ಮೇ 25ರಿಂದ ಪ್ರಮುಖ ನಗರಗಳಲ್ಲಿ ತಿರುಪತಿ ಲಡ್ಡು ಮಾರಾಟ
ಬೆಂಗಳೂರು, ಮೇ 25: ಲಾಕ್ಡೌನ್ನಿಂದ ತಿರುಪತಿ ದೇವಾಲಯ ಬಂದ್ ಆಗಿದೆ. ಭಕ್ತರ ದರ್ಶನಕ್ಕೆ ನಿರ್ಬಂಧ ಹೇರಲಾಗಿದೆ. ಸುಮಾರು ಎರಡೂವರೆ ತಿಂಗಳಿನಿಂದ ತಿರುಪತಿ ದೇವಸ್ಥಾನದ ಬಾಗಿಲು ಮುಚ್ಚಲಾಗಿದ್ದು, ಭಕ್ತರು ನಿರಾಸೆಯಾಗಿದ್ದಾರೆ.
Recommended Video
ದೇವಸ್ಥಾನ ಬಂದ್ ಆಗಿದ್ದರೂ ತಿರುಪತಿ ಲಡ್ಡುಗಳನ್ನು ಮಾರಾಟ ಮಾಡಲು ತಿರುಮಲ ತಿರುಪತಿ ದೇವಸ್ಥಾನ ಸಂಸ್ಥೆ ಮುಂದಾಗಿತ್ತು. ಸಬ್ಸಿಡಿ ಬೆಲೆಯಲ್ಲಿ ಲಡ್ಡು ಮಾರಾಟ ಮಾಡಲು ನಿರ್ಧರಿಸಿದ್ದ ದೇವಾಯಲದ ಆಡಳಿತ ಮಂಡಳಿ ಇಂದಿನಿಂದ ಪ್ರಮುಖ ನಗರಗಳಲ್ಲಿ ಲಡ್ಡು ಮಾರಾಟಕ್ಕೆ ಚಾಲನೆ ನೀಡಿದೆ.
ಆಂಧ್ರಪ್ರದೇಶದ ಎಲ್ಲ ಜಿಲ್ಲಾ ಪ್ರಮುಖ ಕಚೇರಿಗಳಲ್ಲಿ ಹಾಗೂ ಬೆಂಗಳೂರು, ಚೆನ್ನೈ, ಹೈದರಾಬಾದ್, ತೆಲಂಗಾಣದ ಟಿಟಿಡಿ ಕಲ್ಯಾಣ ಮಂಟಪಗಳು ಮತ್ತು ಮಾಹಿತಿ ಕೇಂದ್ರಗಳಲ್ಲಿ ಲಡ್ಡು ದೊರೆಯಲಿದೆ.

ಈ ಲಡ್ಡು 179 ಗ್ರಾಂ ತೂಕ ಇರುತ್ತೆ. ಒಂದು ಲಡ್ಡು ತಯಾರಿಸಲು 40 ರೂಪಾಯಿ ಖರ್ಚಾಗಲಿದೆ. ತಿರುಪತಿಯಲ್ಲಿ ಆ ಲಡ್ಡಿನ ಬೆಲೆ 50 ರೂಪಾಯಿ. ದೇವರ ದರ್ಶನ ಪಡೆದ ಭಕ್ತಾದಿಗಳಿಗೆ ಉಚಿತವಾಗಿ ನೀಡಲಾಗುತ್ತಿತ್ತು. ಈಗ 50 ರೂಪಾಯಿ ಬದಲು 25 ರೂಪಾಯಿಗೆ ಲಡ್ಡು ಮಾರಾಟ ಮಾಡಲಾಗುತ್ತೆ ಎಂದು ಟಿಟಿಡಿ ಸಂಸ್ಥೆ ಹೇಳಿದೆ.
ಲಾಕ್ಡೌನ್ನಿಂದ ದೇವಸ್ಥಾನದ ನಿರ್ವಹಣೆ ಮಂಡಳಿ ಮೇಲೆ ಪರಿಣಾಮ ಬೀರಿರುತ್ತೆ. ಈ ಬಗ್ಗೆ ಮಾತನಾಡಿದ ಟಿಟಿಡಿ ಮುಖ್ಯಸ್ಥ ''ನಮ್ಮ ಉದ್ಯೋಗಿಗಳಿಗೆ ಸಂಬಳ ಮತ್ತು ಪಿಂಚಣಿ ಪಾವತಿಸಲು ಅಥವಾ ದೇವಾಲಯದ ನಿರ್ವಹಣೆಗೆ ಯಾವುದೇ ಹಣದ ಕೊರತೆಯಿಲ್ಲ'' ಎಂದು ಹೇಳಿದ್ದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications