ಬೆಂಗಳೂರು ಏರ್ ಪೋರ್ಟ್ ರಸ್ತೆಯಲ್ಲಿ ಟೋಲ್ ಶುಲ್ಕ ಹೆಚ್ಚಳ
ಬೆಂಗಳೂರು, ಏಪ್ರಿಲ್ 26 : ಲಾಕ್ ಡೌನ್ ಮುಗಿದ ಬಳಿಕ ಬೆಂಗಳೂರಿನ ಏರ್ ಪೋರ್ಟ್ ರಸ್ತೆಯಲ್ಲಿ ಸಂಚಾರ ನಡೆಸುವ ವಾಹನ ಸವಾರರು ಹೆಚ್ಚಿನ ಟೋಲ್ ಶುಲ್ಕ ಪಾವತಿ ಮಾಡಬೇಕು. ಹೌದು, ಎನ್ಎಚ್ಎಐ 5 ರಿಂದ 30 ರೂ. ತನಕ ಟೋಲ್ ಶುಲ್ಕವನ್ನು ಹೆಚ್ಚಳ ಮಾಡಿದೆ.
ಸಾದಹಳ್ಳಿ ಟೋಲ್ ಗೇಟ್ನಲ್ಲಿ ಲಾಕ್ ಡೌನ್ ಜಾರಿಯಲ್ಲಿದ್ದಾಗಲೇ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಟೋಲ್ ಶುಲ್ಕ ಹೆಚ್ಚಳ ಮಾಡಿದೆ. ಕಾರು, ವ್ಯಾನ್, ಜೀಪು ಒಂದು ಕಡೆ ಪ್ರಯಾಣಕ್ಕೆ 90 ರೂ. ಬದಲು 95 ರೂ. ನೀಡಬೇಕಿದೆ.
ಟೋಲ್ ದರ ಹೆಚ್ಚಳದ ಬಳಿಕ ಫಾಸ್ಟ್ಟ್ಯಾಗ್ ಇಲ್ಲದ ವಾಹನಗಳು 190 ರೂ. ಪಾವತಿ ಮಾಡಬೇಕು. ಮಾಸಿಕ ಪಾಸಿನ ದರವನ್ನು 3125 ರೂ.ಗೆ ಏರಿಕೆ ಮಾಡಲಾಗಿದೆ. ಮಾರ್ಚ್ 31ರಿಂದಲೇ ಜಾರಿಗೆ ಬರುವಂತೆ ಹೆಚ್ಚಳ ಮಾಡಿ ಆದೇಶ ಹೊರಡಿಸಲಾಗಿದೆ.

ಬಸ್ಗಳು ಮೊದಲು ಒಂದು ಕಡೆಯ ಪ್ರಯಾಣಕ್ಕೆ 280 ರೂ. ಪಾವತಿ ಮಾಡಬೇಕಿತ್ತು. ಅದನ್ನು 290ಕ್ಕೆ ಹೆಚ್ಚಳ ಮಾಡಲಾಗಿದೆ. ಎರಡೂ ಕಡೆಯ ಪ್ರಯಾಣದ ಟೋಲ್ ಒಟ್ಟಿಗೆ ಕಟ್ಟಿದರೆ 420 ರೂ. ಬದಲು 435 ರೂ. ಪಾವತಿಸಬೇಕು.
ಏಳು ಅಥವ ಹೆಚ್ಚಿನ ಆಕ್ಸೆಲ್ ಹೊಂದಿರುವ ವಾಹನಗಳು ಒಂದು ಕಡೆಯ ಪ್ರಯಾಣಕ್ಕೆ 555 ರೂ. ಬದಲು 575 ರೂ. ಪಾವತಿ ಮಾಡಬೇಕು. ವಾಪಸ್ ಬರುವ ಟೋಲ್ ದರಗಳನ್ನು ರೂ. 30ರಷ್ಟು ಹೆಚ್ಚಳ ಮಾಡಲಾಗಿದೆ.
ಲಾರಿ ಮಾಲೀಕರ ಸಂಘ ಟೋಲ್ ದರ ಹೆಚ್ಚಳಕ್ಕೆ ವಿರೋಧ ವ್ಯಕ್ತಪಡಿಸಿದೆ. "ಲಾಕ್ ಡೌನ್ ಸಂದರ್ಭದಲ್ಲಿ ಆದಾಯದಲ್ಲಿ ಕಡಿತವಾಗಿರುವವಾಗ ಟೋಲ್ ದರ ಹೆಚ್ಚಿಸಿದ್ದು ಸರಿಯಲ್ಲ. ಲಾಕ್ ಡೌನ್ ಮುಗಿಯುತ್ತಿದ್ದಂತೆ ಇದೆ ವಿರುದ್ಧ ಪ್ರತಿಭಟನೆ ನಡೆಸಲಾಗುತ್ತದೆ" ಎಂದು ಸಂಘದ ಅಧ್ಯಕ್ಷ ಜಿ. ಆರ್. ಷಣ್ಮುಗಪ್ಪ ಹೇಳಿದ್ದಾರೆ.
-
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Railway Food: ರೈಲು ಪ್ರಯಾಣಿಕರ ಬಳಿ ಬರುತ್ತೆ ಆಹಾರ: ರೈಲ್ವೆ ಇಲಾಖೆಗೆ ಕಂಪನಿಗಳ ಸಾಥ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ?












Click it and Unblock the Notifications