ಕತಾರ್ ನಲ್ಲಿ ಪ್ರೇಮ, ಕಳ್ಳತನದಿಂದ ಭಾರತಕ್ಕೆ ಪಾಕಿಸ್ತಾನಿ ಎಂಟ್ರಿ!
ನಕಲಿ ಪಾಸ್ ಪೋರ್ಟ್ ಹೊಂದಿದ್ದ ಮೂವರು ಪಾಕಿಸ್ತಾನಿಗಳನ್ನು ಬೆಂಗಳೂರಲ್ಲಿ ಬಂಧಿಸಲಾಗಿದೆ. ಕುಮಾರಸ್ವಾಮಿ ಲೇ ಔಟ್ ಪೊಲೀಸರ ಬಲೆಗೆ ಬಿದ್ದ ಮೂವರು ಭಾರತದ ನಕಲಿ ಪಾಸ್ ಪೋರ್ಟ್ ಹೊಂದಿದ್ದರು.
ಬೆಂಗಳೂರು, ಮೇ 25: ನಕಲಿ ಪಾಸ್ ಪೋರ್ಟ್ ಹೊಂದಿದ್ದ ಮೂವರು ಪಾಕಿಸ್ತಾನ ಪ್ರಜೆಗಳನ್ನು ಬೆಂಗಳೂರಲ್ಲಿ ಬಂಧಿಸಲಾಗಿದೆ. ಕುಮಾರಸ್ವಾಮಿ ಲೇ ಔಟ್ ಪೊಲೀಸರ ಬಲೆಗೆ ಬಿದ್ದ ಮೂವರು ಭಾರತದ ನಕಲಿ ಪಾಸ್ ಪೋರ್ಟ್, ಆಧಾರ್ ಕಾರ್ಡ್ ಇನ್ನಿತರ ದಾಖಲೆಗಳನ್ನು ಹೊಂದಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತ ಪ್ರವೀಣ್ ಸೂದ್ ಹೇಳಿದರು.
ಕಳೆದ 9 ತಿಂಗಳಿನಿಂದ ಕುಮಾರಸ್ವಾಮಿ ಲೌಟಿನ ಅಪಾರ್ಟ್ಮೆಂಟ್ ನಲ್ಲಿ ನಾಲ್ವರು ವಾಸಿಸುತ್ತಿದ್ದರು. ಇವರ ಬಗ್ಗೆ ಕೆಲ ಕಾಲದಿಂದ ಮಾಹಿತಿ ಸಂಗ್ರಹಿಸಿದ್ದ ಪೊಲೀಸರು ಗುರುವಾರ (ಮೇ 25) ದಂದು ಎಲ್ಲರನ್ನು ಬಂಧಿಸಲಾಗಿದೆ. ಭಾರತದ ನಾಗರಿಕರು ಎಂದು ಸಾಬೀತುಪಡಿಸಲು ಬೇಕಾದ ಸಕಲ ಗುರುತಿನ ಚೀಟಿಗಳನ್ನು ತಯಾರಿಸಿ ಇಟ್ಟುಕೊಂಡಿದ್ದರು.
ಬಂಧಿತರನ್ನು ಕರಾಚಿ ಮೂಲದ ಕಿರಣ್ ಗುಲಾಮ್, ಸಮೀರಾ ಹಾಗೂ ಕಾಸಿಫ್ ಷಂಶುದ್ದೀನ್ ಎಂದು ಗುರುತಿಸಲಾಗಿದೆ. ಇವರ ಜತೆಗೆ ಕೇರಳ ಮೂಲದ ಮೊಹಮ್ಮದ್ ಬಷೀರ್ ಎಂಬಾತನನ್ನು ವಿಚಾರಣೆಗಾಗಿ ಕರೆದೊಯ್ಯಲಾಗಿದೆ.

ಕತಾರ್ ನಲ್ಲಿ ಉದ್ಯೋಗ ನಿರತರಾಗಿದ್ದಾಗ ಪಾಕಿಸ್ತಾನಿ ಯುವತಿ ಕಿರಣ್ ಗುಲಾಮ್ ಎಂಬುವರನ್ನು ಮೊಹಮ್ಮದ್ ಪರಿಚಯ ಮಾಡಿಕೊಂಡಿದ್ದಾನೆ. ಇಬ್ಬರಿಗೂ ಪ್ರೇಮಾಂಕುರವಾಗಿ ಮದುವೆಯಾಗಲು ಬಯಸಿದ್ದಾರೆ. ಯುವತಿಯ ಮನೆಯಲ್ಲಿ ಭಾರಿ ಪ್ರತಿರೋಧ ವ್ಯಕ್ತವಾಗಿದೆ. ನಕಲಿ ಪಾಸ್ ಪೋರ್ಟ್ ಬಳಸಿ ಪಾಕಿಸ್ತಾನಿಗಳನ್ನು ಕತಾರ್ ನಿಂದ ಮಸ್ಕತ್ ಮೂಲಕ ನೇಪಾಳಕ್ಕೆ ಬಂದು ಅಲ್ಲಿಂದ ಭಾರತದೊಳಗೆ ಕರೆಸಿಕೊಳ್ಳಲಾಗಿದೆ.
ಬೆಂಗಳೂರಿನ ಕುಮಾರಸ್ವಾಮಿ ಲೇ ಔಟಿನಲ್ಲಿ ನೆಲೆಸಲು ಮತ್ತೊಬ್ಬ ಭಾರತೀಯ ನೆರವಾಗಿರುವ ಶಂಕೆ ವ್ಯಕ್ತವಾಗಿದ್ದು, ಆತನಿಗಾಗಿ ಶೋಧಕಾರ್ಯ ನಡೆಯುತ್ತಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್












Click it and Unblock the Notifications