ಶಂಕಿತ ಉಗ್ರ ಮೆಹದಿ ಬಂಧನ : ಟಾಪ್ 10 ಬೆಳವಣಿಗೆ
ಬೆಂಗಳೂರು, ಡಿ. 13: ಇಡೀ ದೇಶದ ನಿದ್ದೆಗೆಡಿಸಿದ್ದ ಪಶ್ಚಿಮ ಬಂಗಾಳ ಮೂಲದ ಶಂಕಿತ ಉಗ್ರ ಮೆಹದಿ ಮಸ್ರೂರ್ ಬಿಸ್ವಾಸ್ (24) ಬೆಂಗಳೂರು ಪೊಲೀಸ್ ಬಲೆಗೆ ಬೀಳುವ ಮೊದಲು ಹಾಗೂ ನಂತರದ ಟಾಪ್ 10 ಬೆಳವಣಿಗೆಗಳ ಕುರಿತು ಒಂದು ಸಮಗ್ರ ಪಕ್ಷಿನೋಟ ಇಲ್ಲಿದೆ.

- ವರ್ಷಗಳಿಂದ ಐಎಸ್ಐಎಸ್ ಪರ ಟ್ವಿಟ್ಟರ್ ಖಾತೆ ನಿರ್ವಹಿಸುತ್ತಿದ್ದ ಮೆಹದಿ ಕುರಿತು ಇಂಗ್ಲೆಂಡ್ ಮೂಲದ ಚಾನಲ್ 4 ನಿಂದ ಭಾರತಕ್ಕೆ ಮಾಹಿತಿ
- ತಕ್ಷಣ ಬೆಂಗಳೂರು ಪೊಲೀಸರಿಗೆ ಎನ್ಐಎ ಸಂಸ್ಥೆಯಿಂದ ಮಾಹಿತಿ ರವಾನೆ. [ಟ್ವಿಟ್ಟರ್ ಉಗ್ರನ ರಹಸ್ಯ ಬಯಲು]
- ವಿಷಯ ಬಯಲಾದದ್ದು ತಿಳಿದ ತಕ್ಷಣ ತನ್ನ ಟ್ವಿಟ್ಟರ್ ಖಾತೆ @shamiwitness ಅನ್ನು ಮೆಹದಿ ಅಳಿಸಿಹಾಕಿದ. ಚಾನಲ್ 4 ಜೊತೆ ಮಾತನಾಡಿ "ನನಗೆ ಸಾಯಲು ಇಷ್ಟವಿಲ್ಲ, ನಾನೇನೂ ತಪ್ಪು ಮಾಡಿಲ್ಲ, ನಾನು ಯಾವುದೇ ದೇಶದ ಕಾನೂನು ಉಲ್ಲಂಘಿಸಿಲ್ಲ" ಎಂದು ಸಮರ್ಥಿಸಿಕೊಂಡ [ಪೊಲೀಸರಿಗೆ ಮೆಹದಿ ಸಿಕ್ಕಿಬಿದ್ದಿದ್ದು ಹೇಗೆ?]
- ಮೆಹದಿ ಬಂಧನಕ್ಕೆ ಬೆಂಗಳೂರು ಸಿಸಿಬಿ ಪೊಲೀಸರಿಂದ ತಂಡ ರಚನೆ. ಜಾಲಹಳ್ಳಿಯ ಅಯ್ಯಪ್ಪನಗರದ ಅಪಾರ್ಟ್ಮೆಂಟ್ನಲ್ಲಿ ಶುಕ್ರವಾರ ರಾತ್ರಿ ಬಂಧನ
- ನನ್ನ ಟ್ವಿಟ್ಟರ್ ಖಾತೆ ಹ್ಯಾಕ್ ಆಗಿದೆ, ಐಎಸ್ಐಎಸ್ ಪರ ಸಂದೇಶ ರವಾನಿಸಿದ್ದು ನಾನಲ್ಲ ಎಂದು ಸಮರ್ಥನೆ. ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರಿಂದ ಶನಿವಾರ ಮಧ್ಯಾಹ್ನದವರೆಗೆ ವಿಚಾರಣೆ ಆರಂಭ
- ಮಗನ ಬಂಧನದಿಂದ ಅವಾಕ್ಕಾದ ತಂದೆ ಎಂ. ಬಿಸ್ವಾಸ್ರಿಂದ ಕೊಲ್ಕೊತ್ತದಲ್ಲಿ ಹೇಳಿದ್ದು ಹೀಗೆ - "ತನ್ನ ಖಾತೆ ಹ್ಯಾಕ್ ಆಗಿತ್ತು ಎಂದು ಮಗ ಹೇಳಿದ್ದಾನೆ. ನನ್ನ ಮಗನಿಗೆ ಐಎಸ್ಐಎಸ್ ಜೊತೆ ಸಂಪರ್ಕವಿತ್ತು ಎಂಬುದನ್ನು ನಾನು ನಂಬುವುದಿಲ್ಲ" [ಜಾಣ ಮೆಹದಿ ಪೊಲೀಸರ ಕಣ್ಣು ತಪ್ಪಿಸಿದ್ದು ಹೇಗೆ]
- ಐಎಸ್ಐಎಸ್ ಉಗ್ರರೊಂದಿಗೆ ಸಂಪರ್ಕ ಹೊಂದಿದ್ದನ್ನು ಪೊಲೀಸ್ ವಿಚಾರಣೆಯಲ್ಲಿ ಮೆಹದಿ ಬಾಯಿ ಬಿಟ್ಟ. ಭಾರತ ಬಿಟ್ಟು ಇತರ ದೇಶಗಳ ಅದರಲ್ಲಿಯೂ ಇಂಗ್ಲಿಷ್ ಬಲ್ಲ ಉಗ್ರರೊಂದಿಗೆ ಸಂಪರ್ಕ ಹೊಂದಿರುವುದನ್ನು, ಯುವಕರಿಗೆ ಐಎಸ್ಐಎಸ್ ಸೇರಲು ಒತ್ತಾಯಿಸಿದ್ದನ್ನು ಒಪ್ಪಿಕೊಂಡ.
- ಮಧ್ಯಾಹ್ನ ಮೆಹದಿ ಮಸ್ರೂರ್ ಬಿಸ್ವಾಸ್ನ ಬಂಧನವನ್ನು ಸುದ್ದಿಗೋಷ್ಠಿ ನಡೆಸಿ ಮಾಧ್ಯಮಕ್ಕೆ ಪೊಲೀಸ್ ಮಹಾನಿರ್ದೇಶಕ ಪಚಾವೋ ಹಾಗೂ ಬೆಂಗಳೂರು ಆಯುಕ್ತ ಎಂ.ಎನ್. ರೆಡ್ಡಿ ಅವರಿಂದ ಮಾಹಿತಿ [ಲಷ್ಕರ್ ದಾಳಿ ಎಚ್ಚರಿಕೆ, ದೆಹಲಿಯಲ್ಲಿ ಹೈ ಅಲರ್ಟ್]
- ಮೆಹದಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದ್ದು, ಸೆಕ್ಷನ್ 125 (ಭಾರತ ಸರ್ಕಾರದೊಂದಿಗೆ ಸ್ನೇಹ ಸಂಬಂಧ ಹೊಂದಿರುವ ಏಷ್ಯಾ ದೇಶದ ವಿರುದ್ಧ ಯುದ್ಧ ಘೋಷಣೆ ಮಾಡಿದ ಅಪರಾಧ), ಕಾನೂನು ಬಾಹಿರ ಚಟುವಟಿಕೆ ಹಾಗೂ ಸೆಕ್ಷನ್ 66 ಅಡಿ ಪ್ರಕರಣ
- ಮೆಹದಿ ಕೆಲಸ ಮಾಡುತ್ತಿದ್ದ ಐಟಿಸಿ ಲಿ. ಕೋಲ್ಕತ್ತ ಉನ್ನತಾಧಿಕಾರಿಗಳಿಂದ ಬೆಂಗಳೂರು ಪೊಲೀಸರಿಗೆ ತನಿಖೆಯಲ್ಲಿ ಸಹಕಾರ ನೀಡುವುದಾಗಿ ಪತ್ರಿಕಾ ಪ್ರಕಟಣೆ ಬಿಡುಗಡೆ
More From
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications