ಬೆಂಗಳೂರಿನಲ್ಲಿ ದಾಳಿ ನಡೆಸಲು ಪರಪ್ಪನ ಅಗ್ರಹಾರದಲ್ಲಿ ಭಯೋತ್ಪಾದನೆ ಸಂಚು ಪ್ರಕರಣ; ಮೂವರಿಗೆ ಶಿಕ್ಷೆ
2012ರಲ್ಲಿ ವಿವಿಧ ಪ್ರಕರಣಗಳಲ್ಲಿ ಬಂಧಿತರಾಗಿ ಈ ಮೂವರು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಭೇಟಿಯಾದರು ಎಂದು ಪೊಲೀಸರು ತಿಳಿಸಿದ್ದಾರೆ
ಬೆಂಗಳೂರು, ಫೆಬ್ರವರಿ. 24: ಬೆಂಗಳೂರಿನಲ್ಲಿ ದಾಳಿ ನಡೆಸಲು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಸಂಕೀರ್ಣದಲ್ಲಿ ನಡೆದಿದ್ದ ಭಯೋತ್ಪಾದಕ ಸಂಚು ಪ್ರಕರಣದಲ್ಲಿ ಪಾಕಿಸ್ತಾನಿ ಪ್ರಜೆ ಸೇರಿದಂತೆ ಮೂವರು ಆರೋಪಿಗಳಿಗೆ ಶಿಕ್ಷೆ ವಿಧಿಸಲಾಗಿದೆ. ಪಾಕಿಸ್ತಾನ ಮೂಲದ ನಿಷೇಧಿತ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾಗೆ ಯುವಕರನ್ನು ನೇಮಿಸಿಕೊಳ್ಳಲು ಕೂಡ ಇಲ್ಲಿ ಸಂಚು ನಡೆಸಲಾಗಿತ್ತು.
ಆರೋಪಿಗಳಾದ ಬೆಂಗಳೂರಿನ ಸೈಯದ್ ಅಬ್ದುಲ್ ರೆಹಮಾನ್, ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ಮೂಲದ ಅಫ್ಸರ್ ಪಾಷಾ ಮತ್ತು ಕರಾಚಿ ಮೂಲದ ಮೊಹಮ್ಮದ್ ಫಹಾದ್ ಖೋಯಾ ಅವರಿಗೆ ಶಿಕ್ಷೆ ವಿಧಿಸಿರುವ ವಿಶೇಷ ನ್ಯಾಯಾಲಯ ಶಿಕ್ಷೆಯ ಪ್ರಮಾಣವನ್ನು ಕಾಯ್ದಿರಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾನೂನುಬಾಹಿರ ಚಟುವಟಿಕೆಗಳ (ತಡೆ) ಕಾಯಿದೆ, 1967, ಸ್ಫೋಟಕ ವಸ್ತುಗಳ ಕಾಯ್ದೆ, 1206 (1956 ಮತ್ತು 195) ಮತ್ತು ಭಾರತೀಯ ದಂಡ ಸಂಹಿತೆ ಯ ಅಡಿಯಲ್ಲಿ ದೋಷಿಗಳೆಂದು ತೀರ್ಪು ನೀಡಿದ್ದಾರೆ.

2012ರಲ್ಲಿ ವಿವಿಧ ಪ್ರಕರಣಗಳಲ್ಲಿ ಬಂಧಿತರಾಗಿ ಈ ಮೂವರು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಭೇಟಿಯಾದರು ಎಂದು ಪೊಲೀಸರು ತಿಳಿಸಿದ್ದಾರೆ. ಮೈಸೂರು ಭಯೋತ್ಪಾದನೆ ಪ್ರಕರಣದಲ್ಲಿ ಪಾಕಿಸ್ತಾನಿ ಪ್ರಜೆ ಮೊಹಮ್ಮದ್ ಫಹಾದ್ ಖೋಯಾಗೆ 10 ವರ್ಷ ಜೈಲು ಶಿಕ್ಷೆ ಹಾಗೂ 8 ವರ್ಷ ಶಿಕ್ಷೆಯಾಗಿದೆ. 2005ರ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ (ಐಐಎಸ್ಸಿ) ದಾಳಿ ಪ್ರಕರಣದ ಅಪರಾಧಿ ಅಫ್ಸರ್ ಪಾಷಾ ಜೊತೆಗೆ ಕೋಝಿಕ್ಕೋಡ್ ಭಯೋತ್ಪಾದನೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸಿ ಬೆಂಗಳೂರಿನ ಜೈಲಿನಲ್ಲಿ ಇದ್ದಾರೆ.
ಮೈಸೂರು ರಸ್ತೆಯ ಟಿಪ್ಪುನಗರ ಮೂಲದ ನಗರ ಮೂಲದ ರೌಡಿ ಶೀಟರ್ ಸೈಯದ್ ಅಬ್ದುಲ್ ರೆಹಮಾನ್, ಕೊಲೆ, ಡಕಾಯಿತಿ ಸೇರಿದಂತೆ ಹಲವು ಪ್ರಕರಣಗಳಲ್ಲಿ 2011 ರಲ್ಲಿ ಬಂಧಿತರಾಗಿದ್ದಾರೆ. ಜೈಲಿನಲ್ಲಿ ಮೊಹಮ್ಮದ್ ಫಹಾದ್ ಖೋಯಾ ಮತ್ತು ಅಫ್ಸರ್ ಪಾಷಾ ಸೇರಿ ಆತನನ್ನು ನಿಷೇಧಿತ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾಗೆ ಸೇರಲು ಒಪ್ಪಿಸಿದ್ದಾರೆ.
ಬೆಂಗಳೂರಿನ ಸೈಯದ್ ಅಬ್ದುಲ್ ರೆಹಮಾನ್ ಜೈಲಿನಿಂದ ಜಾಮೀನಿನ ಮೇಲೆ ಹೊರಬಂದ ನಂತರ, ಭಯೋತ್ಪಾದಕ ಪ್ರಕರಣದ ಆರೋಪಿಗಳಿಬ್ಬರು ಆತನ ಮೂಲಕ ಹಲವಾರು ಮುಸ್ಲಿಂ ಯುವಕರನ್ನು ಲಷ್ಕರ್ - ಎ - ತೊಯ್ಬಾಗೆ ನೇಮಿಸಿಕೊಂಡು, ನಗರದಲ್ಲಿ ಭಯೋತ್ಪಾದಕ ದಾಳಿ ನಡೆಸಲು ತಯಾರಿ ನಡೆಸುತ್ತಿದ್ದರು ಎಂದು ಪೊಲೀಸರು ಆರೋಪಿಸಿದ್ದಾರೆ.

2012 ರಲ್ಲಿ ಆರೋಪಿಗಳ ಚಟುವಟಿಕೆಗಳ ಬಗ್ಗೆ ಸುಳಿವು ಸಿಕ್ಕಿತ್ತು. ಸಿಸಿಬಿ ಭಯೋತ್ಪಾದನೆಯ ಪಿತೂರಿಯನ್ನು ಆರೋಪಿಸಿ ಹೊಸದಾಗಿ ಎಫ್ಐಆರ್ ದಾಖಲಿಸಿ ಅಬ್ದುಲ್ ರೆಹಮಾನ್ ಅವರನ್ನು ಬಂಧಿಸಿತ್ತು. ಅವರ ವಿಚಾರಣೆಯಲ್ಲಿ ಭಯೋತ್ಪಾದಕ ದಾಳಿಯು ನಡೆಯುವ ಹಂತದಲ್ಲಿರುವುದನ್ನು ಕಂಡು ಕೊಂಡಿದ್ದರು. ಈ ವೇಳೆ ಪೊಲೀಸರು ಸ್ಫೋಟಕಗಳು ಮತ್ತು ನಾಲ್ಕು ಜೀವಂತ ಗುಂಡುಗಳನ್ನು ವಶಪಡಿಸಿಕೊಂಡಿದ್ದರು.
-
Karnataka Weather: ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 39 ಡಿಗ್ರಿ ದಾಟಿದ ತಾಪಮಾನ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು












Click it and Unblock the Notifications