ತರಗತಿಗೆ ಗೈರು : ಮಕ್ಕಳಿಗೆ ಕೇಶಮುಂಡನ ಶಿಕ್ಷೆ?
ಬೆಂಗಳೂರು, ಫೆ.2 : ತರಗತಿಗೆ ಗೈರು ಹಾಜರಾದ ಮಕ್ಕಳಿಗೆ ಹಾಸ್ಟೆಲ್ ವಾರ್ಡನ್ ಕೇಶಮುಂಡನ ಮಾಡಿ ಶಿಕ್ಷೆ ನೀಡಿದ್ದಾರೆ ಎಂದು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ವಿಠ್ಠಲ್ ಮಲ್ಯ ರಸ್ತೆಯಲ್ಲಿನ ಸೇಂಟ್ ಜೋಸೆಫ್ ಇಂಡಿಯನ್ ಶಾಲೆಯ ಹಾಸ್ಟೆಲ್ನಲ್ಲಿ ಈ ಘಟನೆ ನಡೆದಿದೆ.
ಸಬಾಸ್ಟಿನ್ ಅಗಸ್ಟಿನ್ ಎಂಬುವರು ಕಬ್ಬನ್ಪಾರ್ಕ್ ಪೊಲೀಸ್ ಠಾಣೆಗೆ ದೂರು ಕೊಟ್ಟಿದ್ದು, ನನ್ನ ಇಬ್ಬರು ಮಕ್ಕಳು ಸೇರಿದಂತೆ 12 ಮಕ್ಕಳ ಕೇಶಮಂಡನ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ. ಹಾಸ್ಟೆಲ್ ವಾರ್ಡನ್ ಕಿರಣ್ ಕೇಶ ಮುಂಡನ ಮಾಡಿದ್ದಾರೆ ಎಂಬುದು ಆರೋಪ.

ಹೊಸೂರು ರಸ್ತೆಯ ಬೇಗೂರಿನ ನಿವಾಸಿಯಾದ ಸಬಾಸ್ಟಿಯನ್ ಅವರ ಇಬ್ಬರು ಮಕ್ಕಳು ಸೇಂಟ್ ಜೋಸೆಫ್ ಇಂಡಿಯನ್ ಶಾಲೆಯಲ್ಲಿ 8 ಮತ್ತು 10ನೇ ತರಗತಿ ಓದುತ್ತಿದ್ದಾರೆ. ಮಕ್ಕಳು ಶಾಲಾ ಆವರಣದಲ್ಲಿರುವ ಹಾಸ್ಟೆಲ್ನಲ್ಲಿದ್ದಾರೆ. [ಬೆಂಗಳೂರಿನಲ್ಲಿವೆ 1,266 ಅನಧಿಕೃತ ಶಾಲೆಗಳು]
ಜ.27ರಂದು ಇಬ್ಬರು ಶಾಲೆಗೆ ಗೈರು ಹಾಜರಾಗಿದ್ದರು ಮತ್ತು ಮೈದಾನದಲ್ಲಿ ಆಟವಾಡುತ್ತಿದ್ದರು. ಇದರಿಂದ ಕೋಪಗೊಂಡ ವಾರ್ಡನ್ ಕಿರಣ್, ಕೇಶಮುಂಡ ಮಾಡಿ ಶಿಕ್ಷೆ ನೀಡಿದ್ದಾರೆ ಎಂದು ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ. [ಉಗ್ರರನ್ನು ಬೂಟುಗಾಲಲ್ಲಿ ತುಳಿದ ಬೆಂಗಳೂರು ವಿದ್ಯಾರ್ಥಿಗಳು]
ತಲೆ ಹೊಟ್ಟು ಕಾರಣ ನೀಡಿದ ಶಾಲೆ : ಶಾಲಾ ಆಡಳಿತ ಮಂಡಳಿ ಸಬಾಸ್ಟಿಯನ್ ಆರೋಪವನ್ನು ತಳ್ಳಿ ಹಾಕಿದೆ. ವಿದ್ಯಾರ್ಥಿಗಳ ತಲೆಯಲ್ಲಿ ಹೊಟ್ಟು ಹಾಗೂ ಹೇನುಗಳು ಇದ್ದವು. ಇದರಿಂದ ಇತರ ಮಕ್ಕಳಿಗೆ ತೊಂದರೆ ಆಗಬಾರದು ಎಂಬ ಕಾರಣಕ್ಕೆ ಕೇಶಮಂಡನ ಮಾಡಲಾಗಿದೆ ಎಂದು ಸಮರ್ಥನೆ ನೀಡಿದೆ.
ಕೆಲವು ದಿನಗಳ ಹಿಂದೆ ನಡೆದ ವೇಲಾಂಕಣಿ ಉತ್ಸವಕ್ಕೆ ಹೋಗಿ ಬಂದಿದ್ದ ಮೂವರು ಮಕ್ಕಳ ತಲೆಯಲ್ಲಿ ಹೆಚ್ಚು ಹೇನುಗಳಾಗಿದ್ದವು. ಅಲ್ಲದೆ, ಸಬಾಸ್ಟಿನ್ ಅವರ ಮಕ್ಕಳು ಸೇರಿದಂತೆ ಐದು ವಿದ್ಯಾರ್ಥಿಗಳ ತಲೆಯಲ್ಲಿ ಹೊಟ್ಟಾಗಿತ್ತು. ಇದರಿಂದಾಗಿ ಕೇಶ ಮುಂಡನ ಮಾಡಲಾಗಿದೆ. ಇದನ್ನು ಶಿಕ್ಷೆ ಎಂದುಕೊಳ್ಳಬಾರದು ಎಂದು ಶಾಲೆಯ ಆಡಳಿತ ಮಂಡಳಿ ಹೇಳಿದೆ.
-
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ












Click it and Unblock the Notifications