ಯಶವಂತಪುರ ಮಾರುಕಟ್ಟೆ ಸ್ಥಳಾಂತರಕ್ಕೆ ಒತ್ತಡ: ವರ್ತಕರ ಆಕ್ರೋಶ
ಬೆಂಗಳೂರು, ಫೆಬ್ರವರಿ 13 : ಯಶವಂತಪುರ ಎಪಿಎಂಸಿ ಆಡಳಿತ ಮಂಡಳಿಯು ಈರುಳ್ಳಿ ಹಾಗೂ ಆಲೂಗಡ್ಡೆ ವ್ಯಾಪಾರಿಗಳನ್ನು ದಾಸನಪುರ ಮಾರುಕಟ್ಟೆಗೆ ಸ್ಥಳಾಂತರಿಸಲು ಮುಂದಾಗಿದ್ದಾರೆ. 30 ಮಳಿಗೆಗಳನ್ನು ಅಕ್ರಮವಾಗಿ ಹಂಚಿಕೆ ಮಾಡಿದೆ ಎಂದು ವರ್ತಕರು ಆರೋಪಿಸಿದ್ದಾರೆ.
ದಾಸನಪುರ ಮಾರುಕಟ್ಟೆಗೆ ಸ್ಥಳಾಂತರವಾಗುವಂತೆ ಈರುಳ್ಳಿ ಮತ್ತು ಆಲೂಗಡ್ಡೆ ವರ್ತಕರಿಗೆ ಎಪಿಎಂಸಿ ಅಧಿಕಾರಿಗಳು ಒತ್ತಡ ಹೇರುತ್ತಿದ್ದಾರೆ. ಮಳಿಗೆಗಳ ಪರವಾನಗಿ ನವೀಕರಿಸದೆ ಕಿರುಕುಳ ನೀಡುತ್ತಿದ್ದಾರೆ. ಆದರೆ, ಬಿಡಿಎ ಪ್ರದೇಶದ 70 ಮಳಿಗೆಗಳ ಪೈಕಿ 30 ಮಳಿಗೆಗಳನ್ನು ತಮಗೆ ಬೇಕಾದವರಿಗೆ ಅಕ್ರಮವಾಗಿ ಹಂಚಿದ್ದಾರೆ ಎಂದು ವರ್ತಕರು ದೂರಿದ್ದಾರೆ.
ಈಗಿರುವ ಆಡಳಿತ ಮಂಡಳಿಯ ಅಧಿಕಾರಾವಧಿ ಫೆ.24ರಂದು ಮುಗಿಯಲಿದೆ. ಎಪಿಎಂಸಿ ಯಾರ್ಡ್ ನಲ್ಲಿದ್ದ ಬಿಡಿಎ ಪ್ರದೇಶದ ಮಳಿಗೆಗಳ ಅಕ್ರಮ ಹಂಚಿಕೆ ಹಗರಣ ಮುಚ್ಚಿಹಾಕಲು, ಬಾಕಿ 29 ಮಳಿಗೆಗಳನ್ನು ಗುತ್ತಿಗೆ ಮತ್ತು ಮಾರಾಟ ನಿಯಮದ ಆಧಾರದಲ್ಲಿ ವಿತರಿಸಲು ಮುಂದಾಗಿದೆ.

ಜನವರಿ 29ರಂದು ಟೆಂಡರ್ ಪ್ರಕಟಣೆ ಹೊರಡಿಸಿದ್ದು, ಫೆ.21ರಂದು ಬಹಿರಂಗ ಹರಾಜು ನಡೆಸುತ್ತಿದೆ ಎಂದು ವರ್ತಕರು ಆರೋಪ ಮಾಡಿದ್ದಾರೆ. ಒಂದೊಂದು ಮಳಿಗೆಗೆ 10 ಲಕ್ಷ ರೂ ನಿಂದ 20 ಲಕ್ಷದವರೆಗೂ ಹಣ ಪಡೆದು ಗುಟ್ಟಾಗಿ ಹಂಚಿದ್ದಾರೆ. ಇದನ್ನು ರದ್ದುಪಡಿಸಬೇಕೆಂದು ಆಡಳಿತ ಮಂಡಳಿಗೆ ಎಚ್ಚರಿಕೆ ನೀಡಿದ್ದೇವೆ, ರದ್ದುಪಡಿಸದಿದ್ದರೆ ನ್ಯಾಯಾಲಯದ ಮೊರೆ ಹೋಗುತ್ತೇವೆ ಎಂದು ವರ್ತಕರು ತಿಳಿಸಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
RCB Vs SRH: ಎಸ್ಆರ್ಎಚ್ ವಿರುದ್ಧದ ಐಪಿಎಲ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕಿಂಗ್ ಕುರಿತು ಆರ್ಸಿಬಿ ಬಿಗ್ ಅಪ್ಡೇಟ್ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಜೋಶ್ ಹ್ಯಾಜಲ್ವುಡ್ ಔಟ್, 7 ಕೋಟಿಯ ಆಟಗಾರನಿಗಿಲ್ಲ ಸ್ಥಾನ; ಅಶ್ವಿನ್ ಹೇಳಿದ ಆರ್ಸಿಬಿ ಸಂಭಾವ್ಯ ಪ್ಲೇಯಿಂಗ್ 11 ಇಲ್ಲಿದೆ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್












Click it and Unblock the Notifications