ಬೆಂಗಳೂರು ಸ್ಫೋಟದ ಹೊಣೆ ಹೊತ್ತಿದ್ದ ಅಬ್ದುಲ್ ಪೊಲೀಸರಿಗೆ ಸಿಕ್ಕ!
ಬೆಂಗಳೂರು, ಡಿ. 30 : 'ಬೆಂಗಳೂರಿನಲ್ಲಿ ಬಾಂಬ್ ಸ್ಫೋಟ ಮಾಡಿದ್ದು ನಾನೇ, ಮೆಹದಿಯನ್ನು ಬಿಡುಗಡೆ ಮಾಡದಿದ್ದರೆ ಇನ್ನೆರಡು ದಿನದಲ್ಲಿ ಮತ್ತೆ ಸ್ಫೋಟ ಮಾಡುತ್ತೇನೆ' ಎಂದು ಟ್ವಿಟ್ ಮಾಡಿದ್ದ ಅಬ್ದುಲ್ ಖಾನ್ನನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ.
ಅಬ್ದುಲ್ ಖಾನ್ ಎಂಬಾತ ತನ್ನ ಟ್ವಿಟರ್ ಖಾತೆಯಿಂದ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್, ಕಾನೂನು ಸಚಿವ ಡಿ.ವಿ.ಸದಾನಂದ ಗೌಡ, ಕರ್ನಾಟಕ ಹಲವು ಮಾಧ್ಯಮಗಳಿಗೆ, ಬೆಂಗಳೂರು ಪೊಲೀಸರಿಗೆ 'ಬೆಂಗಳೂರಿನಲ್ಲಿ ಬಾಂಬ್ ಸ್ಫೋಟಿಸಿದ್ದು ನಾನೇ' ಎಂದು ಸೋಮವಾರ ಸಂಜೆ ಟ್ವಿಟ್ ಮಾಡಿದ್ದ. [ಭವಾನಿ ಬದುಕಿನ ಹಳಿ ತಪ್ಪಿಸಿದ ವಿಧಿಯ ಅಟ್ಟಹಾಸ!]

'ಮೆಹದಿಯನ್ನು ಬಿಡುಗಡೆ ಮಾಡದಿದ್ದರೆ, ಇನ್ನೆರಡು ದಿನದಲ್ಲಿ ಬೆಂಗಳೂರಿನಲ್ಲಿ ಪುನಃ ಬಾಂಬ್ ಸ್ಫೋಟ ಮಾಡಲಿದ್ದೇನೆ' ಎಂದು ಬೆದರಿಕೆ ಹಾಕಿದ್ದ, 'ನನ್ನನ್ನು ಹಿಡಿಯಿರಿ ನೋಡೋಣ ಎಂದು ಸವಾಲು ಎಸೆದಿದ್ದ'. ನಗರ ಪೊಲೀಸ್ ಆಯುಕ್ತ ಎಂ.ಎನ್.ರೆಡ್ಡಿ ಅವರು, ಇದು ನಕಲಿ ಟ್ವಿಟ್ ಜನರು ಆತಂಕ ಪಡುವ ಅಗತ್ಯವಿಲ್ಲ ಎಂದು ಸ್ಪಷ್ಟನೆ ನೀಡಿದ್ದರು. [ಸ್ಫೋಟದ ತನಿಖೆಗೆ ವಿಶೇಷ ತಂಡ : ಸಿಎಂ]

ಟ್ವಿಟ್ ಬಗ್ಗೆ ಕೇಂದ್ರ ಕಾನೂನು ಸಚಿವ ಡಿ.ವಿ.ಸದಾನಂದ ಗೌಡರ ಪರವಾಗಿ ಬೆಂಗಳೂರು ಪೊಲೀಸರಿಗೆ ದೂರು ನೀಡಲಾಗಿತ್ತು. ಟ್ವಿಟ್ ಮಾಡಿದ್ದ ಅಬ್ದುಲ್ ಖಾನ್ ನಂತರ ಖಾತೆಯನ್ನು ವಜಾಗೊಳಿಸಿದ್ದ. ಟ್ವೀಟ್ ಬಂದ ಐಪಿ ವಿಳಾಸದ ಹುಡುಕಾಟ ನಡೆಸಿದ ಪೊಲೀಸರು ಟ್ವಿಟ್ ಮಾಡಿದವನನ್ನು ಪತ್ತೆ ಹಚ್ಚಿದ್ದಾರೆ. [ಮೆಹದಿ ಬಿಸ್ವಾಸ್ ಯಾರು?]
17 ವರ್ಷದ ಹುಡುಗ : 'ಬೆಂಗಳೂರು ಸ್ಫೋಟ ನಡೆಸಿದ್ದು ನಾನೇ' ಎಂದು ಟ್ವಿಟ್ ಮಾಡಿದ್ದ ಹುಡುಗನನ್ನು ಪೊಲೀಸರು ಬಂಧಿಸಿದ್ದಾರೆ. ಈ ಕುರಿತು ಸಿಸಿಬಿ ಡಿಸಿಪಿ ಅಭಿಷೇಕ್ ಗೋಯಲ್ ಟ್ವಿಟ್ ಮಾಡಿದ್ದು, ಇದು ಮಾನಸಿಕ ಅಸ್ವಸ್ಥನ ಕೆಲಸ ಎಂದು ಸ್ಪಷ್ಟನೆ ನೀಡಿದ್ದಾರೆ. ಮಾನಸಿಕ ಒತ್ತಡಕ್ಕೆ ಒಳಗಾದ ಬಾಲಕನಿಗೆ ಎಚ್ಚರಿಕೆ ನೀಡಿ ಕಳುಹಿಸಲಾಗಿದೆ.
Secured #LatestAbdul He is a 17 year old kid Satish(name changed). Seems psychologically stressed. Talking to him &his parents.Will take n/a
— Abhishek Goyal (@goyal_abhei) December 29, 2014 -
Property: ಕಟ್ಟಡ ಮಾಲೀಕರಿಗೆ ಬಂಪರ್ ಆಫರ್: ಶೇ.15ರವರೆಗಿನ ನಿಯಮ ಉಲ್ಲಂಘನೆ ಸಕ್ರಮಕ್ಕೆ ಜಿಬಿಎ ಅವಕಾಶ! -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ












Click it and Unblock the Notifications