Tomato Price Hike: ಶತಕ ದಾಟಿದ ಟೊಮೆಟೊ ದರ: ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದ ಕೆಂಪು ಚೆಲುವೆ...
ಬೆಂಗಳೂರು ಜೂನ್ 20: ಪೆಟ್ರೋಲ್-ಡಿಸೇಲ್ ಬೆಲೆ ಏರಿಕೆ ಬೆನ್ನಲ್ಲೆ ಸಾಗಣೆ ವೆಚ್ಚ, ಬಹುತೇಕ ತರಕಾರಿಗಳ ಬೆಲೆ ಗಗನಕ್ಕೇರಿಕೆಯಾಗಿದೆ. ಅದರಲ್ಲೂ ಟೊಮೆಟೊ ದರ ಶತಕ ದಾಟಿದ್ದು ಗ್ರಾಹಕರು ಕಂಗೆಟ್ಟಿದ್ದಾರೆ.
ಹೌದು... ಕಳೆದ ಕೆಲ ದಿನಗಳಿಂದ ಏರಿಕೆಯಲ್ಲಿದ್ದ ಟೊಮೆಟೋ ಇದೀಗ ಶತಕದ ಗಡಿ ದಾಟಿದೆ. ದುಬಾರಿಯಾಗೇ ಇದ್ದ ದಿನಬಳಕೆಯ ತರಕಾರಿಗಳು, ಸೊಪ್ಪಿನ ಬೆಲೆ ಈಗ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಿಂದಾಗಿ ಮತ್ತಷ್ಟು ತುಟ್ಟಿಯಾಗಿದ್ದು ಗ್ರಾಹಕರು ಖರೀದಿಗೆ ಹಿಂದೇಟು ಹಾಕುತ್ತಿದ್ದಾರೆ.

ಇತ್ತ ರೈತರ ಅದೃಷ್ಟವನ್ನೇ ಟೊಮೆಟೊ ಬದಲಾಯಿಸಿದೆ. ಒಂದು ಎಕರೆ ಟೊಮೆಟೊ ಬೆಳೆದಿರುವವರು ಲಕ್ಷಾಧಿಪತಿಗಳಾಗುತ್ತಿದ್ದಾರೆ. ದರ ಕುಸಿದಾಗ ಕಂಗಾಲಾಗಿ ರಸ್ತೆಗೆ ಸುರಿದು ಪ್ರತಿಭಟನೆ ಮಾಡುತ್ತಿದ್ದರು. ಈಗ, ಟೊಮೆಟೊ ಬೆಳೆದ ರೈತರಿಗೆ ಅದೃಷ್ಟಲಕ್ಷ್ಮಿ ಒಲಿದು ಬಂದಂತಾಗಿದೆ. ಆದರೆ, ಗ್ರಾಹಕರಿಗೆ ಬೆಲೆ ಏರಿಕೆಯ ಬಿಸಿ ತಟ್ಟಿದೆ. ಚಿಲ್ಲರೆ ದರದಲ್ಲಿ ಒಂದು ಕೆ.ಜಿ. ಹಣ್ಣಿಗೆ 100 ರಿಂದ 130 ರೂ. ಇದೆ.
ತರಕಾರಿ-ದರ(ಕೆಜಿಗೆ)
ಬೆಳ್ಳುಳ್ಳಿ 340
ಟೊಮೆಟೋ 103
ಬೀನ್ಸ್ 224
ಬಿಳಿ ಬದನೆ 100
ಬಜ್ಜಿ ಮೆಣಸಿನಕಾಯಿ 98
ಕ್ಯಾಪ್ಸಿಕಂ 116
ನುಗ್ಗೇಕಾಯಿ 185
ಹೀರೇಕಾಯಿ 100
ಶುಂಠಿ 198
ಮೂಲಂಗಿ 70
ಕೊತ್ತಂಬರಿ 20-30 ಒಂದು ಕಟ್
ತಿಂಗಳ ಹಿಂದೆ ಬೆಳೆಗೆ ಹಾಯಿಸಲು ನೀರಿನ ಅಭಾವ, ವಿಪರೀತ ಬಿಸಿಲಿನ ವಾತಾವರಣದಿಂದ ಕೊಳೆಯುತ್ತಿದ್ದ ಕಾರಣದಿಂದ ಈವರೆಗೆ ತರಕಾರಿಗಳ ದರ ಏರಿಕೆಯಾಗಿತ್ತು. ಆದರೆ ಈಗ ಸರಕು ಸಾಗಣೆ ವೆಚ್ಚ ಹೆಚ್ಚಳ ಆಗುತ್ತಿರುವ ಕಾರಣ ತರಕಾರಿಗಳಿ ಇನ್ನಷ್ಟು ದುಬಾರಿಯಾಗುತ್ತಿದೆ.

ಹೋಟೆಲ್ ಮಾಲೀಕರು ಹಲವು ಅಡುಗೆ, ತಿಂಡಿಗಳಿಗೆ ಟೊಮೆಟೊ ಪೇಸ್ಟ್ ಬಳಸಲು ಮುಂದಾಗಿದ್ದಾರೆ. ಕೆಲವರು ಟೊಮೆಟೊ ಬಳಸುವ ತಿಂಡಿಗಳನ್ನೇ ಕಡಿಮೆ ಮಾಡಿದ್ದಾರೆ. ಸುಮಾರು 20 ರೂ.ಗೆ ಖರೀದಿಸುವ ಟೊಮೆಟೊ ಪೇಸ್ಟ್ ಒಂದು ಕೆ.ಜಿ ಟೊಮೆಟೊ ಬೆಲೆಯಲ್ಲಿ ಐದಾರು ಕೊಂಡುಕೊಳ್ಳಬಹುದು.
ಬೆಂಗಳೂರು ಹಾಪ್ಕಾಮ್ಸ್ನಲ್ಲಿ ಟೊಮೆಟೋ ಬೆಲೆ 100 ರೂಪಾಯಿ ದಾಟಿದೆ. ಮಾತ್ರವಲ್ಲದೇ ಮೈಸೂರು, ಶಿವಮೊಗ್ಗ, ಕಲಬುರ್ಗಿ ಸೇರಿದಂತೆ ರಾಜ್ಯದೆಲ್ಲೆಡೆ ಟೊಮೆಟೋ ಬೆಲೆಯಲ್ಲಿ ಏರಿಕೆ ಕಂಡುಬಂದಿದೆ. ಮೊದಲೇ ತರಕಾರಿಗಳ ಅಭಾವ ಮಾರುಕಟ್ಟೆಯಲ್ಲಿ ಕಾಡುತ್ತಿದೆ.
ಮದುವೆ, ಗೃಹ ಪ್ರವೇಶ, ಧಾರ್ಮಿಕ ಕಾರ್ಯಕ್ರಮಗಳಿಗೆ, ಹೋಟೆಲ್ಗಳಿಂದ ಬೇಡಿಕೆ ಇರುವಷ್ಟು ಪೂರೈಕೆ ಆಗುತ್ತಿಲ್ಲ. ರಾಜ್ಯದಲ್ಲಿ ತರಕಾರಿ ಕೊರತೆ ಉಂಟಾಗಿದ್ದು ಬಟಾಣಿ, ಟೊಮೆಟೋವನ್ನು ಹೊರ ರಾಜ್ಯಗಳಿಂದ ತರಿಸಿಕೊಳ್ಳುವ ಅನಿವಾರ್ಯತೆ ಉಂಟಾಗಿದೆ.
ಸದ್ಯ ಬೆಂಗಳೂರು ಮಾರುಕಟ್ಟೆ ಟೊಮೆಟೋಗೆ ಮಹಾರಾಷ್ಟ್ರವನ್ನೇ ನೆಚ್ಚಿಕೊಂಡಿದೆ. ಮಂಡ್ಯ, ಮೈಸೂರು, ಮದ್ದೂರು, ಕನಕಪುರ ಬೆಲ್ಟ್ನಿಂದ ಬೆಂಗಳೂರಿಗೆ ಬರುತ್ತಿದ್ದ ಟೊಮೆಟೋ ಪ್ರಮಾಣ ಬಹುತೇಕ ಕುಸಿದಿದೆ. ಚಿಕ್ಕಮಗಳೂರು, ಕಡೂರು ಕಡೆಯಿಂದ ನಿರೀಕ್ಷಿತ ಪ್ರಮಾಣದಲ್ಲಿ ಟೊಮೆಟೋ ಬರುತ್ತಿಲ್ಲ. ಇನ್ನು ಕೋಲಾರದಲ್ಲೂ ಮಳೆ, ರೋಗಬಾಧೆ ಪೂರೈಕೆ ಮುಕ್ಕಾಲು ಭಾಗದಷ್ಟು ಕಡಿಮೆಯಾಗಿದೆ.
ಈರುಳ್ಳಿ ದರ ಕೂಡ ಕಳೆದ ಎರಡು ವಾರದಿಂದ ಹೊಯ್ದಾಟದಲ್ಲಿದೆ. ಬಜ್ಜಿ ಮೆಣಸಿನಕಾಯಿ, ಬಿಳಿ ಬದನೆ, ನುಗ್ಗಿಕಾಯಿ, ನವಿಲುಕೋಸು ದರವೂ ಏರಯಗತಿಯಲ್ಲೇ ಇದೆ. ಬೀನ್ಸ್ ಕಳೆದ ಹದಿನೈದು ದಿನಗಳಿಂದಲೂ 220 ಆಸುಪಾಸಿನಲ್ಲೇ ಇದೆ. ಉಳಿದಂತೆ ಕೊತ್ತಂಬರಿ ಸೊಪ್ಪು ಒಂದು ಕಂತೆಗೆ 100 ಮುಟ್ಟಿದೆ ಮೆಂತ್ಯ, ಪಾಲಕ್, ಬಸಳೆ, ಸಬ್ಬಸಗಿ ಸೊಪ್ಪಗಳೆಲ್ಲ ಸಾಮಾನ್ಯ ದಿನಕ್ಕಿಂತ 40- 70ವರೆಗೂ ಬೆಲೆ ಹೆಚ್ಚಿಸಿಕೊಂಡಿವೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ












Click it and Unblock the Notifications