ನೆಲಮಂಗಲ- ಹಾಸನ ರಾಷ್ಟ್ರೀಯ ಹೆದ್ದಾರಿ-75ರ ಟೋಲ್ ದರ ಹೆಚ್ಚಳ
ಬೆಂಗಳೂರು, ಸೆಪ್ಟೆಂಬರ್ 1: ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲ ಸೇರಿದಂತೆ ಅಗತ್ಯ ವಸ್ತುಗಳ ಬೆಲೆಯೇರಿಕೆಯಿಂದ ಜನರು ತತ್ತರಿಸಿದ್ದಾರೆ. ಇದೇ ವೇಳೆ ಜನರ ಮೇಲೆ ನೆಲಮಂಗಲ ದೇವಿಹಳ್ಳಿ ಎಕ್ಸ್ಪ್ರೆಸ್ ವೇ ಪ್ರೈವೇಟ್ ಲಿಮಿಟೆಡ್ ಮತ್ತೊಂದು ಬರೆ ಹಾಕಿದೆ.
ಮಂಗಳವಾರ ಮಧ್ಯರಾತ್ರಿಯಿಂದ ನೆಲಮಂಗಲ- ಹಾಸನ ರಾಷ್ಟ್ರೀಯ ಹೆದ್ದಾರಿ- 75ರ ಟೋಲ್ ದರವನ್ನು ಹೆಚ್ಚಳ ಮಾಡಿರುವುದು ವಾಹನ ಸವಾರರ ಸಿಟ್ಟಿಗೆ ಕಾರಣವಾಗಿದೆ.
ಬೆಂಗಳೂರು ನಗರ ಹೊರವಲಯದ ನೆಲಮಂಗಲ ತಾಲೂಕಿನ ಯಂಟಗಾನಹಳ್ಳಿ ಬಳಿ ಇರುವ ನೆಲಮಂಗಲ ದೇವಿಹಳ್ಳಿ ಎಕ್ಸ್ಪ್ರೆಸ್ ವೇ ಪ್ರೈವೇಟ್ ಲಿಮಿಟೆಡ್ ಟೋಲ್ನಲ್ಲಿ, ಲಘು ವಾಹನಗಳನ್ನು ಹೊರತುಪಡಿಸಿ ಭಾರೀ ಗಾತ್ರದ ವಾಹನಗಳ ಟೋಲ್ ದರ ಮಂಗಳವಾರ ಮಧ್ಯ ರಾತ್ರಿಯಿಂದಲೇ ಹೆಚ್ಚಳವಾಗಿದೆ.

ಲಾರಿ, ಬಸ್ಗಳಿಗೆ ಸೇರಿದಂತೆ ಹಳೆಯ ದರ ಏಕಮುಖ ಸಂಚಾರ 160 ರೂ. ಮತ್ತು ದ್ವಿಮುಖ ಸಂಚಾರಕ್ಕೆ 240 ರೂಪಾಯಿ ಇತ್ತು. ಈಗಿನ ಹೊಸದರದಲ್ಲಿ ಏಕಮುಖ ಸಂಚಾರಕ್ಕೆ 160 ರೂ., ದ್ವಿಮುಖ ಸಂಚಾರಕ್ಕೆ 245 ರೂ ಇದೆ. ದ್ವಿಮುಖ ಸಂಚಾರದಲ್ಲಿ 5 ರೂಪಾಯಿ ಹೆಚ್ಚಳ ಮಾಡಲಾಗಿದೆ.
ಭಾರೀ ವಾಹನಗಳು:
ಹಳೆಯ ದರ ಏಕಮುಖ ಸಂಚಾರಕ್ಕೆ 255 ರೂ., ದ್ವಿಮುಖ ಸಂಚಾರಕ್ಕೆ ಹಳೆ ದರ 385 ರೂ. ಇತ್ತು. ಈಗ ಹೊಸ ದರದಲ್ಲಿ ಏಕಮುಖ ಸಂಚಾರಕ್ಕೆ 260 ರೂ. ಆಗಿದ್ದು 5 ರೂಪಾಯಿ ಹೆಚ್ಚಳವಾದರೆ, ದ್ವಿಮುಖ ಸಂಚಾರದಲ್ಲಿ 390 ರೂಪಾಯಿ ಇದ್ದು, ಇಲ್ಲಿಯೂ ಸಹ 5 ರೂಪಾಯಿ ಹೆಚ್ಚಳವಾಗಿದೆ ಎಂದು ದೇವಿಹಳ್ಳಿ ಟೋಲ್ನ ಸಿಬ್ಬಂದಿ ಮಾಹಿತಿ ನೀಡಿದ್ದಾರೆ.
ಇನ್ನು ಸ್ಥಳೀಯ ಜನರ ಓಡಾಟಕ್ಕೆ ಕಾರು/ ಜೀಪು/ ವ್ಯಾನ್ಗಳಿಗೆ ಮಾಸಿಕ ಪಾಸ್ ಶುಲ್ಕವು ಟೋಲ್ ಪ್ಲಾಜಾದಿಂದ 10 ಕಿ.ಮೀ ಸುತ್ತಳತೆಯಲ್ಲಿರುವವರಿಗೆ 150 ರೂ,. 10ರಿಂದ 20 ಕಿ.ಮೀ ಸುತ್ತಳತೆಯಲ್ಲಿರುವವರಿಗೆ ೩೦೦ ರೂ. ಇದೆ.
Recommended Video
ಸ್ಥಳೀಯ ಎಲ್ಸಿವಿ/ ಟ್ರಕ್ಗಳಿಗಾಗಿ ರಿಯಾಯಿತಿ ಶುಲ್ಕವು ಪ್ರತಿ ಪ್ರವೇಶಕ್ಕೆ ಕ್ರಮಬದ್ಧವಾಗಿ 15 ರೂ. ಹಾಗೂ 25 ರೂ. ಇರುತ್ತದೆ. ಶಾಲಾ ವಿದ್ಯಾರ್ಥಿಗಳ ಶಾಲಾ ಬಸ್ಗಳಿಗಾಗಿ ಮಾಸಿಕ ಶುಲ್ಕ 1000 ರೂ. ಆಗಿರುತ್ತದೆ ಎಂದು ನೆಲಮಂಗಲ ದೇವಿಹಳ್ಳಿ ಎಕ್ಸ್ಪ್ರೆಸ್ ವೇ ಪ್ರೈವೇಟ್ ಲಿಮಿಟೆಡ್ ಪ್ರಕಟಣೆಯಲ್ಲಿ ತಿಳಿಸಿದೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ











Click it and Unblock the Notifications