ಪೊಲೀಸಪ್ಪನ ಪತ್ನಿ ಕೊರಳಿಗೆ ಕೈ ಹಾಕಿದ ಸರಗಳ್ಳ
ಬೆಂಗಳೂರು, ಜನವರಿ 15: ಪೀಣ್ಯದ ಎಚ್ಎಂಟಿ ಬಡಾವಣೆಯಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ಪತ್ನಿ ಕೊರಳಲ್ಲಿದ್ದ ಚಿನ್ನದ ಸರವನ್ನು ಸರಗಳ್ಳನೊಬ್ಬ ಕಿತ್ತುಕೊಂಡು ಹೋಗಿದ್ದಾನೆ.
ಇನ್ಸ್ಪೆಕ್ಟರ್ ಕೆಂಚೇಗೌಡ ಪತ್ನಿ ಗಂಗಮ್ಮ ತೀರ್ವ ಪ್ರತಿರೋಧ ಒಡ್ಡಿದರೂ ಕೂಡ ಅಮಾನುಷವಾಗಿ ಆಕೆಯನ್ನು ಕೆಳಕ್ಕೆ ಬೀಳಿಸಿ ಕತ್ತಿನ ಸರ ಕಿತ್ತುಕೊಂಡು ಪರಾರಿಯಾದ ದೃಶ್ಯ ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದೆ.
ಸರಗಳ್ಳನನ್ನು 1.5 ಕಿ.ಮೀ ಬೆನ್ನುಹತ್ತಿದೆ ಆದರೆ ತಪ್ಪಿಸಿಕೊಂಡು ಬಿಟ್ಟ ಎಂದು ಇನ್ಸ್ಪೆಕ್ಟರ್ ಕೆಂಚೇಗೌಡ ಅವರು ಹೇಳಿದ್ದಾರೆ. ಕೆಂಚೇಗೌಡ ಅವರು ಪ್ರಕರಣ ದಾಖಲಿಸಿದ್ದಾರೆ.

15 ಗಂಟೆ ಅವಧಿಯಲ್ಲಿ ಬೆಂಗಳೂರಿನಲ್ಲಿ ಮೂರು ಸರಗಳ್ಳತನ ಪ್ರಕರಣಗಳು ದಾಖಲಾಗಿದ್ದು, ಪೀಣ್ಯದಲ್ಲಿ ಎರಡು ಮತ್ತು ಬಗಲಗುಂಟೆಯಲ್ಲಿ ಒಂದು ಪ್ರಕರಣ ದಾಖಲಾಗಿದೆ. ಕುಖ್ಯಾತ ಸರಗಳ್ಳರ ತಂಡ ಇರಾನಿ ಗ್ಯಾಂಗ್ ಈ ಸರಗಳ್ಳತನ ಮಾಡಿವೆ ಎಂದು ಅನುಮಾನಿಸಲಾಗಿದೆ.
ಇರಾನಿ ಗ್ಯಾಂಗ್ನ ಸದಸ್ಯರನ್ನು ಬಂಧಿಸಿದ್ದೇವೆ, ಸ್ಥಳೀಯ ಸರಗಳ್ಳರನ್ನೂ ಬಂಧಿಸಿದ್ದೇವೆ ಎಂದು ಈ ಹಿಂದೆ ಪೊಲೀಸರು ತಿಳಿಸಿದ್ದರು, ಆದರೆ ಈಗ ಮತ್ತೆ ಸರಗಳ್ಳತನ ಆಗಿರುವುದು ನಗರವಾಸಿಗಳ ಆತಂಕಕ್ಕೆ ಕಾರಣವಾಗಿದೆ.
ನಗರದಲ್ಲಿ ಮತ್ತೆ ಆತಂಕ ಸೃಷ್ಠಿಸಿರುವ ಸರಗಳ್ಳತನವನ್ನು ಪೊಲೀಸ್ ಆಯುಕ್ತ ಸುನಿಲ್ ಕುಮಾರ್ ಗಂಭೀರವಾಗಿ ಪರಿಗಣಿಸಿದ್ದು, ಶೀಘ್ರವಾಗಿ ಆರೋಪಿಗಳ ಪತ್ತೆಮಾಡುವಂತೆ ಸೂಚಿಸಿದ್ದಾರೆ.
ಪೊಲೀಸರು ನಗರದೆಲ್ಲೆಡೆ ನಾಕಾಬಂಧಿ ಹಾಕಿದ್ದು, ಸರಗಳ್ಳರಿಗಾಗಿ ಹುಡುಕಾಟ ನಡೆಸಿದ್ದಾರೆ.
-
Bengaluru-Hyderabad ಬುಲೆಟ್ ಟ್ರೈನ್: ಕೇವಲ 2 ಗಂಟೆ ಪ್ರಯಾಣ, 626 ಕಿಮೀ ಉದ್ದದ ಹಾದಿಯಲ್ಲಿ 12 ನಿಲ್ದಾಣಗಳು -
Bengaluru: ‘92 ಲಕ್ಷದ ಪ್ಯಾಕೇಜ್ ಇದ್ದರೂ ಉಳಿಯಲಿಲ್ಲ ಕೆಲಸ’; ಒಂದೇ ದಿನ ಶೇ. 40ರಷ್ಟು ಸಿಬ್ಬಂದಿ ವಜಾ ಮಾಡಿದ ಐಟಿ ಕಂಪನಿ -
Gold Rate: ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಹೀಗಿದೆ, ನಿಮ್ಮ ನಗರದ ದರ ಪರಿಶೀಲಿಸಿ -
ದುಬೈಯಿಂದ ತಾಯ್ನಾಡಿಗೆ ಮರಳಿದ ಕನ್ನಡಿಗರು: ಪಿ.ವಿ ಸಿಂಧು, ಭೋಜೇಗೌಡ ಸೇರಿದಂತೆ ಹಲವರು ಬೆಂಗಳೂರಿಗೆ ವಾಪಾಸ್ -
ಒಂದೇ ವರ್ಷದಲ್ಲಿ 800 ಕೋಟಿ ರೂ ಮೌಲ್ಯದ ಕಂಪನಿ ಕಟ್ಟಿದ 23ರ ಹರೆಯದ ಅಂಜಲಿ ಸರ್ದಾನಾ -
Viral : ರ್ಯಾಪಿಡೋ ಬುಕ್ ಮಾಡಿದವನಿಗೆ ಕಾದಿತ್ತು ಬಿಗ್ ಶಾಕ್: ತನ್ನ ಶಾಲೆಯ 'ಕ್ಲಾಸ್ ಟಾಪರ್' ಈಗ ರ್ಯಾಪಿಡೋ ರೈಡರ್ -
PV Sindhu: ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧು ಪತಿ ಸ್ವಿಮ್ಮಿಂಗ್ ಪೂಲ್ನಲ್ಲಿ ಈಜು ಸಾಹಸ: ಫಿಟ್ನೆಸ್ ತಜ್ಞರು ಹೇಳಿದ್ದೇನು? -
Dog Satish: ಇನ್ಸ್ಟಾಗ್ರಾಂ ಯಾರ ಅಪ್ಪಂದೂ ಅಲ್ಲ, ವಿಡಿಯೋ ಡಿಲೀಟ್ ಮಾಡಲ್ಲ, ನನಗೆ ಮೀಟರ್ ಇದೆ: ಡಾಗ್ ಸತೀಶ್ -
Vrial News: ಕೆಲಸದಿಂದ ತೆಗೆದ ಬಳಿಕ ಪುಕ್ಕಟೆ ಸಹಾಯ ಕೇಳಿದ ಮಾಜಿ ಬಾಸ್: ನೌಕರ ಕೊಟ್ಟ ಉತ್ತರ ವೈರಲ್ -
Toxic: ಅವಸರಕ್ಕಿಂತ ತಾಳ್ಮೆ ಮುಖ್ಯ: ಟಾಕ್ಸಿಕ್ ಬಿಡುಗಡೆ ಮುಂದೂಡಿದ ಬೆನ್ನಲ್ಲೇ ಯಶ್ ಬೆಂಬಲಕ್ಕೆ ನಿಂತ ಅಭಿಮಾನಿಗಳು -
Gold Rate: ಚಿನ್ನ, ಬೆಳ್ಳಿ ದರದಲ್ಲಿ ಏರಿಳಿತ; ಬೆಂಗಳೂರಿನಲ್ಲಿ ಇಂದು ಚಿನ್ನದ ಬೆಲೆ ಎಷ್ಟಿದೆ? -
Sourav Ganguly: ಟಿ20 ವಿಶ್ವಕಪ್ 2026; ಸಂಜು ಆಟಕ್ಕೆ ಮನಸೋತು ಬಿಸಿಸಿಐಗೆ ಬಿಸಿ ಮುಟ್ಟಿಸಿದ 'ದಾದಾ' ಸೌರವ್ ಗಂಗೂಲಿ












Click it and Unblock the Notifications