ಶೀಘ್ರದಲ್ಲೇ ಬೆಂಗಳೂರಿನ ಮೂರು ರಸ್ತೆ ಅಗಲೀಕರಣ
ಬೆಂಗಳೂರು, ಸೆ.9 : ಬನ್ನೇರುಘಟ್ಟ, ಉತ್ತರಹಳ್ಳಿ ಮತ್ತು ಸುಬ್ರಮಣ್ಯಪುರ ರಸ್ತೆಗಳ ಅಗಲೀಕರಣ ಕಾಮಗಾರಿಯನ್ನು ತಕ್ಷಣ ಆರಂಭಿಸುವಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮೇಯರ್ ಶಾಂತ ಕುಮಾರಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಈ ರಸ್ತೆಗಳ ಅಗಲೀಕರಣ ಅನಿವಾರ್ಯವಾಗಿದೆ ಎಂದು ಅವರು ಹೇಳಿದ್ದಾರೆ.
ಮಂಗಳವಾರ ಮೇಯರ್ ಶಾಂತಕುಮಾರಿ ಅವರು ಬೆಂಗಳೂರು ದಕ್ಷಿಣ ಭಾಗದ ಹಲವು ಪ್ರದೇಶಗಳಿಗೆ ಭೇಟಿ ನೀಡಿ ಸಮಸ್ಯೆಗಳ ಬಗ್ಗೆ ಪರಿಶೀಲನೆ ನಡೆಸಿದರು, ಈ ಸಂದರ್ಭದಲ್ಲಿ ಬನ್ನೇರುಘಟ್ಟ, ಉತ್ತರಹಳ್ಳಿ, ಸುಬ್ರಹ್ಮಣ್ಯಪುರ ಮುಖ್ಯ ರಸ್ತೆಗಳನ್ನು ಅಗಲೀಕರಣ ಮಾಡುವ ಕಾಮಗಾರಿಯನ್ನು ಆರಂಭಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ರಸ್ತೆಗಳಲ್ಲಿ ವಾಹನ ಸಂಚಾರ ಹೆಚ್ಚಾಗಿದ್ದು, ಅಗಲೀಕರಣ ಅನಿವಾರ್ಯವಾಗಿದೆ. ರಸ್ತೆ ಅಗಲೀಕರಣದಿಂದ ಆಸ್ತಿ ಕಳೆದುಕೊಳ್ಳುವವರು ಜಾಗ ಬಿಟ್ಟುಕೊಡಲು ಸಿದ್ಧರಾಗಿದ್ದಾರೆ. ಆದ್ದರಿಂದ ಅವರಿಗೆ ಸೂಕ್ತ ಪರಿಹಾರವನ್ನು ನೀಡಿದ ತಕ್ಷಣ ಕಾಮಗಾರಿಯನ್ನು ಆರಂಭ ಮಾಡಿ ಎಂದು ಮೇಯರ್ ಶಾಂತ ಕುಮಾರಿ ಅವರು ಅಧಿಕಾರಿಗಳಿಗೆ ತಿಳಿಸಿದರು. [ಬೆಂ-ಮೈಸೂರು ಹೆದ್ದಾರಿಗೆ ಟೋಲ್ ಕಟ್ಟಲು ಸಜ್ಜಾಗಿ]
ಮೇಯರ್ ಮಿಂಚಿನ ಸಂಚಾರ : ಮಂಗಳವಾರ ಬೆಳಗ್ಗೆ ಉಪ ಮೇಯರ್ ರಂಗಣ್ಣ ಅವರೊಂದಿಗೆ ಮೊದಲು ಉತ್ತರಹಳ್ಳಿ ವಾರ್ಡ್ ನಂಬರ್ 184ಕ್ಕೆ ಭೇಟಿ ನೀಡಿ ಕಸ ಗುಡಿಸುವ ಪೌರ ಕಾರ್ಮಿಕರ ಆರೋಗ್ಯ ವಿಚಾರಿಸಿದರು. ಗ್ಲೌಸ್ ಕೊಟ್ಟಿದ್ದಾರೆಯೇ, ಸಮವಸ್ತ್ರ ನೀಡಲಾಗಿದೆಯೇ ಎಂಬ ಬಗ್ಗೆ ಅವರಿಂದ ಮಾಹಿತಿ ಸಂಗ್ರಹಣೆ ಮಾಡಿದರು. [ಜಯನಗರ ಬಡಾವಣೆಗೊಂದು ಸ್ಮಾರ್ಟ್ ರಸ್ತೆ ನಿರ್ಮಾಣ]
ನಂತರ ಉತ್ತರಹಳ್ಳಿ ಕೆರೆಗೆ ಭೇಟಿ ನೀಡಿ ನೀರು ಶುದ್ಧೀಕರಣ ಘಟಕದ ಕಾಮಗಾರಿಯನ್ನು ಪರಿಶೀಲಿಸಿದರು. ನಂತರ ಯಾದಾಳಮ್ ನಗರಕ್ಕೆ ಭೇಟಿ ನೀಡಿದರು, ಅಲ್ಲಿನ ನಿವಾಸಿಗಳು ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಮೇಯರ್ ಅವರಿಗೆ ದೂರು ನೀಡಿದರು. ಈ ಬಗ್ಗೆ ಗಮನ ಹರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಂತರ ಕೋಣನಕುಂಟೆ ಕ್ರಾಸ್ಗೆ ಭೇಟಿ ನೀಡಿದ ಅವರು, ಒಳ ಚರಂಡಿ, ರಸ್ತೆ ಮತ್ತು ರಾಜಕಾಲುವೆ ಕಾಮಗಾರಿಗಳನ್ನು ವೀಕ್ಷಿಸಿದರು. ಬಿಬಿಎಂಪಿ ಆಯುಕ್ತ ಎಂ.ಲಕ್ಷ್ಮೀನಾರಾಯಣ, ಪಾಲಿಕೆ ಸದಸ್ಯರಾದ ರಮೇಶ್ ರಾಜು, ವಿಜಯ ರಮೇಶ್ ಹಾಗೂ ಪಾಲಿಕೆ ಅಧಿಕಾರಿಗಳು ಮೇಯರ್ ಜೊತೆಗಿದ್ದರು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications