ಈ ವಿಚಾರಕ್ಕೆ ಮುನ್ನಲೆಗೆ ಬಂದ ಮಂಗಳೂರು-ಕಾಸರಗೋಡು ರಾಷ್ಟ್ರೀಯ ಹೆದ್ದಾರಿ
Mangaluru-Kasaragod National Highway: ರಾಜ್ಯದಲ್ಲಿ ರಾಷ್ಟ್ರೀಯ ಹೆದ್ದಾರಿ ಜಾಲ ವಿಸ್ತರಣೆಯಾಗುತ್ತಲಿವೆ. ಈ ನಡುವೆಯೇ ಕೆಲ ಹೆದ್ದಾರಿಗಳು ಟೋಲ್ ಶುಲ್ಕ ವಿಚಾರವಾಗಿ ಸುದ್ದಿಯಲ್ಲಿರುತ್ತವೆ. ಹಾಗೆಯೇ ಇದೀಗ ಮಂಗಳೂರು-ಕಾಸರಗೋಡು NH ಮುನ್ನಲೆಗೆ ಬಂದಿದೆ. ಹಾಗಾದ್ರೆ, ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ರಾಜ್ಯದಲ್ಲಿ ಈಗಾಗಲೇ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ವಾಹನ ಸಂಚಾರಕ್ಕೆ ಮುಕ್ತವಾಗಿದ್ದು, ಟೋಲ್ ಕೂಡ ಸಂಗ್ರಹ ಮಾಡಲಾಗುತ್ತಿದೆ. ಇನ್ನೂ ಇದು ಉದ್ಘಾಟನೆಯಾದ ಆರಂಭದಿಂದಲೂ ಟೋಲ್ ವಿಚಾರಕ್ಕೆ ವಾಹನ ಸವಾರರು ಹಾಗೂ ಅಲ್ಲಿನ ಸಿಬ್ಬಂದಿ ನಡುವೆ ಮಾರಾಮಾರಿ ಘಟನೆಗಳು ನಡೆದಿವೆ. ಅಲ್ಲದೆ, ಇದೀಗ ಸುರಕ್ಷತೆಯಿಲ್ಲ ಎಂಬ ವಿಚಾರಕ್ಕೂ ಆಗಾಗ ಈ ಎಕ್ಸ್ಪ್ರೆಸ್ ವೇ ಸುದ್ದಿಯಾಗುತ್ತಲಿದೆ.

ಅಲ್ಲದೆ, ಬೆಂಗಳೂರು-ಚೆನ್ನೈ ಎಕ್ಸ್ಪ್ರೆಸ್ ಕರ್ನಾಟಕ ಭಾಗದಲ್ಲಿ ಕಾಮಗಾರಿ ಮುಕ್ತಾಯವಾಗಿದ್ದು, ವಾಹನ ಸಂಚಾರಕ್ಕೂ ಅವಕಾಶ ಕಲ್ಪಿಸಿಕೊಡಲಾಗಿದೆ. ಈಗಾಗಲೇ ಟೋಲ್ ಶುಲ್ಕವನ್ನು ಕೂಡ ರಿವೀಲ್ ಮಾಡಲಾಗಿದೆ. ಈ ಎಕ್ಸ್ಪ್ರೆಸ್ ವೇ ಇನ್ನೂ ಉದ್ಘಾಟನೆ ಆಗಿಲ್ಲ. ಇದಕ್ಕೂ ಕಾರಣ ಇದೆ. ಕರ್ನಾಟಕ ಭಾಗದಲ್ಲಿ ಮಾತ್ರ ಮುಕ್ತಾಯವಾಗಿದೆ. ಆದರೆ, ತಮಿಳುನಾಡು ಹಾಗೂ ಆಂಧ್ರಪ್ರದೇಶದಲ್ಲಿ ಕಾಮಗಾರಿ ಬಾಕಿ ಉಳಿದ ಕಾರಣ ಉದ್ಘಾಟನೆ ದಿನಾಂಕ ಮುಂದೂಡಿಕೆ ಆಗುತ್ತಲಿದ್ದು, ಮುಂದಿನ ವರ್ಷದ ಮಧ್ಯದಲ್ಲಿ ಲೋಕಾರ್ಪಣೆ ಆಗಲಿದೆ ಎಂದು ಎನ್ಎಚ್ಎಐ ತಿಳಿಸಿದೆ.
ಅದರಲ್ಲೂ ಮೈಸೂರು-ಬೆಂಗಳೂರು ಎಕ್ಸ್ಪ್ರೆಸ್ ವೇ ಉದ್ಘಾಟನೆಯಾದ ಆರಂಭದಿಂದಲೂ ಟೋಲ್ ವಿಚಾರಕ್ಕೆ ಆಗಾಗ ಮುನ್ನಲೆಗೆ ಬರುತ್ತಿತ್ತು. ಇದೇ ವಿಚಾರವಾಗಿ ವಾಹನ ಸವಾರರು ಹಾಗೂ ಟೋಲ್ ಸಿಬ್ಬಂದಿ ನಡುವೆ ಮಾರಾಮಾರಿ ನಡೆದ ಉದಾಹರಣೆಗಳಿವೆ. ಇದೀಗ ಮಂಗಳೂರು-ಕಾಸರಗೋಡು ರಾಷ್ಟ್ರೀಯ ಹೆದ್ದಾರಿ ಸಹ ಮುನ್ನಲೆಗೆ ಬಂದಿದೆ. ಕಾರಣ ಏನು ಪ್ರಶ್ನಗೆ ಉತ್ತರ ಇಲ್ಲಿದೆ ನೋಡಿ.
ಮಂಗಳೂರು - ಕಾಸರಗೋಡು ರಾಷ್ಟ್ರೀಯ ಹೆದ್ದಾರಿ ಮಾರ್ಗದ ಕುಂಬಳೆಯ ಆರಿಕ್ಕಾಡಿ ಟೋಲ್ ಪ್ಲಾಝಾದಲ್ಲಿ ಶುಲ್ಕ ಸಂಗ್ರಹ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ಮುಂದೂಡಿಕೆ ಮಾಡಲಾಗಿದೆ. ಹೈಕೋರ್ಟ್ ತೀರ್ಪು ಹೊರಬಿದ್ದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಕಾಸರಗೋಡು ಜಿಲ್ಲಾಧಿಕಾರಿ ಕೆ.ಇಂಪಾಶೇಖರ್ ಮಾಹಿತಿ ನೀಡಿದ್ದಾರೆ.
ಪ್ರತಿಭಟನೆಗಳ ಹಿನ್ನೆಲೆ ಬುಧವಾರದಿಂದ ಆರಂಭ ಆಗಬೇಕಿದ್ದ ಟೋಲ್ ಶುಲ್ಕ ವಸೂಲಿಯನ್ನ ತಾತ್ಕಾಲಿಕವಾಗಿ ನಿಲ್ಲಿಸಲು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭರವಸೆ ನೀಡಿದ್ದಾರೆ ಎಂದು ಶಾಸಕ ಎ.ಕೆ.ಎಂ.ಅಶ್ರಫ್ ತಿಳಿಸಿದ್ದಾರೆ. ಟೋಲ್ ಗೇಟ್ ವಿರುದ್ಧ ಹೋರಾಟ ಸಮಿತಿ ಹೈಕೋರ್ಟ್ನಲ್ಲಿ ಸಲ್ಲಿಸಿದ ಅರ್ಜಿ ವಿಚಾರಣೆ ನವೆಂಬರ್ 14ರಂದು ನಡೆಯಲಿದೆ. ಆದ್ದರಿಂದ ಅಂತಿಮ ತೀರ್ಪು ಬರುವವರೆಗೆ ಶುಲ್ಕ ವಸೂಲು ಮಾಡಬಾರದೆಂದು ಸೂಚನೆ ನೀಡಲಾಗಿದೆ ಎಂದು ಶಾಸಕರು ಹೇಳಿದರು.
ಶುಲ್ಕ ವಸೂಲು ಕ್ರಮದ ವಿರುದ್ಧ ಸ್ಥಳೀಯರು ಕಳೆದ ಕೆಲ ದಿನಗಳಿಂದ ಪ್ರತಿಭಟನೆ ಮಾಡುತ್ತಿದ್ದರು. ಮಂಗಳವಾರ ಸಂಜೆ ಹೋರಾಟ ಸಮಿತಿ ತುರ್ತು ಸಭೆ ಸೇರಿ ಮುಂದಿನ ಹೋರಾಟದ ತಂತ್ರ ರೂಪಿಸಿತ್ತು. ಈ ಬೆಳವಣಿಗೆಯ ಹಿನ್ನೆಲೆ ಹೈಕೋರ್ಟ್ ತೀರ್ಪು ಬರುವವರೆಗೆ ಟೋಲ್ ಸಂಗ್ರಹವನ್ನು ಮುಂದೂಡಿಕೆ ಮಾಡಲು ಜಿಲ್ಲಾಡಳಿತ ತೀರ್ಮಾನ ಮಾಡಿದೆ. ಬುಧವಾರ ಬೆಳಗ್ಗೆ 8 ಗಂಟೆ ಬಳಿಕ ಟೋಲ್ ದರ ಸಂಗ್ರಹ ಮಾಡಲಾಗುವುದು ಎಂದು ಈ ಹಿಂದೆ ಮಾಹಿತಿ ನೀಡಲಾಗಿತ್ತು. ಆದರೆ, ಇದೀಗ ಕೋರ್ಟ್ ತೀರ್ಪಿಗಾಗಿ ಕಾಯಲಾಗುತ್ತಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
-
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ










Click it and Unblock the Notifications