Breaking; ಕೆಂಪೇಗೌಡರ ಪ್ರತಿಮೆ ನೋಡಲು ಹೋದವರಿಗೆ ನಿರಾಸೆ
ಬೆಂಗಳೂರು, ನವೆಂಬರ್ 13; ಭಾರತದ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಬೆಂಗಳೂರಿನಲ್ಲಿ ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸಿದ್ದರು. ಭಾನುವಾರ ಪ್ರತಿಮೆ ನೋಡಲು ಹೋದ ಜನರಿಗೆ ನಿರಾಸೆ ಕಾದಿತ್ತು.
ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪ 'ಪ್ರಗತಿಯ ಪ್ರತಿಮೆ' ಎಂದೇ ಕರೆಯಲ್ಪಡುವ ನಾಡಪ್ರಭು ಕೆಂಪೇಗೌಡರ 108 ಎತ್ತರದ ಪ್ರತಿಮೆ ಇದೆ. ಭಾನುವಾರ ರಜೆ ದಿನವಾದ ಕಾರಣ ನೂರಾರು ಜನರು ಪ್ರತಿಮೆ ನೋಡಲು ಆಗಮಿಸಿದ್ದರು.
ಪ್ರತಿಮೆಯ ಸಮೀಪ ಭಾನುವಾರ ಜನರನ್ನು ಬಿಡಲಿಲ್ಲ. ಗೇಟ್ ಹಾಕಲಾಗಿದ್ದು, ಪ್ರತಿಮೆ ನೋಡಲು ಹೋದ ಜನರು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು. ಗೇಟ್ ಹಾಕುವುದಿದ್ದರೆ ಉದ್ಘಾಟನೆ ಮಾಡಿದ್ದು ಯಾಕೆ? ಎಂದು ಪ್ರಶ್ನಿಸಿದರು.

ಕೆಂಪೇಗೌಡ ಪ್ರತಿಮೆಯ ಸಮೀಪ ಇನ್ನೂ ಕಾಮಗಾರಿ ಪೂರ್ಣಗೊಂಡಿಲ್ಲ. ಆದ್ದರಿಂದ ಪ್ರತಿಮೆ ಲೋಕಾರ್ಪಣೆಗೊಂಡರೂ ಸಹ ಭಾನುವಾರ ಜನರನ್ನು ಸಮೀಪಕ್ಕೆ ಬಿಟ್ಟಿಲ್ಲ. ಆದರೆ ಈ ಬಗ್ಗೆ ಸರಿಯಾದ ಮಾಹಿತಿ ನೀಡದ ಕಾರಣ ಜನರು ಆಕ್ರೋಶ ವ್ಯಕ್ತಪಡಿಸಿದರು.
ಬೆಂಗಳೂರು ನಗರದ ನಿಮ್ರಾತೃ ನಾಡಪ್ರಭು ಕೆಂಪೇಗೌಡರ ಕೊಡುಗೆಯನ್ನು ಸ್ಮರಿಸಲು ಕೆಂಪೇಗೌಡ ಪ್ರತಿಮೆ ನಿರ್ಮಾಣ ಮಾಡಲಾಗಿದೆ. ಗುಜರಾತ್ನಲ್ಲಿ ಏಕತಾ ಪ್ರತಿಮೆ ಯೋಜನೆಯ ಉಸ್ತುವಾರಿವಹಿಸಿಕೊಂಡಿದ್ದ ರಾಮ್ ವಿ ಸುತಾರ್ ಅವರ ಪರಿಕಲ್ಪನೆ ಮತ್ತು ಕೆತ್ತನೆಯಲ್ಲಿ 98 ಟನ್ ಕಂಚು ಮತ್ತು 120 ಟನ್ ಉಕ್ಕಿನಿಂದ ಈ ಪ್ರತಿಮೆ ನಿರ್ಮಾಣ ಮಾಡಲಾಗಿದೆ.
ನಾಡಪ್ರಭು ಕೆಂಪೇಗೌಡರ ಪ್ರತಿಮೆ ಈಗಾಗಲೇ ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್ ಸೇರಿದೆ. ನಗರವನ್ನು ನಿರ್ಮಾಣ ಮಾಡಿದವರ ಮೊದಲ ಹಾಗೂ ಅತ್ಯಂತ ಎತ್ತರದ ಕಂಚಿನ ಪ್ರತಿಮೆ ಇದಾಗಿದೆ. ಈ ಪ್ರತಿಮೆ ಸಮೀಪವೇ ಕೆಂಪೇಗೌಡ ಥೀಮ್ ಪಾರ್ಕ್ ಸಹ 23 ಎಕರೆ ಪ್ರದೇಶದಲ್ಲಿ ನಿರ್ಮಾಣವಾಗಲಿದೆ. ಇದಕ್ಕೆ ಸಹ ಪ್ರಧಾನಿ ನರೇಂದ್ರ ಮೋದಿ ಶಂಕುಸ್ಥಾಪನೆ ಮಾಡಿದ್ದಾರೆ.
-
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications