ಕಾರ್ತಿಕ್ ಗೌಡ ಬಂಧನಕ್ಕೆ ಮೂರು ವಿಶೇಷ ತಂಡ ರಚನೆ
ಬೆಂಗಳೂರು, ಸೆ.5 : ಕೇಂದ್ರ ರೈಲ್ವೆ ಸಚಿವ ಡಿ.ವಿ.ಸದಾನಂದ ಗೌಡರ ಪುತ್ರ ಕಾರ್ತಿಕ್ ಗೌಡ ಬಂಧನಕ್ಕೆ ಬೆಂಗಳೂರು ಪೊಲೀಸರು ಮೂರು ವಿಶೇಷ ತಂಡಗಳನ್ನು ರಚಿಸಿದ್ದಾರೆ. ಬೆಂಗಳೂರು, ಮಂಗಳೂರು, ಮಡಿಕೇರಿಗೆ ತಂಡಗಳನ್ನು ಕಳಿಸಲಾಗಿದ್ದು, ಹುಡುಕಾಟ ಆರಂಭವಾಗಿದೆ.
ನಟಿ ಮೈತ್ರಿಯಾ ಗೌಡ ಆರ್.ಟಿ.ನಗರ ಪೊಲೀಸರಿಗೆ ಕಾರ್ತಿಕ್ ಗೌಡ ವಿರುದ್ಧ ನೀಡಿರುವ ವಂಚನೆ ಮತ್ತು ಅತ್ಯಾಚಾರ ದೂರಿನ ಅನ್ವಯ ಪೊಲೀಸರು ಕಾರ್ತಿಕ್ ಗೌಡ ಅವರನ್ನು ವಿಚಾರಣೆ ನಡೆಸಬೇಕಾಗಿದೆ. ಎರಡು ಬಾರಿ ನೋಟಿಸ್ ನೀಡಿದರೂ ಕಾರ್ತಿಕ್ ಗೌಡ ಅವರು ವಿಚಾರಣೆಗೆ ಹಾಜರಾಗಿಲ್ಲ.

ಆದ್ದರಿಂದ, ಗುರುವಾರ ಪೊಲೀಸರು ನ್ಯಾಯಾಲಯದಿಂದ ಬಂಧನದ ವಾರೆಂಟ್ ಪಡೆದುಕೊಂಡಿದ್ದಾರೆ. ಬಂಧನ ಭೀತಿ ಎದುರಿಸುತ್ತಿರುವ ಕಾರ್ತಿಕ್ ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯನ್ನು 8ನೇ ಎಸಿಎಂಎಂ ನ್ಯಾಯಾಲಯ ಇಂದು ನಡೆಸಲಿದೆ. [ಮೈತ್ರಿಯಾ ಬಗ್ಗೆ ಡಾಟಿ ಸದಾನಂದ ಗೌಡರು ಹೇಳಿದ್ದೇನು?]
ಮೂರು ತಂಡಗಳ ರಚನೆ : ಕಾರ್ತಿಕ್ ಗೌಡ ಬಂಧನಕ್ಕೆ ವಾರೆಂಟ್ ಪಡೆದಿರುವ ಪೊಲೀಸರು ಜೆ.ಸಿ.ನಗರ ಉಪ-ವಿಭಾಗದ ಎಸಿಪಿ ಓಂಕಾರಯ್ಯ ನೇತೃತ್ವದಲ್ಲಿ ಮೂರು ವಿಶೇಷ ತಂಡಗಳನ್ನು ರಚನೆ ಮಾಡಿದ್ದಾರೆ. ಮೂರು ತಂಡಗಳು ಕಾರ್ತಿಕ್ಗಾಗಿ ಹುಡುಕಾಟ ಆರಂಭಿಸಿವೆ. [ಯಾವುದೇ ಕ್ಷಣದಲ್ಲಿ ಕಾರ್ತಿಕ್ ಗೌಡ ಬಂಧನ]
ಒಂದು ತಂಡ ಬೆಂಗಳೂರಿನಲ್ಲಿ, ಒಂದು ತಂಡ ಮಡಿಕೇರಿಯಲ್ಲಿ ಮತ್ತೊಂದು ತಂಡ ಮಂಗಳೂರಿನಲ್ಲಿ ಕಾರ್ತಿಕ್ ಗೌಡ ಅವರಿಗಾಗಿ ಹುಡುಕಾಟ ನಡೆಸುತ್ತಿದೆ. ಕಾರ್ತಿಕ್ ಗೌಡ ಪತ್ತೆಯಾದರೆ, ತಕ್ಷಣ ಅವರನ್ನು ಬಂಧಿಸಿಲು ಪೊಲೀಸರು ಸಜ್ಜಾಗಿದ್ದಾರೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications