ರಮ್ಯಾ 'ಕೊಲೆಗಡುಕ' ಎಂದಿದ್ದು ಮೋದಿಗೋ, ಅಮಿತ್ ಶಾ ಅವರಿಗೋ?
ಪ್ರಧಾನಿ ಮೋದಿ ಅಥವಾ ಅಮಿತ್ ಶಾ ಅವರಿಗೆ ಕೊಲೆಗಡುಕ ಎಂದು ಕರೆದರೇ ಕಾಂಗ್ರೆಸ್ ನಾಯಕಿ ರಮ್ಯಾ. ಗುಜರಾತ್ ಸಿಎಂ ವಿಜಯ್ ರುಪಾನಿ ಟ್ವೀಟ್ ಗೆ ಪ್ರತ್ಯುತ್ತರ ನೀಡುವಾಗ ಇಂಥದ್ದೊಂದು ಹೇಳಿಕೆ ನೀಡಿದ ರಮ್ಯಾ.
ನವದೆಹಲಿ, ಆಗಸ್ಟ್ 5: ಚಿತ್ರನಟಿ ಹಾಗೂ ಕಾಂಗ್ರೆಸ್ ನಾಯಕಿ ರಮ್ಯಾ ಅವರು ತಮ್ಮದೊಂದು ಟ್ವೀಟ್ ನಲ್ಲಿ 'ಕೊಲೆಗಡುಕ' ಎಂದ ಪದ ಉಪಯೋಗಿಸಿದ್ದು, ಇದು ಮೋದಿ ಅಥವಾ ಅಮಿತ್ ಶಾ ಅವರಿಗೇ ನೀಡಿದ ನೇರ ಟಾಂಗ್ ಎಂದು ಹೇಳಲಾಗಿದೆ.
ರಮ್ಯಾ ಅವರು ಹೀಗೆ ಟ್ವೀಟ್ ಮಾಡುವ ಹಿಂದಿನ ಕಾರಣ ಇಲ್ಲಿದೆ. ಶುಕ್ರವಾರ ಗುಜರಾತ್ ಗೆ ಭೇಟಿ ನೀಡಿದ್ದ ರಾಹುಲ್ ಗಾಂಧಿ ಭೇಟಿ ಮಾಡಿದ್ದು, ಅಲ್ಲಿ ಅವರ ಕಾರಿನ ಮೇಲೆ ಕೆಲ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ.
ಇದು, ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ನಡುವಿನ ಆರೋಪ, ಪ್ರತ್ಯಾರೋಪಗಳಿಗೆ ಗುರಿಯಾಗಿದೆ.

ಈ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ಗುಜರಾತ್ ಮುಖ್ಯಮಂತ್ರಿ ವಿಜಯ್ ರುಪಾನಿ, ''ಕಾಂಗ್ರೆಸ್ ನ ಇಂಥ ನಾಟಕ (ಕಲ್ಲು ತೂರಾಟದ ಘಟನೆ) ಎಂಬುದು ಗುಜರಾತ್ ಜನರಿಗೆ ಗೊತ್ತಿಲ್ಲದ ವಿಚಾರವೇನಲ್ಲ'' ಎಂದು ಕೆಣಕಿದ್ದಾರೆ.
ಇದರಿಂದ ಕೆರಳಿದ ರಮ್ಯಾ ಅವರು, ''ಹೌದೌದು. ಕಾನೂನು ಸುವ್ಯವಸ್ಥೆಯನ್ನು ನೀವು ಒಬ್ಬ ಕೊಲೆಗಡುಕನಿಂದ ಕಲಿತವರು ತಾನೇ'' ಎಂದು ಟಾಂಗ್ ನೀಡಿದ್ದಾರೆ.

ಅವರ ಈ ಮಾತು, ಪ್ರಧಾನಿ ನರೇಂದ್ರ ಮೋದಿಗೋ, ಅಮಿತ್ ಶಾ ಅವರಲ್ಲಿ ಒಬ್ಬರಿಗೆ ಸಲ್ಲುತ್ತದೆ ಎಂದ ಮಾತು ಚಾಲ್ತಿಯಲ್ಲಿದೆ. ಇದಕ್ಕೆ ಉತ್ತರ ಖುದ್ದು ರಮ್ಯಾ ಅವರೇ ನೀಡಬೇಕು.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ












Click it and Unblock the Notifications