ಟಿಪ್ಪು ಜಯಂತಿ ರದ್ದು: ಸದನದಲ್ಲಿ ವಿಪಕ್ಷಗಳ ಆಕ್ರೋಶ
Recommended Video
ಬೆಂಗಳೂರು, ಆಗಸ್ಟ್ 01: ಟಿಪ್ಪು ಜಯಂತಿಯನ್ನು ಸರ್ಕಾರ ರದ್ದು ಮಾಡಿರುವ ವಿಷಯ ಸದನದಲ್ಲಿ ಇಂದು ಕೋಲಾಹಲ ಎಬ್ಬಿಸಿತು.
ಸದನದಲ್ಲಿ ವಿಷಯ ಪ್ರಸ್ತಾಪಿಸಿದ ಸಿದ್ದರಾಮಯ್ಯ ಅವರು, ಟಿಪ್ಪು ಜಯಂತಿಯನ್ನು ರದ್ದು ಮಾಡಿದ ಸರ್ಕಾರದ ಕ್ರಮವನ್ನು ಖಂಡಿಸಿದರು. ತಾವು ಮಾತನಾಡುವ ವೇಳೆಯಲ್ಲಿ ಮುಖ್ಯಮಂತ್ರಿ ಅವರು ಉಪಸ್ಥಿತರಿರಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದರು.
ನೊಟೀಸ್ ನೀಡದೇ ಟಿಪ್ಪು ಜಯಂತಿ ಬಗ್ಗೆ ಮಾತನಾಡುತ್ತಿರುವುದಕ್ಕೆ ಸ್ಪೀಕರ್ ಕಾಗೇರಿ ಅವರು ಆಕ್ಷೇಪ ವ್ಯಕ್ತಪಡಿಸದರು, ಆದರೆ 'ಎಲ್ಲ ವಿಷಯವನ್ನು ನೊಟೀಸ್ ನೀಡಿಯೇ ಮಾತನಾಡಬೇಕು ಎಂಬ ನಿಯಮವಿಲ್ಲ' ಎಂದು ಸಿದ್ದರಾಮಯ್ಯ ವಾದಿಸಿದರು.

ಸಿದ್ಧಾರ್ಥ ಅವರ ಅಂತಿಮಕಾರ್ಯದಲ್ಲಿ ಪಾಲ್ಗೊಳ್ಳಬೇಕು ಎಂದು ಯಡಿಯೂರಪ್ಪ ಅವರು ತೆರಳಿದ್ದಾರೆ, ಸದನದ ಕಾರ್ಯವಿಧಾನ ಪೂರ್ಣಗೊಳಿಸಿದ್ದಾರೆ ಎಂದು ಸ್ಪೀಕರ್ ಅವರು ಯಡಿಯೂರಪ್ಪ ಅವರು ಸದನದಿಂದ ಹೊರಟ ಬಗ್ಗೆ ಮಾಹಿತಿ ನೀಡಿದರು.
ಆದರೆ ಇದಕ್ಕೆ ತೃಪ್ತವಾಗದ ಸಿದ್ದರಾಮಯ್ಯ ಅವರು, ಇನ್ನೂ ಸಚಿವ ಸಂಪುಟ ರಚನೆ ಆಗಿಲ್ಲ, ಸಿಎಂ ಸಹ ಸದನದಲ್ಲಿ ಇಲ್ಲವೆಂದ ಮೇಲೆ ನಾವು ಯಾರನ್ನು ಕುರಿತು ಮಾತನಾಡಬೇಕು ಎಂದು ಸಿದ್ದರಾಮಯ್ಯ ಏರಿದ ದನಿಯಲ್ಲಿ ಆಕ್ಷೇಪಣೆ ಎತ್ತಿದರು. ಇದಕ್ಕೆ ಕಾಂಗ್ರೆಸ್ ಮತ್ತು ಜೆಡಿಎಸ್ ಸದಸ್ಯರು ದನಿಗೂಡಿಸಿದರು.
ಗದ್ದಲ ಹೆಚ್ಚಾದ ಕಾರಣ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ವಿಧಾನಸಭೆಯನ್ನು ಅನಿರ್ದಾಷ್ಟವಧಿಗೆ ಮುಂದೂಡಿದರು.
-
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications