ನಾಡಪ್ರಭು ಕೆಂಪೇಗೌಡರ 513 ನೇ ಜಯಂತಿ: ಗಣ್ಯರಿಂದ ಶುಭಾಶಯಗಳ ಮಹಾಪೂರ
ಭಾರತದ ಐಟಿ ರಾಜಧಾನಿ ಎನಿಸಿಕೊಂಡಿರುವ ಬೆಂಗಳೂರಿನಲ್ಲಿ 12 ಲಕ್ಷಕ್ಕೂ ಹೆಚ್ಚು ಸಾಫ್ಟ್ವೇರ್ ಇಂಜಿನಿಯರುಗಳಿದ್ದು, ಇಷ್ಟು ಅಪಾರ ಸಂಖ್ಯೆಯ ಪ್ರತಿಭಾವಂತರು ಹೀಗೆ ಬೇರೆಲ್ಲೂ ಒಂದೇ ನಗರದಲ್ಲಿ ನೆಲೆಗೊಂಡಿಲ್ಲ. ಇಂತಹ ಪ್ರತಿಭಾ ಸಮೃದ್ಧಿಯಿಂದಾಗಿಯೇ ರಾಜ್ಯದ ರಾಜಧಾನಿಯು ಭಾರತದ ಸಿಲಿಕಾನ್ ಕಣಿವೆಯೆಂಬ ಹೆಗ್ಗಳಿಕೆ ಪಡೆದಿದೆ. ಹೀಗೆ ವೇಗವಾಗಿ ಬೆಳೆಯುತ್ತಿರುವ, ಇಡೀ ಪ್ರಪಂಚದಲ್ಲಿ ಗುರುತಿಸಿಕೊಂಡಿರುವ ಬೆಂಗಳೂರನ್ನು ಕಟ್ಟಿದ ನಾಡಪ್ರಭು ಕೆಂಪೇಗೌಡರ 513 ನೇ ಜಯಂತಿಯನ್ನು ಇಂದು ಆಚರಿಸಲಾಗುತ್ತಿದೆ. ಈ ನಿಮಿತ್ತ ಗಣ್ಯರು, ರಾಜಕೀಯ ಮುಖಂಡರು ಸಾಮಾಜಿಕ ವೇದಿಕೆ ಕೂ ನಲ್ಲಿ ಶುಭಾಶಯ ಕೋರಿದ್ದಾರೆ.
ನಾಡಿನ ಸಮಸ್ತ ಜನತೆಗೆ ನಾಡಪ್ರಭು ಕೆಂಪೇಗೌಡರ 513 ನೇ ಜಯಂತಿಯ ಹಾರ್ದಿಕ ಶುಭಾಶಯಗಳು. ಕೆಂಪೇಗೌಡರ ದೂರದೃಷ್ಟಿ, ಸಮರ್ಥ ಹಾಗೂ ಜನಪರ ಆಡಳಿತ ನಮ್ಮಲ್ಲರಿಗೂ ಸದಾ ಪ್ರೇರಣೆ ಯಾಗಿವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಭಾಶಯ ತಿಳಿಸಿದ್ದಾರೆ.
ನಾಡಪ್ರಭು ಕೆಂಪೇಗೌಡರ ಗೌರವಾರ್ಥ ಸರ್ಕಾರ ನೀಡುತ್ತಿರುವ 'ಕೆಂಪೇಗೌಡ ಅಂತಾರಾಷ್ಟ್ರೀಯ ಪ್ರಶಸ್ತಿ'ಗೆ ಭಾಜನರಾದ ಶ್ರೀ ಎಸ್.ಎಂ ಕೃಷ್ಣ, ಶ್ರೀ ಎನ್.ಆರ್ ನಾರಾಯಣ ಮೂರ್ತಿ, ಶ್ರೀ ಪ್ರಕಾಶ್ ಪಡುಕೋಣೆ ಅವರಿಗೆ ನನ್ನ ಅಭಿನಂದನೆಗಳು. ಈ ಪ್ರಶಸ್ತಿಯು ಸಮಾಜಕ್ಕೆ ಅವರು ಸಲ್ಲಿಸಿದ ನಿಸ್ವಾರ್ಥ ಸೇವೆಯ ಪ್ರತಿಫಲವಾಗಿದೆ ಎಂದು ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಕೂ ಮಾಡಿದ್ದಾರೆ.
Koo Appನಾಡಪ್ರಭು ಕೆಂಪೇಗೌಡರ ಗೌರವಾರ್ಥ ಸರ್ಕಾರ ನೀಡುತ್ತಿರುವ ‘ಕೆಂಪೇಗೌಡ ಅಂತಾರಾಷ್ಟ್ರೀಯ ಪ್ರಶಸ್ತಿ’ಗೆ ಭಾಜನರಾದ ಶ್ರೀ ಎಸ್.ಎಂ ಕೃಷ್ಣ, ಶ್ರೀ ಎನ್.ಆರ್ ನಾರಾಯಣ ಮೂರ್ತಿ, ಶ್ರೀ ಪ್ರಕಾಶ್ ಪಡುಕೋಣೆ ಅವರಿಗೆ ನನ್ನ ಅಭಿನಂದನೆಗಳು. ಈ ಪ್ರಶಸ್ತಿಯು ಸಮಾಜಕ್ಕೆ ಅವರು ಸಲ್ಲಿಸಿದ ನಿಸ್ವಾರ್ಥ ಸೇವೆಯ ಪ್ರತಿಫಲವಾಗಿದೆ. @BJP4Karnataka @bsbommai - Dr. Murugesh R Nirani (@murugesh_nirani) 27 June 2022

ಸಮಸ್ತ ಜನತೆಗೆ ನಾಡಪ್ರಭು ಕೆಂಪೇಗೌಡ ಅವರ 513ನೇ ಜಯಂತಿಯ ಶುಭಾಶಯಗಳು. ನಾಡಿನ ಹೆಮ್ಮೆಯ ಪುತ್ರ, ನವಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡ ಅವರ 108 ಅಡಿ ಎತ್ತರದ ಪ್ರತಿಮೆ ನಿರ್ಮಾಣ ಕಾರ್ಯದ ಕಿರು ನೋಟ ಎಂದು ವಿಡಿಯೋ ಮೂಲಕ ಶುಭಾಶಯ ತಿಳಿಸಿದ್ದಾರೆ.

ರಾಜಧಾನಿ ಬೆಂಗಳೂರಿಗೆ ಭದ್ರ ಅಡಿಪಾಯ ಹಾಕಿದ ಜನವಲ್ಲಭ, ಪ್ರಜಾಪ್ರಿಯ ಆಡಳಿತಗಾರ, ನಾಡಪ್ರಭು ಕೆಂಪೇಗೌಡರ ಜಯಂತಿಯಂದು ಆದರಪೂರ್ವಕ ಪ್ರಣಾಮಗಳು. ವೈಜ್ಞಾನಿಕ ದೃಷ್ಟಿಕೋನದೊಂದಿಗೆ ಮಹಾನಗರವನ್ನು ಬೆಳೆಸಿ, ಜನಜೀವನಕ್ಕೆ ಅನೇಕ ಮೂಲಸೌಕರ್ಯಗಳನ್ನು ಕಲ್ಪಿಸಿಕೊಟ್ಟ ಅವರು ಚಾರಿತ್ರಿಕ ವ್ಯಕ್ತಿಯಾಗಿದ್ದಾರೆ.
-
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ












Click it and Unblock the Notifications