ಮೂರು ತಿಂಗಳ ಕಾಲ ಬೆಂಗಳೂರಿನ ಟೌನ್ ಹಾಲ್ ಬಂದ್
ಬೆಂಗಳೂರು, ಜೂ. 25 : ಬೆಂಗಳೂರಿನ ಟೌನ್ ಹಾಲ್ ನಲ್ಲಿ ಇನ್ನು ಮೂರು ತಿಂಗಳ ಕಾಲ ಯಾವುದೇ ಕಾರ್ಯಕ್ರಮ ನಡೆಯುವುದಿಲ್ಲ. ಬೃಹತ್ ಬೆಂಗಳೂರು ಮಹಾನಗರ ಪಾಲಿಕ ಸುಮಾರು ನಾಲ್ಕು ಕೋಟಿ ವೆಚ್ಚದಲ್ಲಿ ಟೌನ್ ಹಾಲ್ ನವೀಕರಣ ಕಾಮಗಾರಿ ಕೈಗೊಂಡಿದ್ದು, ಬುಧವಾರದಿಂದ ಈ ಕಾಮಗಾರಿ ಆರಂಭಗೊಂಡಿದೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕೈಗೊಂಡಿರುವ ಕಾಮಗಾರಿಗೆ ಬುಧವಾರ ಮೇಯರ್ ಕಟ್ಟೆ ಸತ್ಯನಾರಾಯಣ ಚಾಲನೆ ನೀಡಿದ್ದಾರೆ. ಸುಮಾರು ಮೂರು ತಿಂಗಳಿನಲ್ಲಿ ಈ ಕಾಮಗಾರಿ ಪೂರ್ಣಗೊಳ್ಳಲಿದ್ದು, ಅಲ್ಲಿಯ ತನಕ ಟೌನ್ ಹಾಲ್ ನಲ್ಲಿ ಯಾವುದೇ ಕಾರ್ಯಕ್ರಮಗಳು ನಡೆಯುವುದಿಲ್ಲ.

ಸುಮಾರು 4.92 ಕೋಟಿ ರೂ. ವೆಚ್ಚದಲ್ಲಿ ಬಿಬಿಎಂಪಿ ಈ ನವೀಕರಣ ಕಾಮಗಾರಿಯನ್ನು ಕೈಗೊಂಡಿದೆ. 1935ರಲ್ಲಿ ಟೌನ್ ಹಾಲ್ ನಿರ್ಮಾಣವಾದ ನಂತರ ಹಲವಾರು ಸಾಂಸ್ಕೃತಿಕ, ಧಾರ್ಮಿಕ, ಮನರಂಜನೆ ಕಾರ್ಯಕ್ರಮಗಳಿಗೆ ಸಾಕ್ಷಿಯಾಗಿರುವ ಟೌನ್ ಹಾಲ್ ನಲ್ಲಿ ಮುಂದಿನ ಮೂರು ತಿಂಗಳ ಕಾಲ ಯಾವುದೇ ಕಾರ್ಯಕ್ರಮ ಇರುವುದಿಲ್ಲ.
ಟೌನ್ ಹಾಲ್ ಕಾಮಗಾರಿಯ ಬಗ್ಗೆ ಮೊದಲೇ ಯೋಜನೆ ರೂಪಿಸಿದ್ದ ಬಿಬಿಎಂಪಿ ಕಳೆದ ಕೆಲವು ತಿಂಗಳಿನಿಂದ ಟೌನ್ ಹಾಲ್ ನಲ್ಲಿನ ಕಾರ್ಯಕ್ರಮಗಳ ಬುಕ್ಕಿಂಗ್ ರದ್ದುಗೊಳಿಸುತ್ತು. ಸದ್ಯ ಮೊದಲೇ ಬುಕ್ ಆಗಿದ್ದ ಎಲ್ಲಾ ಕಾರ್ಯಕ್ರಮಗಳು ಮುಗಿದಿದ್ದು, ನವೀಕರಣ ಕಾರ್ಯಕ್ಕೆ ಚಾಲನೆ ಸಿಕ್ಕಿದೆ.
ಬ್ರಿಟಿಷ್ ಬ್ರಾಡ್ ಕಾಸ್ಟಿಂಗ್ ಕನ್ಸಲ್ಟನ್ಸಿ ಎಂಬ ಕಂಪನಿಗೆ ಟೌನ್ ಹಾಲ್ ನವೀಕರಣದ ಕಾಮಗಾರಿಯ ಟೆಂಡರ್ ನೀಡಲಾಗಿದೆ. ಸುಮಾರು 4.92 ಕೋಟಿ ರೂ. ವೆಚ್ಚದ ಈ ಕಾಮಗಾರಿ ಸುಮಾರು ಮೂರು ತಿಂಗಳಿನಲ್ಲಿ ಪೂರ್ಣಗೊಳ್ಳುವ ಸಾಧ್ಯತೆ ಇದ್ದು, ನಂತರ ಟೌನ್ ಹಾಲ್ ನಲ್ಲಿ ಕಾರ್ಯಕ್ರಮಗಳು ಪುನಃ ಆರಂಭವಾಗಲಿವೆ.
ಏನು ಕಾಮಗಾರಿಗಳು : ಟೌನ್ ಹಾಲ್ ನಲ್ಲಿ ಹಲವಾರು ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತದೆ. ಮುಖ್ಯವಾಗಿ, ಧ್ವನಿವರ್ಧಕ ವ್ಯವಸ್ಥೆ, ಗೋಡೆಗಳ ಪಾಸ್ಟಿಂಕ್ ಕಾರ್ಯ, ಬೆಳಕಿನ ವ್ಯವಸ್ಥೆ, ಟೈಲ್ಸ್ ಗಳ ಬದಲಾವಣೆ ಮುಂತಾದ ಕಾಮಗಾರಿಗಳು ನಡೆಯಲಿವೆ. [ಕೆನರಾ ಬ್ಯಾಂಕಿಗೆ ಟೌನ್ ಹಾಲ್ ಅಡವಿಡಲು ಬಿಬಿಎಂಪಿ ಸಜ್ಜು?]
ಉಳಿದಂತೆ ಸೀಟುಗಳನ್ನು ಸರಿಪಡಿಸುವುದು, ಹಮಾನಿಯಂತ್ರಿತ ವ್ಯವಸ್ಥೆ ಮುಂತಾದವುಗಳು ಆಧುನೀಕರಣಗೊಳ್ಳಲಿವೆ. ಒಟ್ಟಾರೆ ಮೂರು ತಿಂಗಳ ಕಾಮಗಾರಿ ಪೂರ್ಣಗೊಂಡ ನಂತರ ಟೌನ್ ಹಾಲ್ ಆಧುನಿಕವಾಗಿ ಸಿಂಗಾರಗೊಂಡು ಜಗಮಗಿಸಲಿದೆ.
ಟೌನ್ ಹಾಲ್ ಕುರಿತು : ಬೆಂಗಳೂರಿನ ಪ್ರಮುಖ ಆಕರ್ಷಣೆಗಳಲ್ಲಿ ನಗರದ ಹೃದಯ ಭಾಗದಲ್ಲಿರುವ ಟೌನ್ ಹಾಲ್ ಸಹ ಒಂದಾಗಿದೆ.ಬೆಂಗಳೂರು ನಗರಸಭೆ ಅಧ್ಯಕ್ಷರಾಗಿದ್ದ ಪುಟ್ಟಣ್ಣ ಚೆಟ್ಟಿ ಅವರ ಹೆಸರನ್ನು ಇದಕ್ಕೆ ಇಡಲಾಗಿದ್ದು (ಟೌನ್ ಹಾಲ್) ಎಂದು ಪ್ರಸಿದ್ಧಿಯಾಗಿದೆ.
1933ರ ಮಾರ್ಚ್ 6ರಂದು ಮೈಸೂರಿನ ಶ್ರೀ ಕೃಷ್ಣ ರಾಜೇಂದ್ರ ಒಡೆಯರ್ ಟೌನ್ ಹಾಲ್ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದರು. ಸೆಪ್ಟೆಂಬರ್ 11, 1935ರಂದು ಇದರ ನಿರ್ಮಾಣ ಕಾರ್ಯ ಪೂರ್ಣಗೊಂಡಿತು. 1976, 1990ರಲ್ಲಿ ಇದನ್ನು ನವೀಕರಣ ಮಾಡಲಾಗಿದೆ. ಎರಡು ಅಂತಸ್ತಿನ ಟೌನ್ ಹಾಲ್ ನಲ್ಲಿ 1038 ಆಸನ ವ್ಯವಸ್ಥೆ ಇದೆ.
-
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ












Click it and Unblock the Notifications