ಬೆಂಗಳೂರು; ಗಾಯತ್ರಿ ನಗರದ ಕರಗ ಮಹೋತ್ಸವಕ್ಕೆ ಚಾಲನೆ
ಬೆಂಗಳೂರು, ಜುಲೈ, 20: ಬೆಂಗಳೂರಿನ ಗಾಯತ್ರಿ ನಗರದಲ್ಲಿ ಬುಧವಾರದಿಂದ ನಾಲ್ಕು ದಿನಗಳ ಕಾಲ 3ನೇ ವರ್ಷದ ಕಳಷಾಭಿಷೇಕ ಹಾಗೂ ಶ್ರೀ ಶಕ್ತಿದೇವಿ ಕುರುಮಾರಿಯಮ್ಮನವರ ಕರಗ ಮಹೋತ್ಸವ ನಡೆಯುತ್ತಿದೆ. ಶ್ರೀ ಶಕ್ತಿ ಮುನೇಶ್ವರ ಸೇವಾ ಮಂಡಳಿಯಿಂದ ವಿವಿಧ ಕಾರ್ಯಕ್ರಮಗಳನ್ನು ಮಾಡಲಿದ್ದಾರೆ.
ಮಾರುತಿ ಬಡಾವಣೆಯ 3ನೇ ಮುಖ್ಯ ರಸ್ತೆಯ ಗಾಯತ್ರಿ ನಗರದಲ್ಲಿ ಜುಲೈ 20ರ ಬುಧವಾರದಿಂದ ಜುಲೈ 24ರವರೆಗೂ ಶ್ರೀ ಶಕ್ತಿದೇವಿ ಕುರುಮಾರಿಯಮ್ಮನವರ ಕರಗ ಮಹೋತ್ಸವವನ್ನು ಮಾಡಲಾಗುತ್ತದೆ. ನಾಲ್ಕು ದಿನಗಳ ಕಾಲ ನಡೆಯುವ ಕರಗದಲ್ಲಿ ನೂರಾರು ಜನರು ಪಾಲ್ಗೊಳ್ಳಲಿದ್ದಾರೆ.
ಜುಲೈ 20ರ ಬುಧವಾರ ರೇವತಿ ನಕ್ಷತ್ರ ಪುಣ್ಯಾವಚನ ಶ್ರೀ ಗಣಪತಿ ಪೂಜೆ, ಗಂಗಪೂಜೆ, ಗೋಪೂಜೆ ಕಂಕಣ ಪೂಜೆ, ಧ್ವಜಾರೋಹಣ, ಹಾಗೂ ಎಲ್ಲಾ ದೇವರುಗಳಿಗೆ ಪಂಚಾಮೃತ ಅಭಿಷೇಕ, ಮಹಾಮಂಗಳಾರತಿ ನಡೆಯಿತು.

ವಿವಿಧ ಕಲಾ ತಂಡಗಳು ಭಾಗವಹಿಸಿ ನೃತ್ಯ ಪ್ರದರ್ಶಿಸುವುದರ ಮೂಲಕ ಕರಗಕ್ಕೆ ಮೆರಗು ನೀಡಿದ್ದಾರೆ. ದೇವಿಯ ರೂಪದಲ್ಲಿ ರೌದ್ರವತಾರ ನೃತ್ಯ ಮಾಡಿ ಹಬ್ಬಕ್ಕೆ ಕಳೆ ತಂದಿದ್ದಾರೆ. ಇನ್ನು ಕೆಲವರು ಹುಲಿ ವೇಷ ಧರಿಸಿ ನೃತ್ಯ ಪ್ರರ್ಶನದ ಮೂಲಕ ಗಮನ ಸೆಳೆದಿದ್ದಾರೆ. ಇನ್ನು ಸಂಜೆ 5:30ರ ವೇಳೆಗೆ ಮಹಿಳಾ ಮಂಡಳಿಯಿಂದ ವಿವಿಧ ಕಾರ್ಯಕ್ರಮಗಳನ್ನು ಮಾಡಲಾಗುತ್ತದೆ.
ಜುಲೈ 21ರಂದು ಅಮ್ಮನವರಿಗೆ ವಿವಿಧ ರೀತಿಯ ಅಭಿಷೇಕಗಳ ಜೊತೆಗೆ, 108 ದಿಪೋತ್ಸವ, ಸೌಂದರ್ಯ ಲಹರಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಜುಲೈ 22ರಂದು ಮಹಾಮಂಗಳಾರತಿ ಮೂಲಕ ಕುರುಮಾರಿಯಮ್ಮನವರ ಹೂವಿನ ಕರಗವನ್ನು ಮಾಡಲಾಗುತ್ತದೆ. ಹೂವಿನ ಕರಗದಲ್ಲಿ ಸಹಸ್ರಾರು ಭಕ್ತರು ಪಾಲ್ಗೊಂಡು ಮೆರವಣಿಗೆ ಮಾಡಲಿದ್ದಾರೆ. ಜುಲೈ 23ರಂದು ರಕ್ತದಾನ ಶಿಬಿರ, ಅನ್ನ ಸಂತರ್ಪಣೆ ಜೊತೆಗೆ ಗಾಯನೋತ್ಸವವನ್ನು ಏರ್ಪಡಿಸಿದ್ದಾರೆ.

ಕರಗ ಮಹೋತ್ಸವದ ಕೊನೆಯ ದಿನವಾದ ಜುಲೈ 24ರಂದು ಮುನೇಶ್ವರ ಸ್ವಾಮಿಯವರಿಗೆ ಬಲಿ ಪೂಜೆ, ಅಮ್ಮನವರಿಗೆ ದೀಪದ ಆರತಿ ಕಾರ್ಯಕ್ರಮವನ್ನು ಆಯೋಜಿಸಿದ್ದಾರೆ. ಉತ್ಸವ ಮೂರ್ತಿಗಳನ್ನು ಹೂವಿನ ಪಲ್ಲಕ್ಕಿಯಲ್ಲಿ ಅಲಂಕರಿಸಿ ಪ್ರಮುಖ ಬೀದಿಗಳಲ್ಲಿ ವಿಜೃಂಭಣೆಯಿಂದ ಮೆರವಣಿಗೆ ನಡೆಯಲಿದೆ.
-
Property Mutation: ಆಸ್ತಿ ನೋಂದಣಿ ನಂತರ ಶೇ.98ರಷ್ಟು ಖಾತೆಗಳು ಸ್ವಯಂ ಚಾಲಿತವಾಗಿ ಬದಲಾವಣೆ: ಸಚಿವ ಕೃಷ್ಣ ಬೈರೇಗೌಡ -
Gold Price Today: ಯುಗಾದಿಗೂ ಮೊದಲೇ ಚಿನ್ನದ ದರದಲ್ಲಿ ಭಾರೀ ಇಳಿಕೆ; ಆಭರಣ ಪ್ರಿಯರಿಗೆ ಇಂದೇ ಹಬ್ಬ -
Karnataka: ಧಾರ್ಮಿಕ ಮೆರವಣಿಗೆ, ಜಯಂತಿಗಳಲ್ಲಿ DJ ಸದ್ದಿಗೆ ಬ್ರೇಕ್? 'ಐಟಂ ಸಾಂಗ್' ಬ್ಯಾನ್ ಮಾಡಲು ರಾಜ್ಯ ಸರ್ಕಾರ ಒಲವು -
ಉನ್ನತ ಶಿಕ್ಷಣಕ್ಕೆ ಭಾರತದ ಯಾವ ನಗರ ಬೆಸ್ಟ್? QS ರ್ಯಾಂಕಿಂಗ್ ಪಟ್ಟಿಯಲ್ಲಿದೆ ಬೆಂಗಳೂರು ಸೇರಿದಂತೆ 4 ನಗರಗಳ ಹೆಸರು -
ಯುದ್ಧದ ಬಿಸಿ: ಬೆಂಗಳೂರಿಗೆ ಅರಬ್ ರಾಷ್ಟ್ರಗಳ ವಿಮಾನ ಸಂಚಾರ ಕಡಿತ; ರಾಜ್ಯ ಟ್ರಾವೆಲ್ಸ್ ಮಾಲೀಕರಲ್ಲಿ ಆತಂಕ -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
SSLC ಪರೀಕ್ಷೆ-1 ಆರಂಭ: ಮಲ್ಲೇಶ್ವರಂನ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆ -
Ugadi 2026: ಹಬ್ಬದ ಕಳೆ ಹೆಚ್ಚಿಸುವ ಸುಂದರ ರಂಗೋಲಿಗಳು; ಸರಳ, ಚುಕ್ಕಿ ಹಾಗೂ ಬಣ್ಣದ ರಂಗೋಲಿ ಐಡಿಯಾ ಇಲ್ಲಿದೆ -
Eid Mubarak Wishes 2026: ರಂಜಾನ್ ಹಬ್ಬದ ಶುಭಾಶಯಗಳ 35 ಮನಮುಟ್ಟುವ ಸಂದೇಶಗಳು ಇಲ್ಲಿವೆ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್












Click it and Unblock the Notifications