ಮೂರು ತಿಂಗಳ ಕಾಲ ಬೆಂಗಳೂರಿನ ಟೌನ್ ಹಾಲ್ ಬಂದ್
ಬೆಂಗಳೂರು, ಜೂ. 25 : ಬೆಂಗಳೂರಿನ ಟೌನ್ ಹಾಲ್ ನಲ್ಲಿ ಇನ್ನು ಮೂರು ತಿಂಗಳ ಕಾಲ ಯಾವುದೇ ಕಾರ್ಯಕ್ರಮ ನಡೆಯುವುದಿಲ್ಲ. ಬೃಹತ್ ಬೆಂಗಳೂರು ಮಹಾನಗರ ಪಾಲಿಕ ಸುಮಾರು ನಾಲ್ಕು ಕೋಟಿ ವೆಚ್ಚದಲ್ಲಿ ಟೌನ್ ಹಾಲ್ ನವೀಕರಣ ಕಾಮಗಾರಿ ಕೈಗೊಂಡಿದ್ದು, ಬುಧವಾರದಿಂದ ಈ ಕಾಮಗಾರಿ ಆರಂಭಗೊಂಡಿದೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕೈಗೊಂಡಿರುವ ಕಾಮಗಾರಿಗೆ ಬುಧವಾರ ಮೇಯರ್ ಕಟ್ಟೆ ಸತ್ಯನಾರಾಯಣ ಚಾಲನೆ ನೀಡಿದ್ದಾರೆ. ಸುಮಾರು ಮೂರು ತಿಂಗಳಿನಲ್ಲಿ ಈ ಕಾಮಗಾರಿ ಪೂರ್ಣಗೊಳ್ಳಲಿದ್ದು, ಅಲ್ಲಿಯ ತನಕ ಟೌನ್ ಹಾಲ್ ನಲ್ಲಿ ಯಾವುದೇ ಕಾರ್ಯಕ್ರಮಗಳು ನಡೆಯುವುದಿಲ್ಲ.

ಸುಮಾರು 4.92 ಕೋಟಿ ರೂ. ವೆಚ್ಚದಲ್ಲಿ ಬಿಬಿಎಂಪಿ ಈ ನವೀಕರಣ ಕಾಮಗಾರಿಯನ್ನು ಕೈಗೊಂಡಿದೆ. 1935ರಲ್ಲಿ ಟೌನ್ ಹಾಲ್ ನಿರ್ಮಾಣವಾದ ನಂತರ ಹಲವಾರು ಸಾಂಸ್ಕೃತಿಕ, ಧಾರ್ಮಿಕ, ಮನರಂಜನೆ ಕಾರ್ಯಕ್ರಮಗಳಿಗೆ ಸಾಕ್ಷಿಯಾಗಿರುವ ಟೌನ್ ಹಾಲ್ ನಲ್ಲಿ ಮುಂದಿನ ಮೂರು ತಿಂಗಳ ಕಾಲ ಯಾವುದೇ ಕಾರ್ಯಕ್ರಮ ಇರುವುದಿಲ್ಲ.
ಟೌನ್ ಹಾಲ್ ಕಾಮಗಾರಿಯ ಬಗ್ಗೆ ಮೊದಲೇ ಯೋಜನೆ ರೂಪಿಸಿದ್ದ ಬಿಬಿಎಂಪಿ ಕಳೆದ ಕೆಲವು ತಿಂಗಳಿನಿಂದ ಟೌನ್ ಹಾಲ್ ನಲ್ಲಿನ ಕಾರ್ಯಕ್ರಮಗಳ ಬುಕ್ಕಿಂಗ್ ರದ್ದುಗೊಳಿಸುತ್ತು. ಸದ್ಯ ಮೊದಲೇ ಬುಕ್ ಆಗಿದ್ದ ಎಲ್ಲಾ ಕಾರ್ಯಕ್ರಮಗಳು ಮುಗಿದಿದ್ದು, ನವೀಕರಣ ಕಾರ್ಯಕ್ಕೆ ಚಾಲನೆ ಸಿಕ್ಕಿದೆ.
ಬ್ರಿಟಿಷ್ ಬ್ರಾಡ್ ಕಾಸ್ಟಿಂಗ್ ಕನ್ಸಲ್ಟನ್ಸಿ ಎಂಬ ಕಂಪನಿಗೆ ಟೌನ್ ಹಾಲ್ ನವೀಕರಣದ ಕಾಮಗಾರಿಯ ಟೆಂಡರ್ ನೀಡಲಾಗಿದೆ. ಸುಮಾರು 4.92 ಕೋಟಿ ರೂ. ವೆಚ್ಚದ ಈ ಕಾಮಗಾರಿ ಸುಮಾರು ಮೂರು ತಿಂಗಳಿನಲ್ಲಿ ಪೂರ್ಣಗೊಳ್ಳುವ ಸಾಧ್ಯತೆ ಇದ್ದು, ನಂತರ ಟೌನ್ ಹಾಲ್ ನಲ್ಲಿ ಕಾರ್ಯಕ್ರಮಗಳು ಪುನಃ ಆರಂಭವಾಗಲಿವೆ.
ಏನು ಕಾಮಗಾರಿಗಳು : ಟೌನ್ ಹಾಲ್ ನಲ್ಲಿ ಹಲವಾರು ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತದೆ. ಮುಖ್ಯವಾಗಿ, ಧ್ವನಿವರ್ಧಕ ವ್ಯವಸ್ಥೆ, ಗೋಡೆಗಳ ಪಾಸ್ಟಿಂಕ್ ಕಾರ್ಯ, ಬೆಳಕಿನ ವ್ಯವಸ್ಥೆ, ಟೈಲ್ಸ್ ಗಳ ಬದಲಾವಣೆ ಮುಂತಾದ ಕಾಮಗಾರಿಗಳು ನಡೆಯಲಿವೆ. [ಕೆನರಾ ಬ್ಯಾಂಕಿಗೆ ಟೌನ್ ಹಾಲ್ ಅಡವಿಡಲು ಬಿಬಿಎಂಪಿ ಸಜ್ಜು?]
ಉಳಿದಂತೆ ಸೀಟುಗಳನ್ನು ಸರಿಪಡಿಸುವುದು, ಹಮಾನಿಯಂತ್ರಿತ ವ್ಯವಸ್ಥೆ ಮುಂತಾದವುಗಳು ಆಧುನೀಕರಣಗೊಳ್ಳಲಿವೆ. ಒಟ್ಟಾರೆ ಮೂರು ತಿಂಗಳ ಕಾಮಗಾರಿ ಪೂರ್ಣಗೊಂಡ ನಂತರ ಟೌನ್ ಹಾಲ್ ಆಧುನಿಕವಾಗಿ ಸಿಂಗಾರಗೊಂಡು ಜಗಮಗಿಸಲಿದೆ.
ಟೌನ್ ಹಾಲ್ ಕುರಿತು : ಬೆಂಗಳೂರಿನ ಪ್ರಮುಖ ಆಕರ್ಷಣೆಗಳಲ್ಲಿ ನಗರದ ಹೃದಯ ಭಾಗದಲ್ಲಿರುವ ಟೌನ್ ಹಾಲ್ ಸಹ ಒಂದಾಗಿದೆ.ಬೆಂಗಳೂರು ನಗರಸಭೆ ಅಧ್ಯಕ್ಷರಾಗಿದ್ದ ಪುಟ್ಟಣ್ಣ ಚೆಟ್ಟಿ ಅವರ ಹೆಸರನ್ನು ಇದಕ್ಕೆ ಇಡಲಾಗಿದ್ದು (ಟೌನ್ ಹಾಲ್) ಎಂದು ಪ್ರಸಿದ್ಧಿಯಾಗಿದೆ.
1933ರ ಮಾರ್ಚ್ 6ರಂದು ಮೈಸೂರಿನ ಶ್ರೀ ಕೃಷ್ಣ ರಾಜೇಂದ್ರ ಒಡೆಯರ್ ಟೌನ್ ಹಾಲ್ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದರು. ಸೆಪ್ಟೆಂಬರ್ 11, 1935ರಂದು ಇದರ ನಿರ್ಮಾಣ ಕಾರ್ಯ ಪೂರ್ಣಗೊಂಡಿತು. 1976, 1990ರಲ್ಲಿ ಇದನ್ನು ನವೀಕರಣ ಮಾಡಲಾಗಿದೆ. ಎರಡು ಅಂತಸ್ತಿನ ಟೌನ್ ಹಾಲ್ ನಲ್ಲಿ 1038 ಆಸನ ವ್ಯವಸ್ಥೆ ಇದೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications