ಬೆಂಗಳೂರಿನಲ್ಲಿ ಪ್ರತಿ ಕೆ.ಜಿ.ಟೊಮೆಟೋ ದರ 75 ರೂಪಾಯಿ, ಇನ್ನೊಂದು ವಾರದಲ್ಲಿ 100ಕ್ಕೇ ಏರಿಕೆ.?
Vegetable Prices Hike: ಈಗಾಗಲೇ ದಿನಬಳಕೆ ವಸ್ತುಗಳ ಏರಿಕೆಯಿಂದ ಜನರು ಬೇಸತ್ತು ಹೋಗಿದ್ದಾರೆ. ಇದರ ನಡುವೆಯೂ ಇದೀಗ ತರಕಾರಿಗಳ ಬೆಲೆ ಗಗನಮುಖಿಯಾಗಿದ್ದು, ಇದರಿಂದ ಸಾಮಾನ್ಯ ಜನರ ಹೊಟ್ಟೆ ಮೇಲೆ ಮತ್ತೆ ಬರೆ ಎಳೆದಂತಾಗಿದೆ. ಅದರಲ್ಲೂ ತರಕಾರಿ ಬೆಲೆ ಏರಿಕೆಯಿಂದ ರಾಜ್ಯ ರಾಜಧಾನಿ ಜನರು ಕಂಗೆಟ್ಟು ಹೋಗಿದ್ದಾರೆ.
ತರಕಾರಿ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲಿದೆ. ಅದರಲ್ಲೂ ಬೆಂಗಳೂರಿನಲ್ಲಿ ಪ್ರತಿ ಕೆ.ಜಿ. ಟೊಮೆಟೋಗೆ 75 ರೂಪಾಯಿ ಆಗಿದ್ದು, ಇದು ಶೀಘ್ರದಲ್ಲೇ 100ಕ್ಕೆ ತಲುಪುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಬೆಂಗಳೂರಿನ ಜನರು ಅಸಮಾಧಾನ ಹೊರಹಾಕಿದ್ದಾರೆ. ಮತ್ತೊಂದೆಡೆ ಟೊಮೆಟೋ ಬೆಲೆ ಏರಿಕೆಯಿಂದ ರೈತರಿಗೆ ಏನು ಲಾಭವಾಗುತ್ತಿಲ್ಲ. ಬದಲಿಗೆ ದಲ್ಲಾಳಿಗಳಿಗೆ ಹೆಚ್ಚು ಲಾಭ ಎನ್ನುವ ಮಾತುಗಳು ಕೂಡ ಕೇಳಿಬರುತ್ತಿವೆ.

ಇನನು ಕೆಲವು ದಿನಗಳಿಂದ ರಾಜ್ಯ ರಾಜಧಾನು ಬೆಂಗಳೂರಿನಲ್ಲಿ ನಿರಂತರವಾಗಿ ತರಕಾರಿ ಬೆಲೆ ಹೆಚ್ಚಾಗುತ್ತಲೇ ಇದೆ. ಜೊತೆಗೆ ದಿನನಿತ್ಯದ ವಸ್ತುಗಳ ಬೆಲೆಯೂ ಗಗನಕ್ಕೇರುತ್ತಿದೆ. ಈ ಹಿಂದೆ 50 ರೂಪಾಯಿ ಅಸುಪಾಸಿನಲ್ಲಿ ಲಭ್ಯವಾಗುತ್ತಿದ್ದ ತರಕಾರಿಗಳು ಇದೀಗ 100 ರೂಪಾಯಿ ಗಡಿ ದಾಟಿದ್ದು, ಜನರು ಜೋಬು ಸುಡುವಂತೆ ಮಾಡಿದೆ.
ಇನ್ನು ಇದೀಗ ಬೆಂಗಳೂರಿನಲ್ಲಿ ಬಿಟ್ಟುಬಿಡದೇ ಮಳೆ ಸುರಿಯುತ್ತಿರುವ ಹಿನ್ನೆಲೆ ಕೈಗೆ ಬಂದಂತಹ ಬೆಳೆಯೂ ನೆಲಕಚ್ಚುತ್ತಿದೆ. ಜೊತೆಗೆ ಮಾರುಕಟ್ಟೆ ಬೇಡಿಕೆಗೆ ಅನುಗುಣವಾಗಿ ತರಕಾರಿಗಳು ಸಿಗದ ಪರಿಣಾಮ ತರಕಾರಿ ಬೆಲೆ ಗಗನಮುಖಿಯಾಗಿದೆ.
ಇನ್ನು ಮತ್ತೊಂದೆಡೆ ನೋಡುವುದಾರೆ, ಕಳೆದ ತಿಂಗಳು ಸೂರ್ಯನ ಶಾಖ ಹೆಚ್ಚಾದ ಹಿನ್ನೆಲೆ ತರಕಾರಿಗಳ ಬೆಲೆಯೂ ಹೆಚ್ಚಾಗಿತ್ತು. ಇದೀಗ ಮಳೆ ಹೆಚ್ಚಾಗಿರುವ ಪರಿಣಾಮ ತರಕಾರಿಗಳ ಬೆಲೆ ಹೆಚ್ಚಳವಾಗಿದೆ. ವ್ಯಾಪಾರಸ್ಥರಿಗೆ ಬೇಡಿಕೆಗೆ ತಕ್ಕಷ್ಟು ತರಕಾರಿ ಪೂರೈಕೆ ಆಗುತ್ತಿಲ್ಲ.
ಸದ್ಯ ಕೇವಲ ರಾಜ್ಯದ ಜಿಲ್ಲೆಗಳಿಂದ ಮಾತ್ರ ತರಕಾರಿ ಪೂರೈಕೆ ಆಗುತ್ತಿದೆ. ಜೊತೆಗೆ ಮಳೆಯಿಂದ ಟೊಮೆಟೋ ಹಾಗೂ ಈರುಳ್ಳಿ ಸರಿಯಾಗಿ ಫಸಲು ಬರುತ್ತಿಲ್ಲ. ಈ ಹಿನ್ನೆಲೆ ತರಕಾರಿಗಳ ಬೆಲೆ ಗಗನಕ್ಕೇರುತ್ತಿದೆ. ಹೀಗೆ ಮಳೆ ಮುಂದುವರೆದರೆ, ಮುಂದಿನ ದಿನಗಳಲ್ಲಿ ಮತ್ತಷ್ಟು ಬೆಲೆ ಏರಿಕೆಯಾಗುವುದರಲ್ಲಿ ಯಾವುದೇ ಅನುಮಾನವಿಲ್ಲ ಅಂತಿದ್ದಾರೆ ವ್ಯಾಪರಸ್ಥರು.
ಬದನೆಕಾಯಿ, ಜವಳಿಕಾಯಿ, ಸೌತೆಕಾಯಿ, ಹಸಿ ಮೆಣಸಿನಕಾಯಿ ಕೆ.ಜಿ.ಗೆ 80-90 ರೂಪಾಯಿಗೆ ಏರಿಕೆಯಾಗಿದೆ. ಟೊಮೆಟೋ ನಿನ್ನೆವರೆಗೂ 50 ಇದ್ದು, ಇದೀಗ ದೀಢರ್ 15 ರೂಪಾಯಿ ಏರಿಕೆಯಾಗುವ ಮೂಲಕ ಒಟ್ಟು 75 ರೂಪಾಯಿ ಮುಟ್ಟಿದೆ. ಕೆಲವೇ ದಿನಗಳಲ್ಲಿ 100 ರೂಪಾಯಿ ಮುಟ್ಟಿದರೂ ಆಶ್ಚರ್ಯವಿಲ್ಲ ಅಂತಿದ್ದಾರೆ ವ್ಯಾಪಾರಿಗಳು.
ಅಷ್ಟೇ ಅಲ್ಲದೆ, ಸೇಬು ಸೇರಿದಂತೆ ಇತರೆ ಹಣ್ಣುಗಳ ಬೆಲೆ ಕೂಡ ಕೆ.ಜಿ.ಗೆ 200-300 ರೂಪಾಯಿಗೆ ಏರಿಕೆಯಾಗಿದ್ದು, ಇದರಿಂದ ಜನಸಾಮಾನ್ಯರ ಜೇಬಿಗೆ ಬರೆ ಎಳೆದಂತಾಗಿದೆ.
-
ಎಲ್ಪಿಜಿ ಸಿಲಿಂಡರ್ ಬೆಲೆ ಏರಿಕೆ ಬೆನ್ನಲ್ಲೇ ಬೆಂಗಳೂರಿನ ಹೋಟೆಲ್ಗಳಲ್ಲಿ ಆಹಾರ ದರ ಏರಿಸಲು ಚಿಂತನೆ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
ಬೆಂಗಳೂರು-ಮಂಗಳೂರು ಮಧ್ಯ ನಿತ್ಯ ತಡರಾತ್ರಿ ವಿಮಾನ ಸೇವೆ, ಯಾವಾಗ? ಸಮಯ-ವೇಳಾಪಟ್ಟಿ ಇಲ್ಲಿದೆ -
Adani Total Gas: ಪಶ್ಚಿಮ ಏಷ್ಯಾ ಉದ್ವಿಗ್ನತೆ ನಡುವೆಯೂ ಸಿಎನ್ಜಿ, ಪಿಎನ್ಜಿ ದರ ಸ್ಥಿರ: ಅದಾನಿ ಗ್ಯಾಸ್ -
LPG Price Hike: ಗೃಹಬಳಕೆ ಎಲ್ಪಿಜಿ ಸಿಲಿಂಡರ್ ಬೆಲೆ 60 ರೂಪಾಯಿ ಏರಿಕೆ, ವಾಣಿಜ್ಯ ಸಿಲಿಂಡರ್ ದರ 115 ರೂಪಾಯಿ ಹೆಚ್ಚಳ -
ಎಲ್ಪಿಜಿ ಸಿಲಿಂಡರ್ ದರ 60 ರೂ ಏರಿಕೆ: ಮೋದಿ ಸರ್ಕಾರದ ವಿರುದ್ಧ ತೀವ್ರ ಟೀಕೆ -
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ












Click it and Unblock the Notifications