ಟಿಪ್ಪು ಜಯಂತಿ ಕುರಿತು ಸಚಿವೆ ಜಯಮಾಲಾ ನೇತೃತ್ವದಲ್ಲಿ ಸಭೆ
ಬೆಂಗಳೂರು, ನವೆಂಬರ್ 3: ಟಿಪ್ಪು ಜಯಂತಿ ಆಚರಣೆ ಕುರಿತು ಕನ್ನಡ ಮತ್ತು ಸಂಸ್ಕೃತಿ ಸಚಿವೆ ಜಯಮಾಲಾ ನೇತೃತ್ವದಲ್ಲಿ ವಿಧಾನಸೌಧದಲ್ಲಿ ಶನಿವಾರ ಸಭೆ ನಡೆಯಿತು.
ಸಚಿವ ಜಮೀರ್ ಅಹಮದ್ ಕೂಡ ಸಭೆಯಲ್ಲಿ ಪಾಲಗೊಂಡಿದ್ದರು, ಸಭೆಯಲ್ಲಿ ತೆಗೆದುಕೊಂಡ ನಿರ್ಣಯಗಳನ್ನು ಸಿಎಂ ಗೃಹ ಕಚೇರಿ ಕೃಷ್ಣಾಗೆ ತೆರಳಿ ಸಲ್ಲಿಸಲಾಯಿತು. ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಇದಕ್ಕೆ ಒಪ್ಪಿಗೆ ಸೂಚಿಸಿದ ಬಳಿಕ ಟಿಪ್ಪು ಆಚರಣೆ ಒಂದು ರೂಪ ಪಡೆದುಕೊಳ್ಳಲಿದೆ.
ಟಿಪ್ಪು ಜಯಂತಿ ಆಚರಣೆಗೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರಕ್ಕೆ ಹೈಕೋರ್ಟ್ 1ಸಾವಿರ ದಂಡ ವಿಧಿಸಿತ್ತು. ರಾಜ್ಯಾದ್ಯಂತ ಟಿಪ್ಪು ಜಯಂತಿಯನ್ನು ಆಚರಣೆ ಮಾಡುವುದನ್ನು ಪ್ರಶ್ನಿಸಿ ಮಡಿಕೇರಿ ಮೂಲದ ಮಂಜುನಾಥ್ ಅವರು ಕರ್ನಾಟಕ ಹೈಕೋರ್ಟ್ಗೆ ಪಿಐಎಲ್ ಸಲ್ಲಿಸಿದ್ದರು. ಹೈಕೋರ್ಟ್ ಅರ್ಜಿಯ ವಿಚಾರಣೆ ನಡೆಸಿತ್ತು.

ಕರ್ನಾಟಕ ಸರ್ಕಾರಕ್ಕೆ ಆಕ್ಷೇಪಣೆ ಸಲ್ಲಿಸುವಂತೆ ನ್ಯಾಯಾಲಯ ಸೂಚನೆ ನೀಡಿತ್ತು. ಆಕ್ಷೇಪಣೆ ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನವಾಗಿತ್ತು. ಆದರೆ ಯಾವುದೇ ಆಕ್ಷೇಪಣೆ ಅರ್ಜಿಗಳು ಸಲ್ಲಿಕೆಯಾಗಿರಲಿಲ್ಲ.
ನಿನ್ನೆಯಷ್ಟೇ ಕುಮಾರಸ್ವಾಮಿ ಟಿಪ್ಪು ಜಯಂತಿ ವಿಚಾರದ ಕುರಿತು ಮಾತನಾಡಿದ್ದು ಕಾಂಗ್ರೆಸ್ ಸರ್ಕಾರದಲ್ಲಿ ಆರಂಭಗೊಂಡು ಭಾರಿ ವಿವಾದ ಸೃಷ್ಠಿಸಿದ್ದ ಟಿಪ್ಪು ಜಯಂತಿಯನ್ನು ಕುಮಾರಸ್ವಾಮಿ ಸರ್ಕಾರ ಕೈಬಿಡುವುದಿಲ್ಲವಂತೆ ಹಾಗೆಂದು ಮುಖ್ಯಮಂತ್ರಿ ಅವರೇ ಸ್ಪಷ್ಟಪಡಿಸಿದ್ದರು. ಹಿಂದಿನ ಕಾಂಗ್ರೆಸ್ ಸರ್ಕಾರ ಆರಂಭಿಸಿದ್ದ ಯೋಜನೆಗಳು, ಕಾರ್ಯಕ್ರಮಗಳು ಮುಂದುವರೆಸಲು ಬದ್ಧನಾಗಿದ್ದೇನೆ ಅದರಂತೆ ಟಿಪ್ಪು ಜಯಂತಿ ಸಹ ಮುಂದುವರೆಯಲಿದೆ ಎಂದು ಹೇಳಿದ್ದರು.
-
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ವಲಸೆ ಕಾರ್ಮಿಕರಿಂದಾಗಿ ಉದ್ಯೋಗ ನಷ್ಟವಾಗುತ್ತಿರುವ ಬಗ್ಗೆ ಅಧಿಕೃತ ದೂರು ಸಲ್ಲಿಕೆಯಾಗಿಲ್ಲ: ಕಾರ್ಮಿಕ ಇಲಾಖೆ ಸ್ಪಷ್ಟನೆ -
ಯುಗಾದಿ, ರಂಜಾನ್ ಹಬ್ಬಕ್ಕೆ 2000 ವಿಶೇಷ ಬಸ್: ಮುಂಗಡ ಟಿಕೆಟ್ ಗೆ ರಿಯಾಯ್ತಿ ಘೋಷಿಸಿದ KSRTC -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ












Click it and Unblock the Notifications