ತರಗತಿಗೆ ಗೈರು : ಮಕ್ಕಳಿಗೆ ಕೇಶಮುಂಡನ ಶಿಕ್ಷೆ?
ಬೆಂಗಳೂರು, ಫೆ.2 : ತರಗತಿಗೆ ಗೈರು ಹಾಜರಾದ ಮಕ್ಕಳಿಗೆ ಹಾಸ್ಟೆಲ್ ವಾರ್ಡನ್ ಕೇಶಮುಂಡನ ಮಾಡಿ ಶಿಕ್ಷೆ ನೀಡಿದ್ದಾರೆ ಎಂದು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ವಿಠ್ಠಲ್ ಮಲ್ಯ ರಸ್ತೆಯಲ್ಲಿನ ಸೇಂಟ್ ಜೋಸೆಫ್ ಇಂಡಿಯನ್ ಶಾಲೆಯ ಹಾಸ್ಟೆಲ್ನಲ್ಲಿ ಈ ಘಟನೆ ನಡೆದಿದೆ.
ಸಬಾಸ್ಟಿನ್ ಅಗಸ್ಟಿನ್ ಎಂಬುವರು ಕಬ್ಬನ್ಪಾರ್ಕ್ ಪೊಲೀಸ್ ಠಾಣೆಗೆ ದೂರು ಕೊಟ್ಟಿದ್ದು, ನನ್ನ ಇಬ್ಬರು ಮಕ್ಕಳು ಸೇರಿದಂತೆ 12 ಮಕ್ಕಳ ಕೇಶಮಂಡನ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ. ಹಾಸ್ಟೆಲ್ ವಾರ್ಡನ್ ಕಿರಣ್ ಕೇಶ ಮುಂಡನ ಮಾಡಿದ್ದಾರೆ ಎಂಬುದು ಆರೋಪ.

ಹೊಸೂರು ರಸ್ತೆಯ ಬೇಗೂರಿನ ನಿವಾಸಿಯಾದ ಸಬಾಸ್ಟಿಯನ್ ಅವರ ಇಬ್ಬರು ಮಕ್ಕಳು ಸೇಂಟ್ ಜೋಸೆಫ್ ಇಂಡಿಯನ್ ಶಾಲೆಯಲ್ಲಿ 8 ಮತ್ತು 10ನೇ ತರಗತಿ ಓದುತ್ತಿದ್ದಾರೆ. ಮಕ್ಕಳು ಶಾಲಾ ಆವರಣದಲ್ಲಿರುವ ಹಾಸ್ಟೆಲ್ನಲ್ಲಿದ್ದಾರೆ. [ಬೆಂಗಳೂರಿನಲ್ಲಿವೆ 1,266 ಅನಧಿಕೃತ ಶಾಲೆಗಳು]
ಜ.27ರಂದು ಇಬ್ಬರು ಶಾಲೆಗೆ ಗೈರು ಹಾಜರಾಗಿದ್ದರು ಮತ್ತು ಮೈದಾನದಲ್ಲಿ ಆಟವಾಡುತ್ತಿದ್ದರು. ಇದರಿಂದ ಕೋಪಗೊಂಡ ವಾರ್ಡನ್ ಕಿರಣ್, ಕೇಶಮುಂಡ ಮಾಡಿ ಶಿಕ್ಷೆ ನೀಡಿದ್ದಾರೆ ಎಂದು ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ. [ಉಗ್ರರನ್ನು ಬೂಟುಗಾಲಲ್ಲಿ ತುಳಿದ ಬೆಂಗಳೂರು ವಿದ್ಯಾರ್ಥಿಗಳು]
ತಲೆ ಹೊಟ್ಟು ಕಾರಣ ನೀಡಿದ ಶಾಲೆ : ಶಾಲಾ ಆಡಳಿತ ಮಂಡಳಿ ಸಬಾಸ್ಟಿಯನ್ ಆರೋಪವನ್ನು ತಳ್ಳಿ ಹಾಕಿದೆ. ವಿದ್ಯಾರ್ಥಿಗಳ ತಲೆಯಲ್ಲಿ ಹೊಟ್ಟು ಹಾಗೂ ಹೇನುಗಳು ಇದ್ದವು. ಇದರಿಂದ ಇತರ ಮಕ್ಕಳಿಗೆ ತೊಂದರೆ ಆಗಬಾರದು ಎಂಬ ಕಾರಣಕ್ಕೆ ಕೇಶಮಂಡನ ಮಾಡಲಾಗಿದೆ ಎಂದು ಸಮರ್ಥನೆ ನೀಡಿದೆ.
ಕೆಲವು ದಿನಗಳ ಹಿಂದೆ ನಡೆದ ವೇಲಾಂಕಣಿ ಉತ್ಸವಕ್ಕೆ ಹೋಗಿ ಬಂದಿದ್ದ ಮೂವರು ಮಕ್ಕಳ ತಲೆಯಲ್ಲಿ ಹೆಚ್ಚು ಹೇನುಗಳಾಗಿದ್ದವು. ಅಲ್ಲದೆ, ಸಬಾಸ್ಟಿನ್ ಅವರ ಮಕ್ಕಳು ಸೇರಿದಂತೆ ಐದು ವಿದ್ಯಾರ್ಥಿಗಳ ತಲೆಯಲ್ಲಿ ಹೊಟ್ಟಾಗಿತ್ತು. ಇದರಿಂದಾಗಿ ಕೇಶ ಮುಂಡನ ಮಾಡಲಾಗಿದೆ. ಇದನ್ನು ಶಿಕ್ಷೆ ಎಂದುಕೊಳ್ಳಬಾರದು ಎಂದು ಶಾಲೆಯ ಆಡಳಿತ ಮಂಡಳಿ ಹೇಳಿದೆ.
-
SWR: ಏಪ್ರಿಲ್ 2-5 ಬೆಂಗಳೂರು, ಹುಬ್ಬಳ್ಳಿಯಿಂದ ವಿಶೇಷ ಎಕ್ಸ್ಪ್ರೆಸ್ ರೈಲು ಕಾರ್ಯಾಚರಣೆ, ವೇಳಾಪಟ್ಟಿ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ












Click it and Unblock the Notifications