ಸಂಪುಟಕ್ಕೆ ಲಿಂಬಾವಳಿ: ಬೆಂಗಳೂರು ಉಸ್ತುವಾರಿಗೆ ತ್ರಿಕೋನ ಸ್ಪರ್ಧೆ, ಸಿಎಂ ಒಲವು ಯಾರತ್ತ?
ಬೆಂಗಳೂರು, ಜ 15: ಹಲವು ಅಪಸ್ವರಗಳ ನಡುವೆ ಮುಖ್ಯಮಂತ್ರಿ ಯಡಿಯೂರಪ್ಪನವರು ಸಂಪುಟ ವಿಸ್ತರಣೆಯನ್ನು ಮಾಡಿದ್ದಾರೆ. ಒಟ್ಟಾರೆಯಾಗಿ, ಈ ವಿಸ್ತರಣೆಯ ನಂತರ ಬೆಂಗಳೂರು ನಗರಕ್ಕೆ ಸಿಂಹಪಾಲು ಸಿಕ್ಕಿದೆ.
ಇಷ್ಟುದಿನ ಸಚಿವರಾಗಿಲ್ಲ ಎಂದು ದಂಬಾಲು ಬೀಳುತ್ತಿದ್ದವರು, ಈಗ, ಸಚಿವರಾದ ಮೇಲೆ ಆಯಕಟ್ಟಿನ ಹುದ್ದೆ ಬೇಕೆಂದು ಮುಖ್ಯಮಂತ್ರಿಗಳಿಗೆ ನೂತನ ಸಚಿವರು ಒತ್ತಡ ಹೇರಲಾರಂಭಿಸಿದ್ದಾರೆ ಎನ್ನುವ ಮಾಹಿತಿಯಿದೆ.
ಇನ್ನೊಂದು ಕಡೆ, ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಎಚ್.ವಿಶ್ವನಾಥ್, ಈ ಇಬ್ಬರೂ ಮುಖ್ಯಮಂತ್ರಿ ಮತ್ತು ಅವರ ಪುತ್ರ ವಿಜಯೇಂದ್ರನ ಮೇಲೆ ವಾಗ್ದಾಳಿ ಮುಂದುವರಿಸಿದ್ದಾರೆ. "ಯಡಿಯೂರಪ್ಪ ವಚನಭ್ರಷ್ಟ ಮತ್ತು ಅವರ ಪುತ್ರ ವಿಜಯೇಂದ್ರ ದಾರಿ ತಪ್ಪಿದ ಮಗ"ಎಂದು ವಿಶ್ವನಾಥ್ ಲೇವಡಿ ಮಾಡಿದ್ದಾರೆ.
ಎಲ್ಲಾ ಸಚಿವರಿಗೂ ಒಂದು ಕಣ್ಣು ಬೆಂಗಳೂರು ಉಸ್ತುವಾರಿಯ ಮೇಲೆ. ಬೆಂಗಳೂರು ನಗರ ಪ್ರತಿನಿಧಿಸುವ ಹಲವರು ಬಿಎಸ್ವೈ ಸಂಪುಟದಲ್ಲಿದ್ದರೂ, ಮೂವರ ನಡುವೆ ಈ ಹುದ್ದೆಗೆ ಸ್ಪರ್ಧೆ ಏರ್ಪಟ್ಟಿದೆ.

ಬಿಬಿಎಂಪಿ ಚುನಾವಣೆ
ಬಿಬಿಎಂಪಿ ಚುನಾವಣೆ ಹತ್ತಿರ ಬರುತ್ತಿರುವುದರಿಂದ ಬೆಂಗಳೂರು ಉಸ್ತುವಾರಿ ಹುದ್ದೆಯ ಮೇಲೆ ಮೂವರು ಪ್ರಬಾವೀ ಸಚಿವರ ಕಣ್ಣಿದೆ. ಈ ಹಿಂದೆಯೂ ಈ ಹುದ್ದೆಯ ವಿಚಾರದಲ್ಲಿ ಮನಸ್ತಾಪ ಆರಂಭವಾಗಿದ್ದರಿಂದ, ರಿಸ್ಕ್ ತೆಗೆದುಕೊಳ್ಳದ ಸಿಎಂ ಯಡಿಯೂರಪ್ಪ ಆ ಹುದ್ದೆಯನ್ನು ತನ್ನಲ್ಲೇ ಉಳಿಸಿಕೊಂಡಿದ್ದರು.

ಮಹದೇವಪುರದ ಶಾಸಕ ಅರವಿಂದ ಲಿಂಬಾವಳಿ
ನೂತನವಾಗಿ ಪ್ರಮಾಣವಚನ ಸ್ವೀಕರಿಸಿದ ಏಳು ಸಚಿವರಿಗೆ ಖಾತೆಯನ್ನು ಇನ್ನೂ ಹಂಚಬೇಕಷ್ಟೇ. ಸಂಕ್ರಾಂತಿ ಹಬ್ಬ ಇದ್ದಿದ್ದರಿಂದ ಒಂದೆರಡು ದಿನದಲ್ಲಿ ಖಾತೆ ಹಂಚಿಕೆಯಾಗಬಹುದು. ಬೆಂಗಳೂರು ಉಸ್ತುವಾರಿಯನ್ನು ಮಹದೇವಪುರದ ಶಾಸಕ ಅರವಿಂದ ಲಿಂಬಾವಳಿಗೆ ನೀಡಲು ಸಿಎಂ ಉತ್ಸುಕರಾಗಿದ್ದಾರೆ ಎನ್ನುವ ಮಾತು ಕೇಳಿ ಬರುತ್ತಿದೆ.

ಆರ್.ಅಶೋಕ್ ಮತ್ತು ಡಿಸಿಎಂ ಡಾ.ಅಶ್ವಥ್ ನಾರಾಯಣ್
ಲಿಂಬಾವಳಿಗೆ ಈ ಸ್ಥಾನ ಸಿಗಬಹುದು ಎನ್ನುವದನ್ನು ಅರಿತ ಕಂದಾಯ ಸಚಿವ ಆರ್.ಅಶೋಕ್ ಮತ್ತು ಡಿಸಿಎಂ ಡಾ.ಅಶ್ವಥ್ ನಾರಾಯಣ್, ಈ ಹುದ್ದೆಯನ್ನು ಪಡೆಯಲು ಒತ್ತಡ ಹೇರಲಾರಂಭಿಸಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಕಳೆದ ಬಾರಿಯೂ ಅಶೋಕ್ ಮತ್ತು ಅಶ್ವಥ್ ನಾರಾಯಣ್ ನಡುವೆ ಸ್ಪರ್ಧೆ ಏರ್ಪಟ್ಟಿತ್ತು.
Recommended Video

ಮುಖ್ಯಮಂತ್ರಿಗಳು ತಮ್ಮಲ್ಲೇ ಈ ಹುದ್ದೆಯನ್ನು ಉಳಿಸಿಕೊಳ್ಳಬಹುದು
ಚುನಾವಣೆ ಹತ್ತಿರವಾಗುತ್ತಿರುವುದರಿಂದ ಲಿಂಬಾವಳಿ, ಅಶೋಕ್ ಮತ್ತು ಅಶ್ವಥ್ ನಾರಾಯಣ್, ಈ ಮೂವರಲ್ಲಿ ಒಬ್ಬರಿಗೆ ಬೆಂಗಳೂರು ಉಸ್ತುವಾರಿ ಸಿಗಬಹುದು. ಆದರೆ, ಈ ಮೂವರು ಈ ಹುದ್ದೆಯನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡು, ಅದರಿಂದ ಸಂಪುಟದಲ್ಲಿ ಅಸಮಾಧಾನ ತೀವ್ರಗೊಂಡರೆ, ಮುಖ್ಯಮಂತ್ರಿಗಳು ತಮ್ಮಲ್ಲೇ ಈ ಹುದ್ದೆಯನ್ನು ಉಳಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ.
-
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Karnataka Rains: ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಿಗೆ ಮುಂದಿನ ಮೂರು ಗಂಟೆಗಳಲ್ಲಿ ಭಾರೀ ಮಳೆ ಮುನ್ಸೂಚನೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
ಪಾರದರ್ಶಕ ನೇಮಕಾತಿಗಾಗಿ ಪ್ರತಿಷ್ಠಿತ 'ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ' ಮುಡಿಗೇರಿಸಿಕೊಂಡ KSRTC -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು












Click it and Unblock the Notifications