Get Updates
Get notified of breaking news, exclusive insights, and must-see stories!

ನವೆಂಬರ್ 25ರಿಂದ ಬಸವನಗುಡಿಯಲ್ಲಿ ಸಾಂಪ್ರದಾಯಿಕ ಕಡಲೆಕಾಯಿ ಪರಿಷೆ

ಬೆಂಗಳೂರು, ನವೆಂಬರ್ 12: ಪ್ರತಿ ವರ್ಷ ಕಾರ್ತಿಕ ಸೋಮವಾರದಿಂದ ಆರಂಭಗೊಂಡು ಮೂರು ದಿನಗಳ ಕಾಲ ನಡೆಯುವ ಕಡೆಲೆಕಾಯಿ ಪರಿಷೆಗೆ ಬಸವನಗುಡಿಯಲ್ಲಿ ಸಿದ್ಧತೆ ಆರಂಭವಾಗಿದೆ.

ನವೆಂಬರ್ 25ರಿಂದ ಮೂರು ದಿನಗಳ ಕಾಲ ಪರಿಷೆ ನಡೆಯಲಿದೆ. ತುಮಕೂರು, ದೊಡ್ಡಬಳ್ಳಾಪುರ, ಗೌರಿಬಿದನೂರು, ಮಾಗಡಿ, ಕನಕಪುರ, ಕೋಲಾರ,ರಾಮನಗರ, ಚಿಕ್ಕಬಳ್ಳಾಪುರದಿಂದ ಕಡಲೆಕಾಯಿ ಬೆಂಗಳೂರಿಗೆ ಆಗಮಿಸಲಿದೆ.

ಕಡಲೆಕಾಯಿ ಸಾಕಷ್ಟು ವರ್ಷಗಳಿಂದ ನಡೆಯುತ್ತಿರುವ ಕಾರಣ ಉಪ ಚುನಾವಣೆಯ ನೀತಿ ಸಂಹಿತೆಯ ಅಡ್ಡಿ ಇಲ್ಲ.ಪರಿಷೆ ಸಿದ್ಧತೆಗಳ ಬಗ್ಗೆ ಈ ವಾರಾಂತ್ಯದಲ್ಲಿ ಸಂಬಂಧಪಟ್ಟ ಅಧಿಕಾರಿಗಳ ಜೊತೆ ಮಾತುಕತೆ ನಡೆಸಲಾಗುತ್ತದೆ. ಜೊತೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ಹೆಚ್ಚು ನಡೆಯಲಿವೆ ಎಂದು ಶಾಸಕ ಎಲ್.ಎ. ರವಿಸುಬ್ರಹ್ಮಣ್ಯ ತಿಳಿಸಿದ್ದಾರೆ.

Traditional Basavanagudi Kadalekai Parishe From November 25

ಪರಿಷೆಯಲ್ಲಿ 2 ಸಾವಿರಕ್ಕೂ ಹೆಚ್ಚು ಮಳಿಗೆಗಳು ಇರಲಿವೆ. ಕಳೆದ ವರ್ಷ ಏಳು ಲಕ್ಷ ಮಂದಿ ಭೇಟಿ ನೀಡಿರುವುದಾಗಿ ತಿಳಿಸಿದ್ದಾರೆ.ಈ ಬಾರಿ ಉತ್ತಮ ಮಳೆಯಾಗಿರುವುದರಿಂದ ಒಳ್ಳೆಯ ಕಡೆಲೆಕಾಯಿ ಪರಿಷೆಗೆ ಬರುವ ಸಾಧ್ಯತೆ ಇದೆ.

ಅಂದು ದೊಡ್ಡ ಗಣಪತಿ ಹಾಗೂ ಬಸವಣ್ಣನ ದರ್ಶನಕ್ಕೆ ಬರುವ ಭಕ್ತಾದಿಗಳೆಲ್ಲ ಕಡಲೆಕಾಯಿಯನ್ನು ಪ್ರಸಾದವಾಗಿ ನೀಡಲಾಗುತ್ತದೆ. ಪರಿಷೆಗೆ ಜನರನ್ನು ಆಕರ್ಷಿಸಲು ಉಯ್ಯಾಲೆ, ರಾಟೆ ಜೋಣೆ ನಡೆದಿದೆ.

ಮಕ್ಕಳ ಆಟದ ಸಾಮಗ್ರಿಗಳು, ಮನೆ ಹಾಗೂ ಮಹಿಳೆಯರ ಅಲಂಕಾರಿಕ ವಸ್ತುಗಳು, ಕಡಲೆಕಾಯಿ ವ್ಯಾಪಾರಿಗಳು ದೇವಸ್ಥಾನದೆಡೆಗೆನ ಪಾದಚಾರಿ ಮಾರ್ಗಗಳಲ್ಲಿ ಬೀಡುಬಿಟ್ಟಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+