ಪೋಲಿಸ್ ಪೇದೆಯ ಬೈಕ್ ಸೇರಿ 16 ವಾಹನ ಕದ್ದ ಮೂವರು ಕಳ್ಳರ ಬಂಧನ
ಬೆಂಗಳೂರು, ಏಪ್ರಿಲ್ 20: ಸಿಲಿಕಾನ್ ಸಿಟಿಯಲ್ಲಿ ವಾಹನ ಕಳ್ಳತನ ಮಾಡುವ ಕಳ್ಳರು ಹೆಚ್ಚಾಗಿದ್ದಾರೆ ಪೊಲೀಸರ ಕೈಗೆ ಸಿಗದೆ ತಮ್ಮ ಚಾಣಾಕ್ಷತನದಿಂದ ವಾಹನ ಕಳ್ಳತನ ನಡೆಸುತ್ತಿದ್ದಾರೆ. ಆದರೆ ನಿನ್ನೆ (ಮಂಗಳವಾರ) ಬೆಂಗಳೂರು ಸಿಟಿನಲ್ಲಿ ನಕಲಿ ಕೀ ಬಳಸಿ ವಾಹನಗಳನ್ನು ಕದಿಯುತ್ತಿದ್ದ ಇಬ್ಬರು ಕಳ್ಳರನ್ನು ನಗರ ಪೋಲಿಸರು ಬಂಧಿಸಿದ್ದು, ಇತ್ತೀಚೆಗೆ ಕಳ್ಳತನವಾಗಿದ್ದ ಒಟ್ಟು 16 ವಾಹನಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ನಗರಗಳ ವಿವಿಧ ಪೋಲಿಸ್ ಠಾಣೆಯಲ್ಲಿ ದಾಖಲಾಗಿದ್ದ ಎರಡು ಪ್ರತ್ಯೇಕ ಪ್ರಕರಣಗಳನ್ನು ಭೇದಿಸಿರುವ ಮಡಿವಾಳ ಠಾಣೆಯ ಪೋಲಿಸರು ನಕಲಿ ಕೀ ಬಳಸಿ ಮತ್ತು ಕೀ ಮುರಿದು ಬೈಕ್ ಮತ್ತು ಇತರೆ ವಾಹನಗಳನ್ನು ಲಿಫ್ಟ್ ಮಾಡುವ ಮೂಲಕ ಕಳ್ಳತನ ಮಾಡಿ ಪರಾರಿಯಾಗುತ್ತಿದ್ದರು.
ಬೆಂಗಳೂರಿನ ನಗರಗಳಲ್ಲಿ ವಾಹನಗಳ ಕಳ್ಳತನ ಮಾಡುತ್ತಿದ್ದ ವಿನೀತ್ ಕುಮಾರ್ ಹಾಗೂ ಮುಬಾರಕ್ ಈ ಕಳ್ಳರನ್ನು ಮಡಿವಾಳ ಪೋಲಿಸರು ಮಂಗಳವಾರ ಬಂಧಿಸಿದ್ದು ಇವರಿಬ್ಬರೂ ಆಡುಗೋಡಿಯ ಪೋಲಿಸ್ ಪೇದೆ ದೇವರಾಜ್ ಅವರ ಬೈಕ್ ಕಳ್ಳತನ ಮಾಡಿದ್ದರು. ಈ ಘಟನೆಯ ಕುರಿತು ಪೋಲಿಸ್ ಪೇದೆ ಕಳೆದ ಮಾ.10ರಂದು ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಪೋಲಿಸ್ ಪೇದೆ ದೇವರಾಜ್ ಅವರು ನಿನ್ನೆ ರಾತ್ರಿ ಸಮಯದಲ್ಲಿ ನಗರದ ಸಿಲ್ಕ್ ಬೋರ್ಡ್ ರಸ್ತೆ ಮೇಲ್ಸೇತುವೆ ಹತ್ತಿರ ತಮ್ಮ ಬೈಕ್ ನೋಡಿದ್ದಾರೆ ಈ ವೇಳೆ ವಿನೀತ್ ಮತ್ತು ಮುಬಾರಕ್ ನನ್ನು ಬಂಧಿಸಿದ್ದಾರೆ.
ಇನ್ನೊಂದು ಪ್ರಕರಣದಲ್ಲಿ ನಗರದಲ್ಲಿ 8 ವಾಹನಗಳನ್ನು ಕಳ್ಳತನ ಮಾಡಿದ್ದ ವೈಕ್ತಿಯನ್ನು ಕಲಾಸಿಪಾಳ್ಯ ಪೋಲಿಸರು ಬಂಧಿಸಿ 8 ಕಳ್ಳತನವಾಗಿದ್ದ ವಾಹನವನ್ನು ವಶಪಡಿಸಿಕೊಂಡಿದ್ದಾರೆ.
ಬೈಕ್, ವಾಹನಗಳ ಕೀ ಮುರಿದು ಕಳ್ಳತನ ನಡೆಸುತ್ತಿದ್ದ ಇಮ್ರಾನ್ ಮಹಿಳೆಯ ಬೈಕ್ ಕಳ್ಳತನ ಮಾಡಿದ್ದನು. ಈ ಕುರಿತು ಕಳೆದ ಮಾರ್ಚ್ 23ರಂದೇ ಕಲಾಸಿಪಾಳ್ಯ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಸದ್ಯ ಇಮ್ರಾನ್ ಎಂಬಾತನನ್ನು ಬಂಧಿಸಿರುವ ಪೋಲಿಸರು ನಗರದ ವಿವಿಧ ಠಾಣೆಗಳಲ್ಲಿ ದೂರು ದಾಖಲಾಗಿದ್ದ ಒಟ್ಟು 8 ಪ್ರಕರಣಗಳನ್ನು ಪೋಲಿಸರು ಭೇದಿಸಿದ್ದಾರೆ.
Recommended Video
-
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
IPL 2026: ಬೆಂಗಳೂರು ಕ್ರಿಕೆಟ್ ಪ್ರೇಮಿಗಳೇ ಗಮನಿಸಿ, ಚಿನ್ನಸ್ವಾಮಿ ಸ್ಟೇಡಿಯಂಗೆ ಹೋಗುವ ಮುನ್ನ ಈ ಹೊಸ ರೂಲ್ಸ್ ಗೊತ್ತಿರಲಿ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD











Click it and Unblock the Notifications