ಸಿಎಂ ಸಿದ್ದು, ಮೋದಿಗೆ ಯುಆರ್ ಅನಂತಮೂರ್ತಿ ಬುದ್ಧಿವಾದ

ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿಗೆ ರಾಜಧರ್ಮ ಗೊತ್ತಿಲ್ಲ ಎಂದು ಲೇವಡಿ ಮಾಡಿದ ಡಾ. ಯುಆರ್ ಅನಂತಮೂರ್ತಿ ಅವರು ಅದನ್ನು (ರಾಜಧರ್ಮ) ವಾಜಪೇಯಿ ಅವರೇ ಕಾರ್ಯಕ್ರಮವೊಂದರಲ್ಲಿ ಬಹಿರಂಗವಾಗಿ ಹೇಳಿ ರಾಜಧರ್ಮ ಪಾಲಿಸುವಂತೆ ತಿಳಿಸಿದ್ದರು.
ನರೇಂದ್ರ ಮೋದಿಗೆ ಇತ್ತೀಚೆಗೆ ಬುದ್ಧಿ ಬಂದಂತೆ ಇದೆ. ನಿನ್ನೆ ಬೆಂಗಳೂರಿನಲ್ಲಿ ನಡೆದ ಸಮಾವೇಶದಲ್ಲಿ ಸೋನಿಯಾ ಗಾಂಧಿ ಅವರನ್ನು ಟೀಕಿಸುವುದನ್ನು ಬಿಟ್ಟಿದ್ದಾರೆ. ಹೀಗೆ ಹಂತಹಂತವಾಗಿ ರಾಜಧರ್ಮ ಪಾಲಿಸುವುದನ್ನು ಕಲಿತುಕೊಳ್ಳಲಿ ಎಂದು ಆಶಿಸಿದರು.
ತದನಂತರ ಕರ್ನಾಟಕದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನೂ ತರಾಟೆಗೆ ತೆಗೆದುಕೊಂಡ ಡಾ. ಯುಆರ್, ಪ್ರವಾಸ ಭಾಗ್ಯ, ಶಾದಿ ಭಾಗ್ಯ ಬಗ್ಗೆ ತಮ್ಮ ಅಸಮಾಧಾನವನ್ನು ಹೊರಹಾಕಿದರು. ಇಂತಹ ಜನಪರ ಯೋಜನೆಗಳು ಸಮರ್ಪಕವಾಗಿರಬೇಕು.
ಯಾವುದೇ ಒಂದು ಜಾತಿ ವರ್ಗದವರನ್ನು ಮಾತ್ರ ಪ್ರವಾಸಕ್ಕೆ ಕಳುಹಿಸುವುದು ಸರಿಯಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ ಇಂತಹ ಯೋಜನೆಗಳನ್ನು ಜಾರಿಗೆ ತರಬಾರದು. ಬದಲಿಗೆ ಎಲ್ಲಾ ಮಕ್ಕಳನ್ನು ಪ್ರವಾಸಕ್ಕೆ ಕಳುಹಿಸುವ ಯೋಜನೆ ರೂಪಿಸಲಿ ಎಂದು ಆಶಿಸಿದರು.
ಶಾದಿ ಭಾಗ್ಯ ಯೋಜನೆ ಹೆಸರಿನಲ್ಲಿ ಹಾಸಿಗೆ, ಮಂಚ ನೀಡುವ ಬದಲು ಮಹಿಳಾ ಸಬಲೀಕರಣಕ್ಕೆ ಹೆಚ್ಚು ಒತ್ತು ನೀಡುವಂತೆಯೂ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಅನಂತಮೂರ್ತಿ ಸಲಹೆ ನೀಡಿದರು.
ಮೈಸೂರು ದೊರೆ ಟಿಪ್ಪು ಸುಲ್ತಾನ್ 264ನೇ ಜನ್ಮದಿನ ಅಂಗವಾಗಿ ಟಿಪ್ಪು ಸುಲ್ತಾನ್ ರಾಷ್ಟ್ರೀಯ ಪ್ರಶಸ್ತಿಯು ಡಾ ಯುಆರ್ ಅವರ ಜತೆಗೆ ಅಹಿಂದ ಕಾರ್ಯಕಾರಿ ರಾಜ್ಯಾಧ್ಯಕ್ಷ ಪ್ರೊ. ಎನ್ ವಿ ನರಸಿಂಹಯ್ಯ ಹಾಗೂ ಸಮಾಜ ಸೇವಕಿ ಪ್ರೊ. ನಾಜನೀನ್ ಬೇಗಂ ಅವರಿಗೂ ಪ್ರಶಸ್ತಿ ಪ್ರದಾನ ಮಾಡಲಾಯಿತು.
-
LPG Crisis: ಎಲ್ಪಿಜಿ ಬಿಕ್ಕಟ್ಟಿನ ಸುಳಿಯಲ್ಲಿ ಭಾರತದ ಪ್ರಮುಖ ನಗರಗಳು: ದರ್ಶಿನಿಗಳು ಬಂದ್, ಪಿಜಿಗಳಲ್ಲಿ ಮೆನು ಚೇಂಜ್ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Gas Bill: ಇಡ್ಲಿ-ವಡೆ ಜೊತೆಗೆ ಗ್ಯಾಸ್ ಶುಲ್ಕ ವಿಧಿಸಿದ ರೆಸ್ಟೋರೆಂಟ್!: ದಂಗಾದ ಗ್ರಾಹಕರು, ಇಲ್ಲಿವೆ ನೋಡಿ ದರಗಳು -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ












Click it and Unblock the Notifications