ಪೊಲೀಸಪ್ಪನ ಪತ್ನಿ ಕೊರಳಿಗೆ ಕೈ ಹಾಕಿದ ಸರಗಳ್ಳ
ಬೆಂಗಳೂರು, ಜನವರಿ 15: ಪೀಣ್ಯದ ಎಚ್ಎಂಟಿ ಬಡಾವಣೆಯಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ಪತ್ನಿ ಕೊರಳಲ್ಲಿದ್ದ ಚಿನ್ನದ ಸರವನ್ನು ಸರಗಳ್ಳನೊಬ್ಬ ಕಿತ್ತುಕೊಂಡು ಹೋಗಿದ್ದಾನೆ.
ಇನ್ಸ್ಪೆಕ್ಟರ್ ಕೆಂಚೇಗೌಡ ಪತ್ನಿ ಗಂಗಮ್ಮ ತೀರ್ವ ಪ್ರತಿರೋಧ ಒಡ್ಡಿದರೂ ಕೂಡ ಅಮಾನುಷವಾಗಿ ಆಕೆಯನ್ನು ಕೆಳಕ್ಕೆ ಬೀಳಿಸಿ ಕತ್ತಿನ ಸರ ಕಿತ್ತುಕೊಂಡು ಪರಾರಿಯಾದ ದೃಶ್ಯ ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದೆ.
ಸರಗಳ್ಳನನ್ನು 1.5 ಕಿ.ಮೀ ಬೆನ್ನುಹತ್ತಿದೆ ಆದರೆ ತಪ್ಪಿಸಿಕೊಂಡು ಬಿಟ್ಟ ಎಂದು ಇನ್ಸ್ಪೆಕ್ಟರ್ ಕೆಂಚೇಗೌಡ ಅವರು ಹೇಳಿದ್ದಾರೆ. ಕೆಂಚೇಗೌಡ ಅವರು ಪ್ರಕರಣ ದಾಖಲಿಸಿದ್ದಾರೆ.

15 ಗಂಟೆ ಅವಧಿಯಲ್ಲಿ ಬೆಂಗಳೂರಿನಲ್ಲಿ ಮೂರು ಸರಗಳ್ಳತನ ಪ್ರಕರಣಗಳು ದಾಖಲಾಗಿದ್ದು, ಪೀಣ್ಯದಲ್ಲಿ ಎರಡು ಮತ್ತು ಬಗಲಗುಂಟೆಯಲ್ಲಿ ಒಂದು ಪ್ರಕರಣ ದಾಖಲಾಗಿದೆ. ಕುಖ್ಯಾತ ಸರಗಳ್ಳರ ತಂಡ ಇರಾನಿ ಗ್ಯಾಂಗ್ ಈ ಸರಗಳ್ಳತನ ಮಾಡಿವೆ ಎಂದು ಅನುಮಾನಿಸಲಾಗಿದೆ.
ಇರಾನಿ ಗ್ಯಾಂಗ್ನ ಸದಸ್ಯರನ್ನು ಬಂಧಿಸಿದ್ದೇವೆ, ಸ್ಥಳೀಯ ಸರಗಳ್ಳರನ್ನೂ ಬಂಧಿಸಿದ್ದೇವೆ ಎಂದು ಈ ಹಿಂದೆ ಪೊಲೀಸರು ತಿಳಿಸಿದ್ದರು, ಆದರೆ ಈಗ ಮತ್ತೆ ಸರಗಳ್ಳತನ ಆಗಿರುವುದು ನಗರವಾಸಿಗಳ ಆತಂಕಕ್ಕೆ ಕಾರಣವಾಗಿದೆ.
ನಗರದಲ್ಲಿ ಮತ್ತೆ ಆತಂಕ ಸೃಷ್ಠಿಸಿರುವ ಸರಗಳ್ಳತನವನ್ನು ಪೊಲೀಸ್ ಆಯುಕ್ತ ಸುನಿಲ್ ಕುಮಾರ್ ಗಂಭೀರವಾಗಿ ಪರಿಗಣಿಸಿದ್ದು, ಶೀಘ್ರವಾಗಿ ಆರೋಪಿಗಳ ಪತ್ತೆಮಾಡುವಂತೆ ಸೂಚಿಸಿದ್ದಾರೆ.
ಪೊಲೀಸರು ನಗರದೆಲ್ಲೆಡೆ ನಾಕಾಬಂಧಿ ಹಾಕಿದ್ದು, ಸರಗಳ್ಳರಿಗಾಗಿ ಹುಡುಕಾಟ ನಡೆಸಿದ್ದಾರೆ.
-
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications