ಟ್ವಿಟ್ ಮಾಡಿದ್ದ ಹುಡುಗನನ್ನು ಪೊಲೀಸರು ಬಂಧಿಸಿದ್ದಾರೆ. ಈ ಕುರಿತು ಸಿಸಿಬಿ ಡಿಸಿಪಿ ಅಭಿಷೇಕ್ ಗೋಯಲ್ ಟ್ವಿಟ್ ಮಾಡಿದ್ದು, ಇದು ಮಾನಸಿಕ ಅಸ್ವಸ್ಥನ ಕೆಲಸ ಎಂದು ಸ್ಪಷ್ಟನೆ ನೀಡಿದ್ದಾರೆ. ಮಾನಸಿಕ ಒತ್ತಡಕ್ಕೆ ಒಳಗಾದ ಬಾಲಕನಿಗೆ ಎಚ್ಚರಿಕೆ ನೀಡಿ ಕಳುಹಿಸಲಾಗಿದೆ.
Secured #LatestAbdul He is a 17 year old kid Satish(name changed). Seems psychologically stressed. Talking to him &his parents.Will take n/a
— Abhishek Goyal (@goyal_abhei) December 29, 2014 -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications