Tomato price in Bangalore: ನಿರಂತರವಾಗಿ ಸುರಿಯುತ್ತಿರುವ ಮಳೆ- ಬೆಂಗಳೂರಿನಲ್ಲಿ ಟೊಮೆಟೊ ಬೆಲೆ ಮತ್ತಷ್ಟು ದುಬಾರಿ, ಅಂಕಿಅಂಶ
ಬೆಂಗಳೂರು/ಕೋಲಾರ, ಜುಲೈ 27: ಕರ್ನಾಟಕದಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದೆ. ಈ ಹಿನ್ನೆಲೆಯಲ್ಲಿ ಟೊಮೆಟೊ ಬೆಲೆ ಮತ್ತಷ್ಟು ದುಬಾರಿಯಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಬುಧವಾರ ಟೊಮೆಟೊ ಬೆಲೆ ಕಳೆದ ವಾರಕ್ಕಿಂತ ಹೆಚ್ಚಾಗಿರುವುದು ಕಂಡುಬಂದಿದೆ.
ಬೆಂಗಳೂರಿನ ಬೀದಿ ಬದಿ ತರಕಾರಿ ವ್ಯಾಪಾರಿಗಳು ಕಳೆದ ವಾರಾಂತ್ಯದಲ್ಲಿ ಕೆಜಿಗೆ 110 ಅಥವಾ 120 ರೂಪಾಯಿಗೆ ಟೊಮೆಟೊ ಮಾರಾಟ ಮಾಡುತ್ತಿದ್ದರು. ಇದೀಗ ಪ್ರತಿ ಕೆಜಿಗೆ 140 ರೂಪಾಯಿ ಹೇಳುತ್ತಿದ್ದಾರೆ.

ನಿರಂತರ ಮಳೆಯೇ ಬೆಲೆ ಏರಿಕೆಗೆ ಕಾರಣ ಎಂದು ಮಾರಾಟಗಾರರು ಮತ್ತು ಕೃಷಿ ಮಾರುಕಟ್ಟೆ ಅಧಿಕಾರಿಗಳು ತಿಳಿಸಿದ್ದಾರೆ. ಮಳೆಯ ನಡುವೆ ಟೊಮೆಟೊ ಕೊಯ್ಲು ಕಷ್ಟಕರವಾಗಿದೆ ಎಂದು ಅವರು ಹೇಳಿದ್ದಾರೆ.
ಈಗಾಗಲೇ ಹೆಚ್ಚಿನ ಬೇಡಿಕೆ ಇದೆ. ಆದರೆ, ಪೂರೈಕೆ ಕಡಿಮೆಯಾಗಿದೆ. ಹವಾಮಾನ ವೈಪರೀತ್ಯದಿಂದ ಪೂರೈಕೆಯಲ್ಲಿ ಕೊರತೆ ಇದೆ. ಕೋಲಾರ ಎಪಿಎಂಸಿಯಲ್ಲಿ ಬುಧವಾರ ಟೊಮೆಟೊ ಖರೀದಿ ದರದಲ್ಲಿ ಭಾರಿ ಏರಿಕೆಯಾಗಿದೆ ಎಂದು ಸಿಎಂಆರ್ ಟೊಮೇಟೊ ಮಂಡಿಯ ಸಿಆರ್ ಹರೀಶ್ 'ಟೈಮ್ಸ್ ಆಫ್ ಇಂಡಿಯಾ' ಪತ್ರಿಕೆಗೆ ತಿಳಿಸಿದ್ದಾರೆ.
2,000 ರೂ.ಗೆ ಮಾರಾಟವಾಗುತ್ತಿದ್ದ ಟೊಮೆಟೊ ಬಾಕ್ಸ್ಗಳು ( ಹದಿನೈದು ಕೆಜಿ ಹೊಂದಿರುವ ಡಬ್ಬಿಗಳು ) ಕಳೆದ ವಾರ ಸ್ವಲ್ಪ ಅಗ್ಗವಾಗಿದ್ದವು. 1,400 ರಿಂದ 1,900 ರೂ.ಗೆ ಲಭ್ಯವಿದ್ದವು. ಆದರೆ, ಬುಧವಾರ ಉತ್ತಮ ಗುಣಮಟ್ಟದ ಟೊಮೆಟೊ 15 ಕೆಜಿ ಬಾಕ್ಸ್ಗೆ 2,100 ರೂ.ಗೆ ಮಾರಾಟವಾಗಿದೆ ಎಂದು ಹರೀಶ್ ಹೇಳಿದ್ದಾರೆ. ಕೋಲಾರದ ಎಪಿಎಂಸಿ ಆವರಣದಲ್ಲಿರುವ ತಮ್ಮ ಮಂಡಿಯಲ್ಲಿ ಹರೀಶ್ ಟೊಮೆಟೊ ಹರಾಜು ಮಾಡುತ್ತಾರೆ.

ಬೆಂಗಳೂರು ಎಪಿಎಂಸಿಯಲ್ಲಿ ಪ್ರತಿ ಕೆಜಿ ಟೊಮೆಟೊ ದರ 84-92 ರೂ.ಗಳಾಗಿದೆ. ಬೆಂಗಳೂರು ಗ್ರಾಮಾಂತರದಿಂದ ಟೊಮೆಟೊ ಉತ್ಪನ್ನವನ್ನು ಪಡೆಯಲಾಗುತ್ತದೆ. ಕೋಲಾರದಿಂದ ಬರುತ್ತಿರುವ ಟೊಮೆಟೊ ಬೆಲೆ ಜಾಸ್ತಿಯಾಗಿದೆ. ಜಿಲ್ಲೆಯಲ್ಲಿ ಮಳೆಯಾಗುತ್ತಿರುವುದರಿಂದ ಬೆಲೆ ಏರಿಕೆಯಾಗಿದೆ ಎಂದು ಬಿನ್ನಿಪೇಟೆ ಎಪಿಎಂಸಿ ಕಾರ್ಯದರ್ಶಿ ರಾಜಣ್ಣ 'ಟೈಮ್ಸ್ ಆಫ್ ಇಂಡಿಯಾ' ಗೆ ತಿಳಿಸಿದ್ದಾರೆ.
ಬೆಂಗಳೂರು ನಗರಕ್ಕೆ ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕುಣಿಗಲ್, ರಾಮನಗರ, ಆನೇಕಲ್ ಮತ್ತು ಕನಕಪುರದಿಂದ ಟೊಮೆಟೊ ಪೂರೈಕೆಯಾಗುತ್ತಿದೆ. ಈ ಎಲ್ಲ ಕಡೆ ಎಡಬಿಡದೆ ಮಳೆಯಾಗುತ್ತಿದ್ದು, ಕಟಾವು ಕಷ್ಟಕರವಾಗಿದೆ. ಸಾಗಾಣಿಕೆ ವಿಳಂಬವಾಗುತ್ತಿದೆ ಎಂದು ಅವರು ಹೇಳಿದ್ದಾರೆ.
ಕರ್ನಾಟಕ, ಆಂಧ್ರಪ್ರದೇಶ ಮತ್ತು ಮಹಾರಾಷ್ಟ್ರದಂತಹ ರಾಜ್ಯಗಳಲ್ಲಿ ಮಾರುಕಟ್ಟೆ ದರದಲ್ಲಿ ಟೊಮೆಟೊಗಳನ್ನು ಖರೀದಿಸಬೇಕು. ಅವುಗಳನ್ನು ಉತ್ತರ ಭಾರತದ ನಗರಗಳಿಗೆ ಕಳುಹಿಬೇಕೆಂದು ಕೇಂದ್ರವು ಆದೇಶಿಸಿದೆ ಎಂದು ಕೃಷಿ ಮಾರುಕಟ್ಟೆ ಇಲಾಖೆಯ ಮೂಲಗಳು ತಿಳಿಸಿವೆ.

ರಾಷ್ಟ್ರೀಯ ಕೃಷಿ ಸಹಕಾರಿ ಮಾರುಕಟ್ಟೆ ಒಕ್ಕೂಟ ಮತ್ತು ರಾಷ್ಟ್ರೀಯ ಸಹಕಾರಿ ಗ್ರಾಹಕರ ಒಕ್ಕೂಟ ದಕ್ಷಿಣ ರಾಜ್ಯಗಳಿಂದ ಟೊಮೆಟೊಗಳನ್ನು ಖರೀದಿಸುತ್ತಿವೆ. ಇವುಗಳನ್ನು ಉತ್ತರ ಭಾರತದಲ್ಲಿ ಶೇ 30 ರಿಯಾಯಿತಿಯಲ್ಲಿ ಮಾರಾಟ ಮಾಡಲಾಗುತ್ತಿದೆ. ಆದರೆ, ಕರ್ನಾಟಕದಲ್ಲಿ ಬೆಲೆ ಏರಿಳಿತವನ್ನು ನಿಯಂತ್ರಿಸಲು ಇದುವರೆಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಮೂಲಗಳು ತಿಳಿಸಿವೆ.
ಮುಂದಿನ ಕೆಲ ದಿನಗಳಲ್ಲಿ ನಿರಂತರ ಮಳೆ ಸುರಿಯುವ ಮುನ್ಸೂಚನೆ ಇದೆ. ಈ ಹಿನ್ನೆಲೆಯಲ್ಲಿ ಟೊಮೆಟೊ ಬೆಲೆ ಮತ್ತಷ್ಟು ದುಬಾರಿಯಾಗಬಹುದು. ಇದಕ್ಕೆ ಕಡಿವಾಣ ಹಾಕಲು ಸರ್ಕಾರ ಕ್ರಮವನ್ನು ತೆರೆದುಕೊಳ್ಳಬೇಕೆಂದು ಗ್ರಾಹಕರು ಆಗ್ರಹಿಸಿದ್ದಾರೆ.
-
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ?












Click it and Unblock the Notifications