ಸಿನಿಮೀಯ ಶೈಲಿಯಲ್ಲಿ1200 ಕಿ.ಮೀ ಚೇಸ್ ಮಾಡಿ ಆರೋಪಿಗಳನ್ನು ಕರೆತಂದ ಬೆಂಗಳೂರು ಪೊಲೀಸ್!
ಬೆಂಗಳೂರು, ಏಪ್ರಿಲ್ 28: ಬೆಂಗಳೂರಿಗೆ ಬರುವ ಕೆಲವು ದರೋಡೆಕೋರರು ಸಿಕ್ಕ ಸಿಕ್ಕವರ ಹತ್ತಿರ ಸುಲಿಗೆ ಮಾಡಿ ಟ್ರೈನ್ ಹತ್ತಿ ಎಸ್ಕೇಪ್ ಆಗಿ ಬಿಡುತ್ತಾರೆ. ಮಡಿವಾಳದ ಬಳಿ ಓಲಾ ಕ್ಯಾಬ್ ಚಾಲಕನ ಹಣ ಕಿತ್ತುಕೊಂಡು ಚಾಲಕನಿಗೆ 32 ಕಡೆ ಚಾಕುವಿಂದ ಕುಯ್ದು ಪರಾರಿಯಾಗಿದ್ದರು. ಪೊಲೀಸ್ ಠಾಣೆಯ ಕೂಗಳತೆ ದೂರದಲ್ಲೆ ನೆಡೆದಿದ್ದು ಇದನ್ನು ಸವಾಲಾಗಿ ತೆಗೆದುಕೊಂಡ ಮಡಿವಾಳ ಪೊಲೀಸರು ಆರೋಪಿಗಳನ್ನು 1200 ಕೀಮೀ ಚೇಜ್ ಮಾಡಿ 48 ಗಂಟೆಯಲ್ಲಿ ದರೋಡೆಕೋರ ಬಂಧಿಸಿದ್ದಾರೆ.
ಓಲಾ ಕ್ಯಾಬ್ ಹತ್ತಿದರು.. ಚಾಲಕನಿಗೆ 32 ಕಡೆ ಇರಿದರು..!
ಇದೇ ತಿಂಗಳು 17 ರಂದು ಬೊಮ್ಮನಹಳ್ಳಿ ಬಳಿ ಮುಂಜಾನೆ 3ರ ಸಮಯದಲ್ಲಿ ಇಬ್ಬರು ಯುವಕರು ಓಲಾ ಡ್ರಾಪ್ಗಾಗಿ ಕ್ಯಾಬ್ ಹತ್ತಿದ್ದಾರೆ. ಕ್ಯಾಬ್ ಮಡಿವಾಳದ ಅಯ್ಯಪ್ಪ ಸ್ವಾಮಿ ದೇವಾಲಯದ ಬಳಿ ಬರುತ್ತಿದ್ದಂತೆ ಆರೋಪಿಗಳು ಚಾಲಕನಿಗೆ ಚಾಕು ತೋರಿಸಿ ಹಣ ಕೇಳಿದ್ದಾರೆ. ಚಾಲಕ ಹಣ ಕೊಡದೆ ಇದ್ದಾಗ ಚಾಲಕ ಬೆನ್ನಿಗೆ 32 ಕಡೆ ಇರಿದು 12 ಸಾವಿರದಷ್ಟು ಹಣ ಕಿತ್ತುಕೊಂಡು ಪರಾರಿಯಾಗಿದ್ದಾರೆ. ಅಲ್ಲೇ ಗಸ್ತಿನಲ್ಲಿದ್ದ ಮಡಿವಾಳ ಪೊಲೀಸರೇ ಗಾಯಾಳು ಚಾಲಕನನ್ನು ಅಸ್ಪತ್ರೆಗೆ ಗೆ ದಾಖಲು ಮಾಡಿ ಆರೋಪಿಗಳ ಬೆನ್ನು ಬಿದ್ದಿದ್ದರು.

ಮೊಬೈಲ್ ನ ಜಾಡು ಹಿಡಿದು ಆರೋಪಿಗಳ ಚೇಸ್
ಚಾಲಕ ಓಲಾ ಬುಕ್ ಮಾಡಿದ್ದ ಫೋನ್ ನಂಬರ್ ಅನ್ನು ಪೊಲೀಸರಿಗೆ ನೀಡುತ್ತಾನೆ. ಅದೇ ಮೊಬೈಲ್ನ ಜಾಡು ಹಿಡಿದಾಗ ಆಗಲೇ ಯಶವಂತಪುರದ ಬಳಿ ಟ್ರೈನ್ ಹತ್ತಿರುವುದು ಗೊತ್ತಾಗಿದೆ. ಮೊಬೈಲ್ ಟವರ್ ಹಾಗು ಟ್ರೈನ್ ಲೊಕೇಶನ್ ಒಟ್ಟಿಗೆ ಬಂದಿದೆ. ರಾಜಾಸ್ಥಾನದ ಬಿಕಾನೇರ್ ಟ್ರೈನ್ ನಲ್ಲಿ ಆರೋಪಿಗಳು ಹೊರಟಿದ್ದಾರೆ ಎಂದು ಗೊತ್ತಾಗುತ್ತಿದ್ದಂತೆ ಡಿಸಿಪಿ ಶ್ರೀನಾಥ್ ಹಾಗೂ ಎಸಿಪಿ ಸುಧೀರ್ ಹೆಗಡೆ ಮಾರ್ಗದರ್ಶನದಲ್ಲಿ ಮೂರು ತಂಡಗಳನ್ನು ಮಾಡಿ ಆರೋಪಿಗಳನ್ನು ಚೇಸ್ ಮಾಡಿದ್ದಾರೆ. ಒಂದು ತಂಡ ಫ್ಲೈಟ್ ನಲ್ಲಿ ಇನ್ನೊಂದು ತಂಡ ರೈಲಿನ ಒಳಗಡೆ ಹಾಗೂ ಮತ್ತೊಂದು ತಂಡ ಕಾರಿನಲ್ಲಿ ಟ್ರೈನ್ನನ್ನು ಚೇಸ್ ಮಾಡಿದ್ದಾರೆ. ಆರೋಪಿಗಳು ಸುರತ್ಕಲ್ ಬಳಿ ಇಳಿದುಕೊಂಡು ಗುಜರಾತ್ನ ದಹೇಜ್ ಕೈಗಾರಿಕಾ ಪ್ರದೇಶಕ್ಕೆ ಹೋಗಿದ್ದಾರೆ. ಅಲ್ಲಿ ಸುತ್ತುವರೆದ ಮಡಿವಾಳ ಪೊಲೀಸರು ಇಬ್ಬರು ಆರೋಪಿಗಳನ್ನು ಖೆಡ್ಡಾಗೆ ಕೆಡವಿ ಬಂಧಿಸಿದ್ದಾರೆ.

ಆರೋಪಿಗಳನ್ನು ವಿಚಾರಿಸಿದಾಗ ಅವರು ಕಾನೂನು ಸಂಘರ್ಷಕ್ಕೊಳಗಾದ ಬಾಲಕರೆಂದು ತಿಳಿದು ಬಂದಿದೆ. ಆರೋಪಿ ಬಾಲಕರು ಎರಡು ದಿನಗಳ ಹಿಂದೆಯಷ್ಟೇ ಬೆಂಗಳೂರಿಗೆ ಬಂದಿದ್ದು ಊರಿಗೆ ಹೋಗುವ ಮುಂಚೆ ಸುಲಿಗೆ ಮಾಡಿಕೊಂಡು ಹೋಗಲು ಯೋಚಿಸಿದ್ದರಂತೆ. ಸದ್ಯ ಆರೋಪಿ ಬಾಲಕರನ್ನು ಪೊಲೀಸರು ಬಾಲಾಪರಾಧಿಗಳ ಪರಿವೀಕ್ಷಣಾ ಮಂದಿರಕ್ಕೆ ರಿಮ್ಯಾಂಡ್ ಮಾಡಿದ್ದಾರೆ. ಒಟ್ಟಿನಲ್ಲಿ ತಪ್ಪು ಮಾಡಿದವರು ಎಲ್ಲೇ ಅಡಗಿದ್ದರೂ ಬೆಂಗಳೂರು ಪೊಲೀಸರು ಬಿಡಲ್ಲ ಅನ್ನೋದಕ್ಕೆ ಈ ಪ್ರಕರಣ ಸಾಕ್ಷಿಯಾಗಿದೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications