ಖಾಸಗಿ ಶಾಲೆ ಆರಂಭಕ್ಕೆ ಡಿ. 5 ರವರೆಗೂ ಅರ್ಜಿ ಸಲ್ಲಿಸಿ
ಬೆಂಗಳೂರು, ನ. 29: ಖಾಸಗಿ ಅನುದಾನ ರಹಿತ ಒಂದರಿಂದ ಐದನೇ ತರಗತಿವರೆಗಿನ ಹೊಸ ಶಾಲೆ ಆರಂಭಕ್ಕೆ ಅರ್ಜಿ ಸಲ್ಲಿಸಲು ಡಿ. 5ರ ವರೆಗೆ ಕಾಲಾವಕಾಶ ನೀಡಲಾಗಿದೆ.
ಇಂಗ್ಲಿಷ್ ಮಾಧ್ಯಮ ಶಾಲೆಗಳ ಆಡಳಿತ ಮಂಡಳಿ ಒಕ್ಕೂಟ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾ. ಎ.ಎಸ್. ಬೋಪಣ್ಣ ಅವರಿದ್ದ ಏಕ ಸದಸ್ಯ ಪೀಠ ಅರ್ಜಿ ಸಲ್ಲಿಕೆ ಅವಧಿ ವಿಸ್ತರಿಸಲು ಸರ್ಕಾರಕ್ಕೆ ಆದೇಶ ನೀಡಿದೆ. [ಆಂಗ್ಲ ಮಾಧ್ಯಮ ಅನುಮತಿಗೆ ಪಟ್ಟು]
ಅಲ್ಲದೆ, ಶಾಲೆ ಆರಂಭಿಸಲು ವಿಧಿಸಿರುವ ಷರತ್ತುಗಳನ್ನು ಪೂರೈಸಲು ಒತ್ತಡ ಹೇರಬಾರದು. ಷರತ್ತು ಪೂರೈಕೆ ವಿಚಾರ ಅರ್ಜಿಯ ಅಂತಿಮ ತೀರ್ಪಿಗೆ ಒಳಪಟ್ಟಿರುತ್ತದೆ ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ. [ಕನ್ನಡ ಮಾಧ್ಯಮ ಕಡ್ಡಾಯವಲ್ಲ]

ಇಂಗ್ಲಿಷ್ ಮಾಧ್ಯಮಕ್ಕೆ ಅನುಮತಿ ಕೋರಿಕೆ: ಹೊಸ 1ರಿಂದ 5ನೇ ತರಗತಿವರೆಗಿನ ಕನ್ನಡ ಮಾಧ್ಯಮ ಖಾಸಗಿ ಅನುದಾನ ರಹಿತ ಶಾಲೆ ಆರಂಭಕ್ಕೆ ಪ್ರಾಥಮಿಕ ಹಾಗೂ ಪ್ರೌಢಶಾಲೆ ಇಲಾಖೆ ಅರ್ಜಿ ಆಹ್ವಾನಿಸಿತ್ತು. ಕೇವಲ ಕನ್ನಡ ಮಾಧ್ಯಮಕ್ಕೆ ಮಾತ್ರ ಅನುಮತಿ ನೀಡಲಾಗುತ್ತಿದೆ, ಇಂಗ್ಲಿಷ್ ಮಾಧ್ಯಮ ಶಾಲೆಗೆ ಅನುಮತಿ ನೀಡುತ್ತಿಲ್ಲ. ಇದು ಸುಪ್ರೀಂ ಕೋರ್ಟ್ನ ಸಾಂವಿಧಾನಿಕ ಪೀಠದ ತೀರ್ಪಿನ ಉಲ್ಲಂಘನೆ ಎಂದು ಇಂಗ್ಲಿಷ್ ಮಾಧ್ಯಮ ಶಾಲೆಗಳ ಆಡಳಿತ ಮಂಡಳಿ ಒಕ್ಕೂಟ ದೂರಿದ್ದರು. [ಭಾಷಾ ಮಾಧ್ಯಮ ತೀರ್ಪಿನ ವಿರುದ್ಧ ಮೇಲ್ಮನವಿ]
ಈ ಹಿನ್ನೆಲೆಯಲ್ಲಿ ಇಂಗ್ಲಿಷ್ ಮಾಧ್ಯಮ ಶಾಲೆ ಆರಂಭಿಸಲು ಅನುಮತಿ ನೀಡಬೇಕೆಂದು ಶಿಕ್ಷಣ ಇಲಾಖೆಗೆ ಹೈ ಕೋರ್ಟ್ ಸೂಚಿಸಿತ್ತು. ಆಗ ಅರ್ಜಿ ಸಲ್ಲಿಸಲು ನ. 30ರ ವರೆಗೆ ಮಾತ್ರ ಗಡುವು ನೀಡಲಾಗಿದೆ. ಈ ಕಾಲಾವಕಾಶ ಶುಲ್ಕ ಪಾವತಿಸಲು ಮತ್ತು ಷರತ್ತು ಪೂರೈಸಲು ಸಾಕಾಗುವುದಿಲ್ಲ ಎಂದು ಮತ್ತೆ ಅರ್ಜಿದಾರರು ಕೋರ್ಟ್ ಮೊರೆ ಹೋಗಿದ್ದರು. ಈ ಕಾರಣದಿಂದ ಅರ್ಜಿ ಸಲ್ಲಿಕೆ ದಿನಾಂಕವನ್ನು ಡಿ. 5ರ ವರೆಗೆ ವಿಸ್ತರಿಸಿ ಹೈ ಕೋರ್ಟ್ ಆದೇಶ ನೀಡಿದೆ. [ಮಾತೃಭಾಷೆ ಶಿಕ್ಷಣ ಎಂದರೇನು ವಿವರಿಸಿ: ಸುಪ್ರೀಂ]
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications