SWR: ನವೆಂಬರ್ 25ಕ್ಕೆ ಮೂರು ರೈಲುಗಳ ಮಾರ್ಗ ಬದಲಾವಣೆ, ನಿಲುಗಡೆ ರದ್ದು
ಬೆಂಗಳೂರು, ನವೆಂಬರ್ 24: ಬೆಳಂದೂರು ರಸ್ತೆ-ಕಾರ್ಮೆಲಾರಂ ಸ್ಟೇಷನ್ಗಳ ನಡುವೆ ಎರಡನೇ ರೈಲು ಮಾರ್ಗ (Second Railway Line) ಕಾರ್ಯಾರಂಭ ಹಾಗೂ ಸಂಬಂಧಿತ ಕಾಮಗಾರಿಗಳು ನಡೆಯಲಿವೆ. ಈ ಹಿನ್ನೆಲೆಯಲ್ಲಿ ರೈಲು ಸಂಚಾರಕ್ಕೆ ತಾತ್ಕಾಲಿಕ ಬದಲಾವಣೆಗಳು ಅನಿವಾರ್ಯವಗಿದೆ. ಈ ಹಿನ್ನೆಲೆಯಲ್ಲಿ ನವೆಂಬರ್ 25 ರಂದು 03 ರೈಲುಗಳು ಪರ್ಯಾಯ ಮಾರ್ಗದಲ್ಲಿ ಸಂಚರಿಸಲಿವೆ ಎಂದು ನೈಋತ್ಯ ರೈಲ್ವೆ (SWR) ಮಾಹಿತಿ ನೀಡಿದೆ.
ನಗರ-ಹೊಸೂರು ಸೆಕ್ಟರ್ನಲ್ಲಿ ನಡೆಯುತ್ತಿರುವ ಈ ಮಹತ್ವದ ಕಾಮಗಾರಿ ಭವಿಷ್ಯದಲ್ಲಿ ರೈಲು ಸಂಚಾರದ ದಟ್ಟಣೆಯನ್ನು ಕಡಿಮೆ ಮಾಡಿ, ವೇಗ ಮತ್ತು ಕಾರ್ಯಕ್ಷಮತೆಯನ್ನು ಹೆಚ್ಚಿಸಲು ನೆರವಾಗಲಿದೆ ಎಂದು ರೈಲ್ವೆ ಅಧಿಕಾರಿಗಳು ಹೇಳಿದ್ದಾರೆ. ಸದ್ಯ ನವೆಂಬರ್ 25ರಂದು ಯಾವೆಲ್ಲ ರೈಲುಗಳ ಮಾರ್ಗ ಬದಲಾವಣೆ ಆಗಿದೆ ಎಂಬ ಪಟ್ಟಿ ಇಲ್ಲಿದೆ.

ಈ ರೈಲುಗಳ ಮಾರ್ಗ ಬದಲಾವಣೆ, ಪಟ್ಟಿ
* ಸೇಲಂ-ಯಶವಂತಪುರ ಎಕ್ಸ್ಪ್ರೆಸ್ ರೈಲು (16212) ಇದೇ ನವೆಂಬರ್ 25 ರಂದು ಸಂಚಾರ ಮಾಡಬೇಕಿದೆ. ಈ ರೈಲು ನಿಗದಿತ ಮಾರ್ಗದ ಬದಲಾಗಿ, ಪರ್ಯಾಯ ಮಾರ್ಗಗಳಾದ ಸೇಲಂ, ತಿರುಪತ್ತುರ್, ಕೃಷ್ಣರಾಜಪುರಂ, SMVT ಬೆಂಗಳೂರು ಮೂಲಕ ಬಾಣಸವಾಡಿ ನಿಲ್ದಾಣಕ್ಕೆ ಬಂದು ಸೇರುತ್ತದೆ. ಈ ರೈಲಿನ ಓಮಲೂರು ನಿಲ್ದಾಣ ಮತ್ತು ಬೆಳಂದೂರು ರಸ್ತೆ ನಿಲ್ದಾಣದಲ್ಲಿನ ನಿಲುಗಡೆ ರದ್ದುಗೊಳಿಸಲಾಗಿದೆ.
* SMVT ಬೆಂಗಳೂರು-ಕಾರೈಕಲ್ ಎಕ್ಸ್ಪ್ರೆಸ್ ರೈಲು (16529) ನವೆಂಬರ್ 25 ರಂದು ಪರ್ಯಾಯ ಮಾರ್ಗಗಳಾದ ಬೈಯ್ಯಪ್ಪನಹಳ್ಳಿ, ಕೃಷ್ಣರಾಜಪುರಂ, ತಿರುಪತ್ತುರ್, ಸೇಲಂ ಮಾರ್ಗವಾಗಿ ಸಾಗಿ ಬರಲಿದೆ. ಓಮಲೂರು ನಿಲ್ದಾಣ ಮತ್ತು ಬೆಳಂದೂರು ರಸ್ತೆ ನಿಲ್ದಾಣದಲ್ಲಿ ಈ ರೈಲು ಸಹ ನಿಲ್ಲುವುದಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
* ಯಶವಂತಪುರ-ಸೇಲಂ ಕಾಯ್ದಿರಿಸದ ಎಕ್ಸ್ಪ್ರೆಸ್ ರೈಲು (16211) ನವೆಂಬರ್ 25ರಂದು ನಿಗದಿತ ಮಾರ್ಗದಲ್ಲಿ ಸಂಚಾರ ಮಾಡದೇ ಬದಲಾದ ಪರ್ಯಾಯ ಮಾರ್ಗಗಳಾದ ಬಾಣಸವಾಡಿ, SMVT ಬೆಂಗಳೂರು, ಕೃಷ್ಣರಾಜಪುರಂ, ತಿರುಪತ್ತುರ್ ಮೂಲಕ ಸೇಲಂ ತಲುಪುತ್ತದೆ. ಕಾಮಗಾರಿ ಪ್ರಯುಕ್ತ ಬೆಳಂದೂರು ರಸ್ತೆ, ಓಮಲೂರು ನಿಲ್ದಾಣದಲ್ಲಿನ ನಿಲುಗಡೆ ರದ್ದುಗೊಳಿಸಲಾಗಿದೆ.
ಬೆಳಂದೂರು ರಸ್ತೆ-ಕಾರ್ಮೆಲಾರಂ ನಡುವೆ ಎರಡನೇ ಮಾರ್ಗ ಕಾಮಗಾರಿ ಅಂತಿಮ ಹಂತದಲ್ಲಿದೆ. ಅದಕ್ಕಾಗಿ ಟ್ರ್ಯಾಕ್ ಸಂಪರ್ಕ, ಸಿಗ್ನಲ್ ಸಮನ್ವಯ ಮತ್ತು ಸುರಕ್ಷತಾ ಪರಿಶೀಲನೆ ನಡೆಸಬೇಕಿದೆ. ಹೀಗಾಗಿ ಕಾಮಗಾರಿ, ಇತರ ಕಾರ್ಯ ನಡೆಯುತ್ತಿದೆ. ಒಮ್ಮೆ ಈ ಮಾರ್ಗವು ಸಿದ್ಧವಾದರೆ, ರೈಲು ಸಂಚಾರ ದಟ್ಟಣೆ ಕಡಿಮೆಯಾಗಲಿದೆ. ಬೆಂಗಳೂರು-ಹೊಸೂರು ಮಾರ್ಗದ ಟ್ರೈನ್ ಅವಧಿ ಕಡಿಮೆಯಾಗಲಿದೆ ಎಂದು ನೈಋತ್ಯ ರೈಲ್ವೆ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ












Click it and Unblock the Notifications